AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಪಿ ಸಂಸದ ಸಂಜಯ್ ಸಿಂಗ್ ರಿಮಾಂಡ್‌ಗಾಗಿ ಇಡಿ ಮನವಿ; ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

Sanjay Singh: ಎಎಪಿಯ ಸಂಜಯ್ ಸಿಂಗ್ ಬಂಧನದ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್, ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸುತ್ತದೆ. ನಾವು ಈ ರೀತಿಯ ಚಟುವಟಿಕೆಯನ್ನು ಬಲವಾಗಿ ಖಂಡಿಸುತ್ತೇವೆ. ಇಡೀ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ತತ್ವಗಳು ಹೈಜಾಕ್ ಮಾಡಲಾಗಿದೆ. ಅವರು ಭಯಗೊಂಡಿದ್ದಾರೆ, ಅದಕ್ಕಾಗಿಯೇ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ಈ ರೀತಿಯ ಬೆದರಿಕೆ ಹಾಕುತ್ತಿದ್ದಾರೆ

ಎಎಪಿ ಸಂಸದ ಸಂಜಯ್ ಸಿಂಗ್ ರಿಮಾಂಡ್‌ಗಾಗಿ ಇಡಿ ಮನವಿ; ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ
ಸಂಜಯ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on: Oct 05, 2023 | 7:01 PM

ದೆಹಲಿ ಅಕ್ಟೋಬರ್ 05: ಆಮ್ ಆದ್ಮಿ ಪಕ್ಷದ ನಾಯಕ (Aam Aadmi Party) ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ (Sanjay Singh) ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಂದು (ಗುರುವಾರ) ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸಿಂಗ್ ಅವರನ್ನು 10 ದಿನಗಳ ಕಸ್ಟಡಿಗೆ ಕೋರಿ ಇಡಿ (ED) ಸಲ್ಲಿಸಿದ ಮನವಿಯ ಕುರಿತು ನ್ಯಾಯಾಲಯ ತನ್ನ ಆದೇಶವನ್ನು ಕಾಯ್ದಿರಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ ಬುಧವಾರ ಸಂಜೆ ಬಂಧಿಸಿದೆ.

ಸಿಂಗ್ ಬಂಧನದ ಹಿಂದೆ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಇದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವದ ಮೌಲ್ಯಗಳನ್ನು ಹೈಜಾಕ್ ಮಾಡಲಾಗಿದೆ: ಕೆ ಸಿ ವೇಣುಗೋಪಾಲ್

ಎಎಪಿಯ ಸಂಜಯ್ ಸಿಂಗ್ ಬಂಧನದ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಕೆ ಸಿ ವೇಣುಗೋಪಾಲ್, ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸುತ್ತದೆ. ನಾವು ಈ ರೀತಿಯ ಚಟುವಟಿಕೆಯನ್ನು ಬಲವಾಗಿ ಖಂಡಿಸುತ್ತೇವೆ. ಇಡೀ ಪ್ರಜಾಪ್ರಭುತ್ವ ಮೌಲ್ಯಗಳು ಮತ್ತು ತತ್ವಗಳು ಹೈಜಾಕ್ ಮಾಡಲಾಗಿದೆ. ಅವರು ಭಯಗೊಂಡಿದ್ದಾರೆ, ಅದಕ್ಕಾಗಿಯೇ ಅವರು ವಿರೋಧ ಪಕ್ಷದ ನಾಯಕರ ವಿರುದ್ಧ ಈ ರೀತಿಯ ಬೆದರಿಕೆ ಹಾಕುತ್ತಿದ್ದಾರೆ. ರಾಜ್ಯ ಅಥವಾ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಬೇಡಿ ಎಂದಿದ್ದಾರೆ.

ಕೇಂದ್ರೀಯ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಸಚಿನ್ ಪೈಲಟ್

ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್, ಆಪ್ ನಾಯಕ ಸಂಜಯ್ ಸಿಂಗ್ ಅವರನ್ನು ಹೇಗೆ ಬಂಧಿಸಲಾಯಿತು ಎಂಬುದನ್ನು ಇಡೀ ದೇಶವೇ ಗಮನಿಸುತ್ತಿದೆ ಎಂದು ಹೇಳಿದ್ದಾರೆ.

ನ್ಯೂಸ್‌ಕ್ಲಿಕ್ ಸಂಸ್ಥಾಪಕ-ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಎಎಪಿ ರಾಜ್ಯಸಭಾ ಸದಸ್ಯ ಸಿಂಗ್ ಅವರನ್ನು ತನಿಖಾ ಸಂಸ್ಥೆಗಳು ಬಂಧಿಸಿರುವುದನ್ನು ಉಲ್ಲೇಖಿಸಿ ಪೈಲಟ್ ಟೋಂಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನಿನ್ನೆ ನಡೆದ ಘಟನೆ ಮತ್ತು ಕೇಂದ್ರ ಸರ್ಕಾರವು ತನ್ನ ಏಜೆನ್ಸಿಗಳನ್ನು ದುರುಪಯೋಗಪಡಿಸಿಕೊಳ್ಳುವ ರೀತಿ ಈಗ ಎಲ್ಲರಿಗೂ ತಿಳಿದಿದೆ.

ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆ ನಡೆಸಿದ ಶೇ 90-95ರಷ್ಟು ದಾಳಿಗಳು ಮತ್ತು ಕ್ರಮಗಳು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡುವವರ ವಿರುದ್ಧ, ರಾಜಕೀಯದಲ್ಲಿ ಅವರ ವಿರೋಧಿಗಳ ವಿರುದ್ಧ ನಡೆಯುತ್ತಿದೆ ಎಂದು ಹೇಳಿದ್ದಾರೆ. “ದೇಶ ಈ ಸಂಪೂರ್ಣ ಸಂಚಿಕೆಯನ್ನು ವೀಕ್ಷಿಸುತ್ತಿದೆ. ಇದು ಸರಿಯಲ್ಲ ಎಂದು ನಾನು ನಂಬುತ್ತೇನೆ” ಎಂದು ಪೈಲಟ್ ಹೇಳಿದರು.

ಎಎಪಿ ನಾಯಕನ ಮೇಲಿನ ಎಲ್ಲಾ ಪ್ರಕರಣಗಳು ಸುಳ್ಳು: ಅರವಿಂದ ಕೇಜ್ರಿವಾಲ್

ಏಜೆನ್ಸಿಗಳು ತನಿಖೆ ನಡೆಸುತ್ತವೆ.ಆದರೆ ತನಿಖೆಯಿಂದ ಏನೂ ಹೊರಬರುವುದಿಲ್ಲ ಎಂದು ಎಎಪಿ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. “ಇದು ಸಮಯ ವ್ಯರ್ಥ. ಇಂದು ಸುಪ್ರೀಂಕೋರ್ಟ್ ಪ್ರಶ್ನೆಗಳನ್ನು ಕೇಳುತ್ತಿರುವ ರೀತಿ (ಮನೀಶ್ ಸಿಸೋಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ) ಇದು ಸುಳ್ಳು ಪ್ರಕರಣ ಎಂದು ತೋರಿಸುತ್ತದೆ, ”ಎಂದು ಕೇಜ್ರಿವಾಲ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ:ಮದ್ಯ ನೀತಿ ಪ್ರಕರಣದಲ್ಲಿ ಎಎಪಿಯನ್ನು ಆರೋಪಿ ಮಾಡಬೇಕೇ? ಕಾನೂನು ಸಲಹೆ ಪಡೆಯಲಿದೆ ತನಿಖಾ ಸಂಸ್ಥೆ

ಎಎಪಿ ಸಂಸದ ಲಂಚ ಪಡೆದಿದ್ದಾರೆ ಎಂದ ಬಿಜೆಪಿ

ಇಡಿ ತನಿಖೆಯ ಪ್ರಕಾರ ಸಜಯ್ ಸಿಂಗ್ ದಿನೇಶ್ ಅರೋರಾ ಮತ್ತು ಅಮಿತ್ ಅರೋರಾ ಅವರನ್ನು ಭೇಟಿಯಾಗುತ್ತಿದ್ದರು .ಅವರು ಸಂಜಯ್ ಸಿಂಗ್‌ಗೆ ₹ 2 ಕೋಟಿಯಿಂದ ₹ 3 ಕೋಟಿ ನೀಡಿದ್ದರ ಎಎಪಿ ನಾಯಕ ಮನೀಶ್ ಸಿಸೋಡಿಯಾ ಕೂಡ ಮದ್ಯದ ನೀತಿಯ ಅಕ್ರಮಗಳ ವಿಷಯದಲ್ಲಿ ಜೈಲಿನಲ್ಲಿದ್ದಾರೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯವು ಮುಂದಿನ ವಾರ ತನ್ನ ಆದೇಶವನ್ನು ಪ್ರಕಟಿಸುತ್ತದೆ ಎಂದು ಬಿಜೆಪಿ ಸಂಸದ ಪರ್ವೇಶ್ ಸಾಹಿಬ್ ಸಿಂಗ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ