AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಯ ಗೆಲುವು: ನ್ಯಾಯಾಧೀಶರ ಮುಂದೆಯೇ ವಿಚ್ಛೇದನ ಪತ್ರ ಹರಿದು ಗಂಡನನ್ನು ಅಪ್ಪಿಕೊಂಡ ಹೆಂಡತಿ

ದೆಹಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಅಪರೂಪದ ಘಟನೆ ನಡೆದಿದೆ. ತೀವ್ರ ಕೌಟುಂಬಿಕ ಬಿಕ್ಕಟ್ಟಿನಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ದಂಪತಿ, ಮಾವನ ಅನಾರೋಗ್ಯ ಸಂದರ್ಭದಲ್ಲಿ ಅಳಿಯ ತೋರಿದ ಪ್ರೀತಿ ಮತ್ತು ಕಾಳಜಿಯಿಂದಾಗಿ ಮನಸ್ಸು ಬದಲಾಯಿಸಿದ್ದಾರೆ. ನ್ಯಾಯಾಧೀಶರ ಎದುರೇ ಹೆಂಡತಿ ವಿಚ್ಛೇದನ ಪತ್ರಗಳನ್ನು ಹರಿದು ಗಂಡನನ್ನು ಅಪ್ಪಿಕೊಂಡಳು. ಪ್ರೀತಿ, ಅಹಂಕಾರವನ್ನು ಮೀರಿ ಸಂಬಂಧಗಳನ್ನು ಹೇಗೆ ಮರುಜೋಡಿಸಬಲ್ಲದು ಎಂಬುದಕ್ಕೆ ಇದೊಂದು ಅದ್ಭುತ ನಿದರ್ಶನ.

ಪ್ರೀತಿಯ ಗೆಲುವು: ನ್ಯಾಯಾಧೀಶರ ಮುಂದೆಯೇ ವಿಚ್ಛೇದನ ಪತ್ರ ಹರಿದು ಗಂಡನನ್ನು ಅಪ್ಪಿಕೊಂಡ  ಹೆಂಡತಿ
ಪತಿ-ಪತ್ನಿImage Credit source: X Account-Mrigendra Pratap Singh
ನಯನಾ ರಾಜೀವ್
|

Updated on:Jun 12, 2026 | 11:36 AM

Share

ನವದೆಹಲಿ, ಜೂನ್ 12: ಕೋಪ, ಅಹಂಕಾರ ಮತ್ತು ತಪ್ಪು ತಿಳಿವಳಿಕೆಗಳ ಮಧ್ಯೆ ಮುರಿದು ಬೀಳುವ ಹಂತ ತಲುಪಿರುವ ಸಂಬಂಧಗಳನ್ನು ಕೇವಲ ಒಂದು ಸಣ್ಣ ಗುಣ ಹೇಗೆ ಮರುಜೋಡಣೆ ಮಾಡಬಲ್ಲದು ಎಂಬುದಕ್ಕೆ ದೆಹಲಿಯ ಕೌಟುಂಬಿಕ ನ್ಯಾಯಾಲಯದಲ್ಲಿ ನಡೆದ ಈ ಅಪರೂಪದ, ಘಟನೆಯೇ ಸಾಕ್ಷಿ. ವಿಚ್ಛೇದನ(Divorce) ನೀಡಲು ಕೋರ್ಟ್ ಮೆಟ್ಟಿಲೇರಿದ್ದ ದಂಪತಿ, ನ್ಯಾಯಾಧೀಶರ ಮುಂದೆಯೇ ಪರಸ್ಪರ ಅಪ್ಪಿಕೊಂಡು ಒಂದಾದ ಸುಂದರ ಘಟನೆ ಇಲ್ಲಿದೆ.

2020 ರ ಮದುವೆ ಮತ್ತು ಕೌಟುಂಬಿಕ ಬಿರುಗಾಳಿ ದೊಡ್ಡ ಕನಸುಗಳೊಂದಿಗೆ 2020 ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಈ ದಂಪತಿ ನಡುವೆ, ಮದುವೆಯಾದ ಕೆಲವೇ ದಿನಗಳಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಭುಗಿಲೆದ್ದವು. ಜಗಳ ತಾರಕಕ್ಕೇರಿ ಪ್ರಕರಣ ಕೋರ್ಟ್ ತಲುಪಿತು. ಕಳೆದ ಕೆಲವು ಸಮಯದಿಂದ ಇಬ್ಬರ ನಡುವೆ ತೀವ್ರ ಕಾನೂನು ಹೋರಾಟ ನಡೆಯುತ್ತಿತ್ತು.

ಆದರೆ, ಮಗಳ ಸಂಸಾರ ಹಳಸುತ್ತಿರುವುದನ್ನು ಕಂಡು ಆಕೆಯ ವಯಸ್ಸಾದ ತಂದೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಮಗಳ ದುಃಖವನ್ನು ಸಹಿಸಲಾಗದೆ ಅವರು ಕೊನೆಗೊಂದು ದಿನ ತೀವ್ರವಾಗಿ ಅಸ್ವಸ್ಥಗೊಂಡು, ಆಸ್ಪತ್ರೆಯ ಐಸಿಯು (ICU) ಸೇರಿದರು.

ದ್ವೇಷ ಮರೆತು ಮಾವನಿಗೆ ‘ಮಗ’ನಾದ ಅಳಿಯ ಮಾವನ ಅನಾರೋಗ್ಯ ಮತ್ತು ಇಡೀ ಕುಟುಂಬದ ಕಷ್ಟದ ಪರಿಸ್ಥಿತಿಯ ವಿಷಯ ತಿಳಿದ ತಕ್ಷಣ, ಆ ಅಳಿಯ ಕೋರ್ಟ್, ಕೇಸ್ ಮತ್ತು ಎಲ್ಲಾ ದ್ವೇಷಗಳನ್ನು ಸಂಪೂರ್ಣವಾಗಿ ಬದಿಗಿಟ್ಟರು. ಒಂದು ಕ್ಷಣವೂ ವ್ಯರ್ಥ ಮಾಡದೆ ಆಸ್ಪತ್ರೆಗೆ ಧಾವಿಸಿದ ಆತ, ಬಿಕ್ಕಟ್ಟಿನ ಸಮಯದಲ್ಲಿ ಅಳಿಯನಾಗಿ ಅಲ್ಲ, ಒಬ್ಬ ಜವಾಬ್ದಾರಿಯುತ ಮಗನಾಗಿ ನಿಂತರು.

ಚಿಕಿತ್ಸೆಗೆ ಅಗತ್ಯವಿದ್ದ ಭಾರಿ ಮೊತ್ತದ ಹಣವನ್ನು ತಾನೇ ಸ್ವತಃ ವ್ಯವಸ್ಥೆ ಮಾಡಿದ್ದಲ್ಲದೆ, ಹಗಲಿರುಳು ಆಸ್ಪತ್ರೆಯಲ್ಲೇ ಇದ್ದು ವೈದ್ಯರೊಂದಿಗೆ ಮಾತನಾಡಿ ಮಾವನಿಗೆ ಅತ್ಯುತ್ತಮ ಚಿಕಿತ್ಸೆ ಸಿಗುವಂತೆ ನೋಡಿಕೊಂಡರು. ಕೋರ್ಟಿನಲ್ಲಿ ಎದುರಾಳಿಯಾಗಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ತಮ್ಮ ಪಾಲಿನ ದೇವದೂತನಂತೆ ಮಗನಾಗಿ ನಿಂತದ್ದನ್ನು ಕಂಡು ಹುಡುಗಿ ಮತ್ತು ಆಕೆಯ ಕುಟುಂಬದ ಕಣ್ಣುಗಳು ತೇವವಾದವು.

ಮತ್ತಷ್ಟು ಓದಿ: ದೃಢ ಸಂಕಲ್ಪಕ್ಕೆ ಸಂದ ಜಯ: ವಿಚ್ಛೇದನ, 23 ವರ್ಷಗಳ ಸುದೀರ್ಘ ಹೋರಾಟದ ಬಳಿಕ 85 ಕೋಟಿ ರೂ. ಜೀವನಾಂಶ ಪಡೆದ ವರ್ಷಾ

ಆಸ್ಪತ್ರೆಯ ಐಸಿಯುನಲ್ಲಿ ಬರೆಯಲಾದ ಈ ಪ್ರೀತಿಯ ಅಧ್ಯಾಯ, ಮರುದಿನ ಕೋರ್ಟ್ ರೂಮಿನಲ್ಲಿ ಒಂದು ಅದ್ಭುತ ದೃಶ್ಯಕ್ಕೆ ಕಾರಣವಾಯಿತು. ಪ್ರಕರಣದ ಮುಂದಿನ ವಿಚಾರಣೆಗಾಗಿ ನ್ಯಾಯಾಧೀಶರ ಮುಂದೆ ಫೈಲ್ ಬಂದಾಗ, ಇಡೀ ಕೋರ್ಟ್ ಬೆರಗಾಗುವಂತಹ ಘಟನೆ ನಡೆಯಿತು.

ವಕೀಲರು ತಮ್ಮ ವಾದ ಮಂಡಿಸಲು ಸಿದ್ಧರಾಗುತ್ತಿದ್ದಂತೆಯೇ, ಆ ಮಹಿಳೆ ಇದ್ದಕ್ಕಿದ್ದಂತೆ ಮುಂದೆ ಬಂದು, ತನ್ನ ಕೈಯಲ್ಲಿದ್ದ ವಿಚ್ಛೇದನ ಅರ್ಜಿ ಪತ್ರಗಳನ್ನು ಎಲ್ಲರ ಮುಂದೆಯೇ ಹರಿದು ಹಾಕಿದಳು. ಅಲ್ಲದೆ, ಓಡಿಹೋಗಿ ಕಣ್ಣೀರ ನಡುವೆಯೇ ತನ್ನ ಗಂಡನನ್ನು ಎಲ್ಲರ ಮುಂದೆ ಗಟ್ಟಿಯಾಗಿ ಅಪ್ಪಿಕೊಂಡಳು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:32 am, Fri, 12 June 26

Follow Us
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?