AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ಇಂದು ತೀರ್ಪು ಪ್ರಕಟ

MJ Akbar Defamation Case Against Priya Ramani | ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಲಿದೆ.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ಇಂದು ತೀರ್ಪು ಪ್ರಕಟ
ಎಂ.ಜೆ.ಅಕ್ಬರ್ ಮತ್ತು ಪ್ರಿಯಾ ರಮಣಿ
ಆಯೇಷಾ ಬಾನು
|

Updated on: Feb 10, 2021 | 7:15 AM

Share

ದೆಹಲಿ: ಪತ್ರಕರ್ತೆ ಪ್ರಿಯಾ ರಮಣಿ ವಿರುದ್ಧ ಕೇಂದ್ರ ಮಾಜಿ ಸಚಿವ ಎಂ.ಜೆ.ಅಕ್ಬರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸಲಿದೆ. ACMM ಕೋಟ್​​ ಜಡ್ಜ್​ ನ್ಯಾ.ರವೀಂದ್ರ ಕುಮಾರ್ ಪಾಂಡೆ ಬುಧವಾರ ಮಧ್ಯಾಹ್ನ 2.30ಕ್ಕೆ ಓಪನ್ ಕೋರ್ಟ್​ನಲ್ಲಿ ಎಲ್ಲರ ಸಂಮುಖದಲ್ಲಿ ತೀರ್ಪು ಪ್ರಕಟಿಸಲಿದ್ದಾರೆ. ಎರಡೂ ಕಕ್ಷಿದಾರರು ಈ ವಿಷಯದಲ್ಲಿ ಅಂತಿಮ ವಾದಗಳನ್ನು ಮುಕ್ತಾಯಗೊಳಿಸಿದ ನಂತರ ನ್ಯಾಯಾಲಯವು ಇತ್ತೀಚೆಗೆ ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಅದರ ತೀರ್ಪು ಹೊರ ಬೀಳಲಿದೆ.

ತನ್ನ ಪ್ರಕರಣವನ್ನು ಸಮರ್ಥಿಸಿಕೊಂಡ ರಮಣಿಯ ವಕೀಲ ಮತ್ತು ಹಿರಿಯ ವಕೀಲ ರೆಬೆಕಾ ಜಾನ್ ತನ್ನ ಕಕ್ಷಿದಾರರನ್ನು ಖುಲಾಸೆಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದಾರೆ, ಎಂ.ಜೆ.ಅಕ್ಬರ್ ಅವರ ವಕೀಲ ಮತ್ತು ಹಿರಿಯ ವಕೀಲೆ ಗೀತಾ ಲುಥ್ರಾ ಅವರು ರಮಣಿ ಅವರ ಆರೋಪದಿಂದಾಗಿ ಅವರ ಭವಿಷ್ಯಕ್ಕೆ ಕಳಂಕವಾಗಿದೆ ಎಂದು ಒತ್ತಿ ಹೇಳಿದರು.

ರಮಣಿ ಅವರ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಮತ್ತು ನ್ಯಾಯಾಲಯದ ನಿರ್ದೇಶನದ ಮೇರೆಗೆ ಅದನ್ನು ಸಕ್ರಿಯಗೊಳಿಸಬಹುದು ಎಂದು ಹಿರಿಯ ವಕೀಲ ಜಾನ್ ನ್ಯಾಯಾಲಯಕ್ಕೆ ತಿಳಿಸಿದರು.

ಎಂ.ಜೆ.ಅಕ್ಬರ್ ವಿರುದ್ಧ ಪ್ರಿಯಾ ರಮಣಿ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು. ನಂತರದ ದಿನಗಳಲ್ಲಿ ಅಕ್ಬರ್ ತಮ್ಮ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಪ್ರಿಯಾ ರಮಣಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

MJ ಅಕ್ಬರ್, ಪ್ರಿಯಾ ರಮಣಿ ಮಾನಹಾನಿ ಪ್ರಕರಣ: ರಾಜಿ ಸಾಧ್ಯತೆ ಪರಿಶೀಲಿಸಲು ಕೋರ್ಟ್​ ಸೂಚನೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ