AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶೇ.2.70ಕ್ಕೆ ಏರಿಕೆಯಾದ ಕೊರೊನಾ ಪಾಸಿಟಿವಿಟಿ ದರ; ಮಾಸ್ಕ್ ಕಡ್ಡಾಯವಲ್ಲ ಎಂದಿದ್ದೇ ಮುಳ್ಳಾಯ್ತಾ?

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟು ಯಾವುದೇ ನಿರ್ಬಂಧಗಳೂ ಇಲ್ಲ. ಹಾಗಿದ್ದಾಗ್ಯೂ ಮಾಸ್ಕ್ ಮಾತ್ರ ಕಡ್ಡಾಯವಾಗಿ ಧರಿಸಿ ಎಂದು ಕೇಂದ್ರ ಸರ್ಕಾರ ಹೇಳಿತ್ತು

ದೆಹಲಿಯಲ್ಲಿ ಶೇ.2.70ಕ್ಕೆ ಏರಿಕೆಯಾದ ಕೊರೊನಾ ಪಾಸಿಟಿವಿಟಿ ದರ; ಮಾಸ್ಕ್ ಕಡ್ಡಾಯವಲ್ಲ ಎಂದಿದ್ದೇ ಮುಳ್ಳಾಯ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Apr 12, 2022 | 10:45 PM

Share

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊವಿಡ್​ ಪಾಸಿಟಿವಿಟಿ ದರ ಶೇ 0.5ರಿಂದ ಶೇ.2.70ಕ್ಕೆ ಏರಿಕೆಯಾಗಿದೆ. ಒಂದೇ ವಾರದಲ್ಲಿ ಇಷ್ಟು ಏರಿಕೆಯಾಗಿದ್ದು ಸಹಜವಾಗಿಯೇ ಜನರಲ್ಲ ಆತಂಕ ಮೂಡಿಸಿದೆ. ಆದರೆ ವೈದ್ಯರು, ಆರೋಗ್ಯ ತಜ್ಞರು ಧೈರ್ಯ ಹೇಳುತ್ತಿದ್ದಾರೆ. ಯಾರೂ ಗಾಬರಿಯಾಗಬೇಡಿ, ಪ್ರತಿದಿನ ದಾಖಲಾಗುವ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯೇ ಇದೆ ಎಂದಿದ್ದಾರೆ.  ಜನರು ಜಾಗರೂಕರಾಗಿ ಇರಬೇಕು. ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನೂ ಕೈಗೊಳ್ಳಬೇಕು ಎಂದೂ ತಿಳಿಸಿದ್ದಾರೆ. ಫೆ.5ರಂದು ದೆಹಲಿಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.78ರಷ್ಟಿತ್ತು. ಅದಾದ ಎರಡು ತಿಂಗಳ ಬಳಿಕ ಈಗ ಮತ್ತೆ ಶೇ.2ರ ಮೇಲೆ ಏರಿದೆ.

ಪ್ರತಿದಿನ 130-150ರಷ್ಟು ಕೊರೊನಾ ಕೇಸ್​ಗಳು ಕಾಣಿಸಿಕೊಳ್ಳುತ್ತಿವೆ. ದಾಖಲಾಗುವ ಪ್ರಮಾಣದಲ್ಲಿ ಸಣ್ಣಮಟ್ಟದಲ್ಲಿ ಏರಿಕೆ ಕಾಣುತ್ತಿದೆ. ಹಾಗೆ ಕೆಲವು ದಿನಗಳಿಂದ ಪಾಸಿಟಿವಿಟಿ ರೇಟ್​ ಕೂಡ ಹೆಚ್ಚಾಗಿದೆ. ಈಗಂತೂ ಶೇ.2.70ಕ್ಕೆ ತಲುಪಿದೆ. ಹಾಗಿದ್ದಾಗ್ಯೂ ಯಾರೂ ಹೆದರುವ ಅಗತ್ಯವಿಲ್ಲ ಎಂದು ಫೋರ್ಟಿಸ್ ಆಸ್ಪತ್ರೆಯ ಡಾ. ರಿಚಾ ಸರೀನ್​ ತಿಳಿಸಿದ್ದಾರೆ. ಆದರೂ ಸದ್ಯ ಕೊರೊನಾದ ಎಕ್ಸ್​ಇ ರೂಪಾಂತರಿ ಭಯ ಕಾಡುತ್ತಿರುವ ಹಿನ್ನೆಲೆಯಲ್ಲಿ ಜನ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂಬುದು ತಜ್ಞರ ಅಭಿಪ್ರಾಯ.

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟು ಯಾವುದೇ ನಿರ್ಬಂಧಗಳೂ ಇಲ್ಲ. ಹಾಗಿದ್ದಾಗ್ಯೂ ಮಾಸ್ಕ್ ಮಾತ್ರ ಕಡ್ಡಾಯವಾಗಿ ಧರಿಸಿ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ದೆಹಲಿ ಸರ್ಕಾರ ಅದನ್ನೂ ಆಯ್ಕೆಗೆ ಬಿಟ್ಟಿತ್ತು. ಮಾಸ್ಕ್​ ಕಡ್ಡಾಯವಲ್ಲ, ಮಾಸ್ಕ್ ಧರಿಸದೆ ಇರುವವರಿಗೆ ದಂಡ ವಿಧಿಸುವುದಿಲ್ಲ ಎಂದು ಹೇಳಿತ್ತು. ದೆಹಲಿಯಲ್ಲಿ ಸೋಮವಾರ 137 ಹೊಸ ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.  ಇದೆಲ್ಲದರ ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಈ ಬಗ್ಗೆ ಮಾತನಾಡಿ, ದೆಹಲಿಯಲ್ಲಿನ ಕೊವಿಡ್ 19 ಪರಿಸ್ಥಿತಿ ಬಗ್ಗೆ ನಮ್ಮ ಸರ್ಕಾರ ಗಮನ ಹರಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಯಾವುದಕ್ಕೂ ಇರಲಿ ಎಂದು ಬಾಟಲಿಯಲ್ಲಿ ಮೂತ್ರ ಮಾಡಿಟ್ಟುಕೊಂಡಿದ್ದೆವು; ರೋಪ್​ ವೇದಲ್ಲಿ ಸಿಲುಕಿದವರ ಭಯಾನಕ ಅನುಭವ

Published On - 10:43 pm, Tue, 12 April 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್