AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಶೇ.2.70ಕ್ಕೆ ಏರಿಕೆಯಾದ ಕೊರೊನಾ ಪಾಸಿಟಿವಿಟಿ ದರ; ಮಾಸ್ಕ್ ಕಡ್ಡಾಯವಲ್ಲ ಎಂದಿದ್ದೇ ಮುಳ್ಳಾಯ್ತಾ?

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟು ಯಾವುದೇ ನಿರ್ಬಂಧಗಳೂ ಇಲ್ಲ. ಹಾಗಿದ್ದಾಗ್ಯೂ ಮಾಸ್ಕ್ ಮಾತ್ರ ಕಡ್ಡಾಯವಾಗಿ ಧರಿಸಿ ಎಂದು ಕೇಂದ್ರ ಸರ್ಕಾರ ಹೇಳಿತ್ತು

ದೆಹಲಿಯಲ್ಲಿ ಶೇ.2.70ಕ್ಕೆ ಏರಿಕೆಯಾದ ಕೊರೊನಾ ಪಾಸಿಟಿವಿಟಿ ದರ; ಮಾಸ್ಕ್ ಕಡ್ಡಾಯವಲ್ಲ ಎಂದಿದ್ದೇ ಮುಳ್ಳಾಯ್ತಾ?
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Apr 12, 2022 | 10:45 PM

Share

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊವಿಡ್​ ಪಾಸಿಟಿವಿಟಿ ದರ ಶೇ 0.5ರಿಂದ ಶೇ.2.70ಕ್ಕೆ ಏರಿಕೆಯಾಗಿದೆ. ಒಂದೇ ವಾರದಲ್ಲಿ ಇಷ್ಟು ಏರಿಕೆಯಾಗಿದ್ದು ಸಹಜವಾಗಿಯೇ ಜನರಲ್ಲ ಆತಂಕ ಮೂಡಿಸಿದೆ. ಆದರೆ ವೈದ್ಯರು, ಆರೋಗ್ಯ ತಜ್ಞರು ಧೈರ್ಯ ಹೇಳುತ್ತಿದ್ದಾರೆ. ಯಾರೂ ಗಾಬರಿಯಾಗಬೇಡಿ, ಪ್ರತಿದಿನ ದಾಖಲಾಗುವ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯೇ ಇದೆ ಎಂದಿದ್ದಾರೆ.  ಜನರು ಜಾಗರೂಕರಾಗಿ ಇರಬೇಕು. ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನೂ ಕೈಗೊಳ್ಳಬೇಕು ಎಂದೂ ತಿಳಿಸಿದ್ದಾರೆ. ಫೆ.5ರಂದು ದೆಹಲಿಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ.2.78ರಷ್ಟಿತ್ತು. ಅದಾದ ಎರಡು ತಿಂಗಳ ಬಳಿಕ ಈಗ ಮತ್ತೆ ಶೇ.2ರ ಮೇಲೆ ಏರಿದೆ.

ಪ್ರತಿದಿನ 130-150ರಷ್ಟು ಕೊರೊನಾ ಕೇಸ್​ಗಳು ಕಾಣಿಸಿಕೊಳ್ಳುತ್ತಿವೆ. ದಾಖಲಾಗುವ ಪ್ರಮಾಣದಲ್ಲಿ ಸಣ್ಣಮಟ್ಟದಲ್ಲಿ ಏರಿಕೆ ಕಾಣುತ್ತಿದೆ. ಹಾಗೆ ಕೆಲವು ದಿನಗಳಿಂದ ಪಾಸಿಟಿವಿಟಿ ರೇಟ್​ ಕೂಡ ಹೆಚ್ಚಾಗಿದೆ. ಈಗಂತೂ ಶೇ.2.70ಕ್ಕೆ ತಲುಪಿದೆ. ಹಾಗಿದ್ದಾಗ್ಯೂ ಯಾರೂ ಹೆದರುವ ಅಗತ್ಯವಿಲ್ಲ ಎಂದು ಫೋರ್ಟಿಸ್ ಆಸ್ಪತ್ರೆಯ ಡಾ. ರಿಚಾ ಸರೀನ್​ ತಿಳಿಸಿದ್ದಾರೆ. ಆದರೂ ಸದ್ಯ ಕೊರೊನಾದ ಎಕ್ಸ್​ಇ ರೂಪಾಂತರಿ ಭಯ ಕಾಡುತ್ತಿರುವ ಹಿನ್ನೆಲೆಯಲ್ಲಿ ಜನ ಕೆಲವು ನಿಯಮಗಳನ್ನು ಪಾಲಿಸುವುದು ಅಗತ್ಯ ಎಂಬುದು ತಜ್ಞರ ಅಭಿಪ್ರಾಯ.

ದೇಶದಲ್ಲಿ ಏಪ್ರಿಲ್​ 1ರಿಂದ ಕೊರೊನಾ ನಿಯಂತ್ರಣಕ್ಕೆ ಸಂಬಂಧಪಟ್ಟು ಯಾವುದೇ ನಿರ್ಬಂಧಗಳೂ ಇಲ್ಲ. ಹಾಗಿದ್ದಾಗ್ಯೂ ಮಾಸ್ಕ್ ಮಾತ್ರ ಕಡ್ಡಾಯವಾಗಿ ಧರಿಸಿ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ದೆಹಲಿ ಸರ್ಕಾರ ಅದನ್ನೂ ಆಯ್ಕೆಗೆ ಬಿಟ್ಟಿತ್ತು. ಮಾಸ್ಕ್​ ಕಡ್ಡಾಯವಲ್ಲ, ಮಾಸ್ಕ್ ಧರಿಸದೆ ಇರುವವರಿಗೆ ದಂಡ ವಿಧಿಸುವುದಿಲ್ಲ ಎಂದು ಹೇಳಿತ್ತು. ದೆಹಲಿಯಲ್ಲಿ ಸೋಮವಾರ 137 ಹೊಸ ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.  ಇದೆಲ್ಲದರ ಮಧ್ಯೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡ ಈ ಬಗ್ಗೆ ಮಾತನಾಡಿ, ದೆಹಲಿಯಲ್ಲಿನ ಕೊವಿಡ್ 19 ಪರಿಸ್ಥಿತಿ ಬಗ್ಗೆ ನಮ್ಮ ಸರ್ಕಾರ ಗಮನ ಹರಿಸುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಯಾವುದಕ್ಕೂ ಇರಲಿ ಎಂದು ಬಾಟಲಿಯಲ್ಲಿ ಮೂತ್ರ ಮಾಡಿಟ್ಟುಕೊಂಡಿದ್ದೆವು; ರೋಪ್​ ವೇದಲ್ಲಿ ಸಿಲುಕಿದವರ ಭಯಾನಕ ಅನುಭವ

Published On - 10:43 pm, Tue, 12 April 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ