AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಳಿಮುಖವಾಗುತ್ತಿದೆ ಕೊರೊನಾ ಕೇಸ್​, ಪಾಸಿಟಿವಿಟಿ ರೇಟ್​; ನಿರ್ಬಂಧ ಸಡಿಲಿಕೆ ಬಗ್ಗೆ ಶೀಘ್ರ ನಿರ್ಧಾರ

ಶನಿವಾರ ಮಾತನಾಡಿದ್ದ ಸತ್ಯೇಂದ್ರ ಜೈನ್​, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊವಿಡ್​ 19 ಸೋಂಕು ಉತ್ತುಂಗದಲ್ಲಿದೆ. ಹೀಗಾಗಿ ನಿರ್ಬಂಧ ಸಡಿಲಿಸಲು ಸದ್ಯ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದಿದ್ದರು.

ದೆಹಲಿಯಲ್ಲಿ ಇಳಿಮುಖವಾಗುತ್ತಿದೆ ಕೊರೊನಾ ಕೇಸ್​, ಪಾಸಿಟಿವಿಟಿ ರೇಟ್​; ನಿರ್ಬಂಧ ಸಡಿಲಿಕೆ ಬಗ್ಗೆ ಶೀಘ್ರ ನಿರ್ಧಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 16, 2022 | 6:12 PM

Share

ದೆಹಲಿಯಲ್ಲಿ ಕೊವಿಡ್​ 19 ಪಾಸಿಟಿವಿಟಿ ರೇಟ್​ ಕಡಿಮೆಯಾಗಿದೆ. ಇಂದು ಸುಮಾರು 17 ಸಾವಿರ ಹೊಸ ಕೇಸ್​ಗಳು ದಾಖಲಾಗುವ ನಿರೀಕ್ಷೆ ಇದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್​ ತಿಳಿಸಿದ್ದಾರೆ. ಶನಿವಾರ ದೆಹಲಿಯಲ್ಲಿ 20,718 ಹೊಸ ಕೇಸ್​ಗಳು ದಾಖಲಾಗಿದ್ದವು. ಅದಕ್ಕೆ ಹೋಲಿಸಿದರೆ ಇಂದು ಸುಮಾರು 3000ಗಳಷ್ಟು ಕೇಸ್​ಗಳು ಕಡಿಮೆಯಾಗಲಿವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದಲೂ ದಿನನಿತ್ಯದ ಕೊರೊನಾ ಕೇಸ್​ಗಳು ಕಡಿಮೆಯಾಗುತ್ತಿವೆ. ಹಾಗೇ, ಜನವರಿ 15ರಂದು 67 ಸಾವಿರ ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದರು. 

ದೆಹಲಿಯಲ್ಲಿ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವೂ ಕಡಿಮೆಯಾಗುತ್ತಿದೆ.   ದೆಹಲಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕಾಗಿ ಹೇರಲಾಗಿದ್ದ ನಿರ್ಬಂಧಗಳು ಸೋಂಕಿನ ನಿಯಂತ್ರಣ ಮಾಡುತ್ತಿವೆ. ಈಗಾಗಲೇ ವಿಧಿಸಿರುವ ನಿರ್ಬಂಧಗಳನ್ನು ಮುಂದುವರಿಸಬೇಕಾ? ಸಡಿಲಿಸಬೇಕಾ? ಇನ್ನಷ್ಟು ಕಠಿಣಗೊಳಿಸಬೇಕಾ ಎಂಬುದನ್ನು ನಿರ್ಧರಿಸಲು, ಇನ್ನೂ ಮೂರು-ನಾಲ್ಕು ದಿನಗಳ ಕಾಲ ನಾವು ಪರಿಸ್ಥಿತಿ ಅವಲೋಕನ ಮಾಡುತ್ತೇವೆ ಎಂದೂ ತಿಳಿಸಿದರು.

ಶನಿವಾರ ಮಾತನಾಡಿದ್ದ ಸತ್ಯೇಂದ್ರ ಜೈನ್​, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊವಿಡ್​ 19 ಸೋಂಕು ಉತ್ತುಂಗದಲ್ಲಿದೆ. ಹೀಗಾಗಿ ನಿರ್ಬಂಧ ಸಡಿಲಿಸಲು ಸದ್ಯ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಒಂದೊಮ್ಮೆ ದೆಹಲಿಯಲ್ಲಿ ದಿನದಲ್ಲಿ ಪತ್ತೆಯಾಗುವ ಕೇಸ್​ನಲ್ಲಿ  15,000ದಷ್ಟು ಇಳಿಕೆಯಾದರೆ ನಾವು ಕೊವಿಡ್​ 19 ನಿರ್ಬಂಧ ಸಡಿಲಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು. ದೆಹಲಿಯಲ್ಲಿ ಶನಿವಾರ  20,718 ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಹಾಗೇ 30 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು. ದೈನಂದಿನ ಪಾಸಿಟಿವಿಟಿ ರೇಟ್​ 30.64 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಸ್ತಿನಾಪುರ ಕದನಕ್ಕೆ ಸಿದ್ಧ ಎಂದ ಕಾಂಗ್ರೆಸ್‌ನ ಅರ್ಚನಾ ಗೌತಮ್

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ