AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಳಿಮುಖವಾಗುತ್ತಿದೆ ಕೊರೊನಾ ಕೇಸ್​, ಪಾಸಿಟಿವಿಟಿ ರೇಟ್​; ನಿರ್ಬಂಧ ಸಡಿಲಿಕೆ ಬಗ್ಗೆ ಶೀಘ್ರ ನಿರ್ಧಾರ

ಶನಿವಾರ ಮಾತನಾಡಿದ್ದ ಸತ್ಯೇಂದ್ರ ಜೈನ್​, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊವಿಡ್​ 19 ಸೋಂಕು ಉತ್ತುಂಗದಲ್ಲಿದೆ. ಹೀಗಾಗಿ ನಿರ್ಬಂಧ ಸಡಿಲಿಸಲು ಸದ್ಯ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದಿದ್ದರು.

ದೆಹಲಿಯಲ್ಲಿ ಇಳಿಮುಖವಾಗುತ್ತಿದೆ ಕೊರೊನಾ ಕೇಸ್​, ಪಾಸಿಟಿವಿಟಿ ರೇಟ್​; ನಿರ್ಬಂಧ ಸಡಿಲಿಕೆ ಬಗ್ಗೆ ಶೀಘ್ರ ನಿರ್ಧಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 16, 2022 | 6:12 PM

Share

ದೆಹಲಿಯಲ್ಲಿ ಕೊವಿಡ್​ 19 ಪಾಸಿಟಿವಿಟಿ ರೇಟ್​ ಕಡಿಮೆಯಾಗಿದೆ. ಇಂದು ಸುಮಾರು 17 ಸಾವಿರ ಹೊಸ ಕೇಸ್​ಗಳು ದಾಖಲಾಗುವ ನಿರೀಕ್ಷೆ ಇದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್​ ತಿಳಿಸಿದ್ದಾರೆ. ಶನಿವಾರ ದೆಹಲಿಯಲ್ಲಿ 20,718 ಹೊಸ ಕೇಸ್​ಗಳು ದಾಖಲಾಗಿದ್ದವು. ಅದಕ್ಕೆ ಹೋಲಿಸಿದರೆ ಇಂದು ಸುಮಾರು 3000ಗಳಷ್ಟು ಕೇಸ್​ಗಳು ಕಡಿಮೆಯಾಗಲಿವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದಲೂ ದಿನನಿತ್ಯದ ಕೊರೊನಾ ಕೇಸ್​ಗಳು ಕಡಿಮೆಯಾಗುತ್ತಿವೆ. ಹಾಗೇ, ಜನವರಿ 15ರಂದು 67 ಸಾವಿರ ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದರು. 

ದೆಹಲಿಯಲ್ಲಿ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವೂ ಕಡಿಮೆಯಾಗುತ್ತಿದೆ.   ದೆಹಲಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕಾಗಿ ಹೇರಲಾಗಿದ್ದ ನಿರ್ಬಂಧಗಳು ಸೋಂಕಿನ ನಿಯಂತ್ರಣ ಮಾಡುತ್ತಿವೆ. ಈಗಾಗಲೇ ವಿಧಿಸಿರುವ ನಿರ್ಬಂಧಗಳನ್ನು ಮುಂದುವರಿಸಬೇಕಾ? ಸಡಿಲಿಸಬೇಕಾ? ಇನ್ನಷ್ಟು ಕಠಿಣಗೊಳಿಸಬೇಕಾ ಎಂಬುದನ್ನು ನಿರ್ಧರಿಸಲು, ಇನ್ನೂ ಮೂರು-ನಾಲ್ಕು ದಿನಗಳ ಕಾಲ ನಾವು ಪರಿಸ್ಥಿತಿ ಅವಲೋಕನ ಮಾಡುತ್ತೇವೆ ಎಂದೂ ತಿಳಿಸಿದರು.

ಶನಿವಾರ ಮಾತನಾಡಿದ್ದ ಸತ್ಯೇಂದ್ರ ಜೈನ್​, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊವಿಡ್​ 19 ಸೋಂಕು ಉತ್ತುಂಗದಲ್ಲಿದೆ. ಹೀಗಾಗಿ ನಿರ್ಬಂಧ ಸಡಿಲಿಸಲು ಸದ್ಯ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಒಂದೊಮ್ಮೆ ದೆಹಲಿಯಲ್ಲಿ ದಿನದಲ್ಲಿ ಪತ್ತೆಯಾಗುವ ಕೇಸ್​ನಲ್ಲಿ  15,000ದಷ್ಟು ಇಳಿಕೆಯಾದರೆ ನಾವು ಕೊವಿಡ್​ 19 ನಿರ್ಬಂಧ ಸಡಿಲಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು. ದೆಹಲಿಯಲ್ಲಿ ಶನಿವಾರ  20,718 ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಹಾಗೇ 30 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು. ದೈನಂದಿನ ಪಾಸಿಟಿವಿಟಿ ರೇಟ್​ 30.64 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಸ್ತಿನಾಪುರ ಕದನಕ್ಕೆ ಸಿದ್ಧ ಎಂದ ಕಾಂಗ್ರೆಸ್‌ನ ಅರ್ಚನಾ ಗೌತಮ್

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ