AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಇಳಿಮುಖವಾಗುತ್ತಿದೆ ಕೊರೊನಾ ಕೇಸ್​, ಪಾಸಿಟಿವಿಟಿ ರೇಟ್​; ನಿರ್ಬಂಧ ಸಡಿಲಿಕೆ ಬಗ್ಗೆ ಶೀಘ್ರ ನಿರ್ಧಾರ

ಶನಿವಾರ ಮಾತನಾಡಿದ್ದ ಸತ್ಯೇಂದ್ರ ಜೈನ್​, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊವಿಡ್​ 19 ಸೋಂಕು ಉತ್ತುಂಗದಲ್ಲಿದೆ. ಹೀಗಾಗಿ ನಿರ್ಬಂಧ ಸಡಿಲಿಸಲು ಸದ್ಯ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದಿದ್ದರು.

ದೆಹಲಿಯಲ್ಲಿ ಇಳಿಮುಖವಾಗುತ್ತಿದೆ ಕೊರೊನಾ ಕೇಸ್​, ಪಾಸಿಟಿವಿಟಿ ರೇಟ್​; ನಿರ್ಬಂಧ ಸಡಿಲಿಕೆ ಬಗ್ಗೆ ಶೀಘ್ರ ನಿರ್ಧಾರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 16, 2022 | 6:12 PM

Share

ದೆಹಲಿಯಲ್ಲಿ ಕೊವಿಡ್​ 19 ಪಾಸಿಟಿವಿಟಿ ರೇಟ್​ ಕಡಿಮೆಯಾಗಿದೆ. ಇಂದು ಸುಮಾರು 17 ಸಾವಿರ ಹೊಸ ಕೇಸ್​ಗಳು ದಾಖಲಾಗುವ ನಿರೀಕ್ಷೆ ಇದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಕುಮಾರ್ ಜೈನ್​ ತಿಳಿಸಿದ್ದಾರೆ. ಶನಿವಾರ ದೆಹಲಿಯಲ್ಲಿ 20,718 ಹೊಸ ಕೇಸ್​ಗಳು ದಾಖಲಾಗಿದ್ದವು. ಅದಕ್ಕೆ ಹೋಲಿಸಿದರೆ ಇಂದು ಸುಮಾರು 3000ಗಳಷ್ಟು ಕೇಸ್​ಗಳು ಕಡಿಮೆಯಾಗಲಿವೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಿನಗಳಿಂದಲೂ ದಿನನಿತ್ಯದ ಕೊರೊನಾ ಕೇಸ್​ಗಳು ಕಡಿಮೆಯಾಗುತ್ತಿವೆ. ಹಾಗೇ, ಜನವರಿ 15ರಂದು 67 ಸಾವಿರ ಮಂದಿಗೆ ಕೊರೊನಾ ಟೆಸ್ಟ್​ ಮಾಡಲಾಗಿದೆ ಎಂದೂ ಮಾಹಿತಿ ನೀಡಿದ್ದರು. 

ದೆಹಲಿಯಲ್ಲಿ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವೂ ಕಡಿಮೆಯಾಗುತ್ತಿದೆ.   ದೆಹಲಿಯಲ್ಲಿ ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕಾಗಿ ಹೇರಲಾಗಿದ್ದ ನಿರ್ಬಂಧಗಳು ಸೋಂಕಿನ ನಿಯಂತ್ರಣ ಮಾಡುತ್ತಿವೆ. ಈಗಾಗಲೇ ವಿಧಿಸಿರುವ ನಿರ್ಬಂಧಗಳನ್ನು ಮುಂದುವರಿಸಬೇಕಾ? ಸಡಿಲಿಸಬೇಕಾ? ಇನ್ನಷ್ಟು ಕಠಿಣಗೊಳಿಸಬೇಕಾ ಎಂಬುದನ್ನು ನಿರ್ಧರಿಸಲು, ಇನ್ನೂ ಮೂರು-ನಾಲ್ಕು ದಿನಗಳ ಕಾಲ ನಾವು ಪರಿಸ್ಥಿತಿ ಅವಲೋಕನ ಮಾಡುತ್ತೇವೆ ಎಂದೂ ತಿಳಿಸಿದರು.

ಶನಿವಾರ ಮಾತನಾಡಿದ್ದ ಸತ್ಯೇಂದ್ರ ಜೈನ್​, ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊವಿಡ್​ 19 ಸೋಂಕು ಉತ್ತುಂಗದಲ್ಲಿದೆ. ಹೀಗಾಗಿ ನಿರ್ಬಂಧ ಸಡಿಲಿಸಲು ಸದ್ಯ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ. ಒಂದೊಮ್ಮೆ ದೆಹಲಿಯಲ್ಲಿ ದಿನದಲ್ಲಿ ಪತ್ತೆಯಾಗುವ ಕೇಸ್​ನಲ್ಲಿ  15,000ದಷ್ಟು ಇಳಿಕೆಯಾದರೆ ನಾವು ಕೊವಿಡ್​ 19 ನಿರ್ಬಂಧ ಸಡಿಲಿಸುವ ಬಗ್ಗೆ ಯೋಚಿಸುತ್ತೇವೆ ಎಂದಿದ್ದರು. ದೆಹಲಿಯಲ್ಲಿ ಶನಿವಾರ  20,718 ಕೊರೊನಾ ಕೇಸ್​ಗಳು ದಾಖಲಾಗಿದ್ದವು. ಹಾಗೇ 30 ಮಂದಿ ಸೋಂಕಿನಿಂದ ಮೃತಪಟ್ಟಿದ್ದರು. ದೈನಂದಿನ ಪಾಸಿಟಿವಿಟಿ ರೇಟ್​ 30.64 ಇದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಹಸ್ತಿನಾಪುರ ಕದನಕ್ಕೆ ಸಿದ್ಧ ಎಂದ ಕಾಂಗ್ರೆಸ್‌ನ ಅರ್ಚನಾ ಗೌತಮ್

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ