AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹಕ್ಕೆ ದೊಡ್ಡ ಕಲ್ಲು ಕಟ್ಟಿ ಕಾಲುವೆಗೆ ಎಸೆಯಲಾಗಿತ್ತು, ನಾಪತ್ತೆಯಾಗಿ 5 ದಿನಗಳ ಬಳಿಕ ಯುವತಿಯ ಶವ ಪತ್ತೆ

ನಾಪತ್ತೆಯಾಗಿ ಐದು ದಿನಗಳ ಬಳಿಕ ದೆಹಲಿಯ ಚಾವ್ಲಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯುವತಿಯನ್ನು ಹಿಸುಕಿ ಕೊಂದು ಆಕೆಯ ದೇಹಕ್ಕೆ ದೊಡ್ಡ ಕಲ್ಲು ಕಟ್ಟಿ ಆಕೆಯ ಸ್ನೇಹಿತನೇ ಎಸೆದಿರುವ ವಿಚಾರ ಬೆಳಕಿಗೆ ಬಂದಿದೆ. ಈಶಾನ್ಯ ದೆಹಲಿಯ ಸೀಮಾಪುರಿಯ ಸುಂದರ್ ನಗರಿ ನಿವಾಸಿ ಕೋಮಲ್ ಅವರನ್ನು ಸ್ನೇಹಿತ ಆಸಿಫ್ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ದೇಹಕ್ಕೆ ದೊಡ್ಡ ಕಲ್ಲು ಕಟ್ಟಿ ಕಾಲುವೆಗೆ ಎಸೆಯಲಾಗಿತ್ತು, ನಾಪತ್ತೆಯಾಗಿ 5 ದಿನಗಳ ಬಳಿಕ ಯುವತಿಯ ಶವ ಪತ್ತೆ
ಕ್ರೈಂ
ನಯನಾ ರಾಜೀವ್
|

Updated on: Mar 20, 2025 | 12:31 PM

Share

ದೆಹಲಿ, ಮಾರ್ಚ್​ 20: ನಾಪತ್ತೆಯಾಗಿ ಐದು ದಿನಗಳ ಬಳಿಕ ದೆಹಲಿಯ ಚಾವ್ಲಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಯುವತಿಯನ್ನು ಹಿಸುಕಿ ಕೊಂದು ಆಕೆಯ ದೇಹಕ್ಕೆ ದೊಡ್ಡ ಕಲ್ಲು ಕಟ್ಟಿ ಆಕೆಯ ಸ್ನೇಹಿತನೇ ಎಸೆದಿರುವ ವಿಚಾರ ಬೆಳಕಿಗೆ ಬಂದಿದೆ. ಈಶಾನ್ಯ ದೆಹಲಿಯ ಸೀಮಾಪುರಿಯ ಸುಂದರ್ ನಗರಿ ನಿವಾಸಿ ಕೋಮಲ್ ಅವರನ್ನು ಸ್ನೇಹಿತ ಆಸಿಫ್ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಟ್ಯಾಕ್ಸಿ ಚಾಲಕ ಆಸಿಫ್ ಮಾರ್ಚ್ 12 ರಂದು ಸೀಮಾಪುರಿ ಪ್ರದೇಶದಿಂದ ಆಕೆಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದ. ಆದರೆ, ಪ್ರಯಾಣದ ಸಮಯದಲ್ಲಿ ಅವರ ನಡುವೆ ತೀವ್ರ ವಾಗ್ವಾದ ನಡೆಯಿತು. ನಂತರ ಆಸಿಫ್ ಕೋಮಲ್‌ಳನ್ನು ಕತ್ತು ಹಿಸುಕಿ ಕೊಂದು, ಆಕೆಯ ದೇಹವನ್ನು ತೇಲದಂತೆ ಬಂಡೆಗೆ ಕಟ್ಟಿ ಚಾವ್ಲಾ ಕಾಲುವೆಯಲ್ಲಿ ಎಸೆದಿದ್ದ.

ಮಾರ್ಚ್ 17 ರಂದು, ಕೊಳೆತ ಕಾರಣ ಕೋಮಲ್ ದೇಹವು ತೇಲಲಾರಂಭಿಸಿತ್ತು. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ನಂತರ ಚಾವ್ಲಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಕೋಮಲ್ ನಾಪತ್ತೆಯಾದ ನಂತರ ಮಾರ್ಚ್ 12 ರಂದು ಸೀಮಾಪುರಿ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ
Image
ದೆಹಲಿಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ
Image
ಇಬ್ಬರು ಹೆಂಡರ ನೀಚ ಗಂಡ: ಬಾಬುನ ಕ್ರೌರ್ಯಕ್ಕೆ ನರಳಿ ನರಳಿ ಪ್ರಾಣಬಿಟ್ಟಳು!
Image
ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ!
Image
ಮನೆಯ ಬಾವಿಯಲ್ಲಿ 4 ತಿಂಗಳ ಹೆಣ್ಣು ಮಗುವಿನ ಶವ ಪತ್ತೆ, ಕೊಂದಿದ್ಯಾರು?

ಮತ್ತಷ್ಟು ಓದಿ: Delhi Crime: ದೆಹಲಿಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

ಆಸಿಫ್ ನನ್ನು ಬಂಧಿಸಲಾಗಿದ್ದು, ಅಪರಾಧಕ್ಕೆ ಬಳಸಿದ್ದ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದಾರೆಯೇ ಎಂದು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

ಉತ್ತರ ಪ್ರದೇಶದದ ಮೀರತ್​ನಲ್ಲಿ ಮುಸ್ಕಾನ್ ಎಂಬಾಕೆ ತನ್ನ ಸ್ನೇಹಿತ ಸಾಹಿಲ್ ಜತೆ ಸೇರಿ ಪತಿ ಸೌರಭ್​ನನ್ನು ಹತ್ಯೆ ಮಾಡಿದ್ದಳು. ಬಳಿಕ ಹಲವಾರು ತುಂಡುಗಳಾಗಿ ಕತ್ತರಿಸಿ ಡ್ರಮ್​ನಲ್ಲಿರಿಸಿ ಅದಕ್ಕೆ ಸಿಮೆಂಟ್ ಬೆರೆಸಿ ಸೀಲ್ ಮಾಡಿದ್ದರು. ಅದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!