AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಣ್ಣೆ ಪಾರ್ಟಿಗೆಂದು ಕರೆದ್ರೆ, ಮನೆ ಮಾಲೀಕನ ಹೆಂಡತಿ ಜತೆಗೆ ಹೋಗಿ ಮಲಗಿದ ಬಾಡಿಗೆದಾರ, ಬರ್ಬರ ಕೊಲೆ

ಉತ್ತರ ದೆಹಲಿಯ ಗುಲಾಬಿ ನಗರದಲ್ಲಿ 17 ವರ್ಷದ ಜತಿನ್ ಎಂಬಾತನನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಕೊಲೆಗೆ ಕಾರಣ ಬಹಿರಂಗಗೊಂಡಿದೆ. ಅಂದು ರಾತ್ರಿ ಮಾಲೀಕ ಮುಖೇಶ್​ ಹಾಗೂ ಬಾಡಿಗೆದಾರ ಜಿತಿನ್ ಒಟ್ಟಿಗೆ ಮದ್ಯಪಾನ ಮಾಡಿದ್ದಾರೆ. ಮುಖೇಶ್​ಗೆ ಎಚ್ಚರವಾದಾಗ ಜಿತಿನ್ ತನ್ನ ಪತ್ನಿ ಜತೆ ಹಾಸಿಗೆಯಲ್ಲಿ ಮಲಗಿದ್ದನ್ನು ನೋಡಿ ಕೋಪಗೊಂಡು ಸಿಲಿಂಡರ್​ನಿಂದ ಹಲ್ಲೆ ನಡೆಸಿದ್ದಾನೆ, ಜಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಪೊಲೀಸರು 25 ವರ್ಷದ ಮುಖೇಶ್ ಠಾಕೂರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಎಣ್ಣೆ ಪಾರ್ಟಿಗೆಂದು ಕರೆದ್ರೆ, ಮನೆ ಮಾಲೀಕನ ಹೆಂಡತಿ ಜತೆಗೆ ಹೋಗಿ ಮಲಗಿದ ಬಾಡಿಗೆದಾರ, ಬರ್ಬರ ಕೊಲೆ
Crime
ನಯನಾ ರಾಜೀವ್
|

Updated on: May 23, 2025 | 12:49 PM

Share

ನವದೆಹಲಿ, ಮೇ 23: ಉತ್ತರ ದೆಹಲಿಯ ಗುಲಾಬಿ ನಗರದಲ್ಲಿ 17 ವರ್ಷದ ಜತಿನ್ ಎಂಬಾತನನ್ನು ಕ್ರೂರವಾಗಿ ಹತ್ಯೆ(Murder) ಮಾಡಲಾಗಿದೆ. ಕೊಲೆಗೆ ಕಾರಣ ಬಹಿರಂಗಗೊಂಡಿದೆ. ಅಂದು ರಾತ್ರಿ ಮಾಲೀಕ ಮುಖೇಶ್​ ಹಾಗೂ ಬಾಡಿಗೆದಾರ ಜಿತಿನ್ ಒಟ್ಟಿಗೆ ಮದ್ಯಪಾನ ಮಾಡಿದ್ದಾರೆ. ಮುಖೇಶ್​ಗೆ ಎಚ್ಚರವಾದಾಗ ಜಿತಿನ್ ತನ್ನ ಪತ್ನಿ ಜತೆ ಹಾಸಿಗೆಯಲ್ಲಿ ಮಲಗಿದ್ದನ್ನು ನೋಡಿ ಕೋಪಗೊಂಡು ಸಿಲಿಂಡರ್​ನಿಂದ ಹಲ್ಲೆ ನಡೆಸಿದ್ದಾನೆ, ಜಿತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಪೊಲೀಸರು 25 ವರ್ಷದ ಮುಖೇಶ್ ಠಾಕೂರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ.

ಮೇ 19 ರ ಸಂಜೆ ಮುಖೇಶ್ ಮತ್ತು ಜತಿನ್ ಮದ್ಯ ಸೇವಿಸುತ್ತಿದ್ದರು, ರಾತ್ರಿ ಮುಖೇಶ್ ಜತಿನ್ ಮತ್ತು ಅವರ ಪತ್ನಿ ಸುಧಾ ಅವರನ್ನು ಆಕ್ಷೇಪಾರ್ಹ ಸ್ಥಿತಿಯಲ್ಲಿ ನೋಡಿದರು. ಅದಾದ ಕೂಡಲೇ ಮೂವರ ನಡುವೆ ತೀವ್ರ ವಾಗ್ವಾದ ನಡೆಯಿತು. ಮರುದಿನ, ಮೇ 20 ರ ಬೆಳಗ್ಗೆ, ಸುಧಾ ಕಾರ್ಖಾನೆಗೆ ಕೆಲಸಕ್ಕೆ ಹೋಗಿದ್ದಳು. ಅದಾದ ನಂತರ, ಜತಿನ್ ಮತ್ತು ಮುಖೇಶ್ ನಡುವೆ ಮತ್ತೆ ಕಲಹ ಆರಂಭವಾಯಿತು. ಆ ಸಮಯದಲ್ಲಿ, ಮುಖೇಶ್ ಜತಿನ್ ಅವರಿಗೆ ಸಣ್ಣ ಗ್ಯಾಸ್ ಸಿಲಿಂಡರ್ ನಿಂದ ಹೊಡೆದಿದ್ದಾನೆ ಎಂದು ಆರೋಪಿಸಲಾಗಿದೆ. ಜತಿನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಮನೆಯ ಹೊರಗಿನ ಚರಂಡಿಯಲ್ಲಿ ರಕ್ತ ಕಂಡ ನಂತರ ಸ್ಥಳೀಯರು ಮೊದಲು ಮುಖೇಶ್ ಮನೆಗೆ ಕರೆ ಮಾಡಿದರು. ಆದರೆ ಮನೆ ಒಳಗಿನಿಂದ ಬೀಗ ಹಾಕಿದ್ದರಿಂದ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರು ಆಗಮಿಸಿ, ಬಾಗಿಲು ಒಡೆದು, ಜತಿನ್ ಅವರ ದೇಹವನ್ನು ಹೊರತೆಗೆದರು. ಮುಖೇಶ್ ದೇಹದ ಪಕ್ಕದಲ್ಲಿ ಕುಳಿತಿರುವುದು ಕಂಡುಬಂದಿತ್ತು. ವಿಚಾರಣೆ ನಡೆಸಿದ ನಂತರ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ
Image
ಪ್ರೀತಿ-ಪ್ರೇಮವೆಂದು ಸುತ್ತಾಡಿ ಕೈಕೊಟ್ಟ ಪ್ರೇಯಸಿ:ಪ್ರಾಣಕಳೆದುಕೊಂಡ ಪ್ರಿಯಕರ
Image
ತನ್ನ ಕುಟುಂಬ ಸದಸ್ಯರು, ಪ್ರೇಯಸಿ ಸೇರಿ ಐವರನ್ನು ಕೊಂದ ಅಫಾನ್
Image
ಪ್ರಿಯಕರ ಬೇರೊಬ್ಬಳ ಜತೆ ಮಾತನಾಡಿದ್ದಕ್ಕೆ ಪ್ರಿಯತಮೆ ಆತ್ಮಹತ್ಯೆ
Image
ಪ್ರೇಯಸಿ ಸಿಟ್ಟುಮಾಡಿಕೊಂಡು ಹೋಗಿದ್ದಕ್ಕೆ ಪ್ರಿಯಕರ ದುರಂತ ಸಾವು!

ಮತ್ತಷ್ಟು ಓದಿ: ಗಂಡನನ್ನು ಮರಕ್ಕೆ ಕಟ್ಟಿ ಹೊಡೆದು ಕೊಂದು, ಗಂಗಾ ನದಿಗೆ ಎಸೆದ ಹೆಂಡತಿ

ಜತಿನ್ 10 ದಿನಗಳ ಹಿಂದೆ ಕೆಲಸ ಹುಡುಕಿಕೊಂಡು ದೆಹಲಿಗೆ ಬಂದಿದ್ದ ಎಂದು ತಿಳಿದುಬಂದಿದೆ. ಜತಿನ್ ಠಾಕೂರ್ ಮುಖೇಶ್​ ಅವರ ಮನೆಯಲ್ಲಿ ಬಾಡಿಗೆದಾರನಾಗಿ ವಾಸಿಸಲು ಪ್ರಾರಂಭಿಸಿದರು. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿ ಮುಖೇಶ್ ನನ್ನು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಠಾಕೂರ್ ಸ್ಥಳದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ, ಪೊಲೀಸರು ಬರುವವರೆಗೂ ನೆರೆಹೊರೆಯವರು ಆತನನ್ನು ಹಿಡಿದಿಟ್ಟುಕೊಳ್ಳಲು ಯಶಸ್ವಿಯಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!