AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಡುಗೆ ಮಾಡೋ ಬಾಣಲೆಯಿಂದ ಹೊಡೆದು ಅಪ್ಪನನ್ನು ಕೊಂದ ಮಗಳು!

ದೆಹಲಿಯ ಶಹದಾರದಲ್ಲಿ 32 ವರ್ಷದ ಅವಿವಾಹಿತ ಮಗಳು ಅಡುಗೆ ಪ್ಯಾನ್‌ನಿಂದ ತಂದೆಯನ್ನು ಹೊಡೆದ ಕೊಂದ ಆರೋಪ ಕೇಳಿಬಂದಿದೆ. ಈ ಘಟನೆಯ ಸಮಯದಲ್ಲಿ ಮೃತ ವ್ಯಕ್ತಿಯ ಮಗಳು (32), ಹೆಂಡತಿ ಬಾಲಾ ದೇವಿ ಮತ್ತು ಸೊಸೆ ಪ್ರಿಯಾ (29) ಎಲ್ಲರೂ ಶಹದಾರದ ರಾಮನಗರದ ಬುಧ್ ಬಜಾರ್‌ನಲ್ಲಿರುವ ಮನೆಯಲ್ಲಿದ್ದರು. ಮೃತರ ಅವಿವಾಹಿತ ಮಗಳು ಅನು ತನ್ನ ಪೋಷಕರೊಂದಿಗೆ ವಾಸಿಸುತ್ತಿದ್ದಳು. ಆಕೆಯೇ ಈ ಕೊಲೆ ಮಾಡಿದ್ದಾಳೆ.

ಅಡುಗೆ ಮಾಡೋ ಬಾಣಲೆಯಿಂದ ಹೊಡೆದು ಅಪ್ಪನನ್ನು ಕೊಂದ ಮಗಳು!
Cooking Pan
ಸುಷ್ಮಾ ಚಕ್ರೆ
|

Updated on: Aug 06, 2025 | 10:37 PM

Share

ನವದೆಹಲಿ, ಆಗಸ್ಟ್ 6: ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು (Shocking News) ನಡೆದಿದೆ. ಇಂದು (ಆಗಸ್ಟ್ 6) ಮಧ್ಯಾಹ್ನ 3.56ರ ಸುಮಾರಿಗೆ ಮಗಳೇ ಅಪ್ಪನನ್ನು ಕೊಲೆ ಮಾಡಿದ್ದಾಳೆ. ದೆಹಲಿಯ ಎಂಎಸ್ ಪಾರ್ಕ್‌ನಲ್ಲಿರುವ ಜಿಟಿಬಿ ಆಸ್ಪತ್ರೆಗೆ ಚಂದ್ ಗೋಯಲ್ ಎಂಬ 55 ವರ್ಷದ ವ್ಯಕ್ತಿಯನ್ನು ಅವರ ಮಗ ಶಿವಂ ಪ್ರಜ್ಞಾಹೀನ ಮತ್ತು ಗಾಯಗೊಂಡ ಸ್ಥಿತಿಯಲ್ಲಿ ದಾಖಲಿಸಿದ್ದರು. ಆದರೆ, ಅದಾದ ಕೆಲವೇ ನಿಮಿಷಗಳಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಈ ಘಟನೆಯ ಸಮಯದಲ್ಲಿ ಕುಟುಂಬ ಸದಸ್ಯರು ಹಾಜರಿದ್ದರು.

ಶಿವಂ ಹೇಳಿಕೆಯ ಪ್ರಕಾರ, ಈ ಘಟನೆಯ ಸಮಯದಲ್ಲಿ ಅವರ ಸಹೋದರಿ ಅನು (32 ವರ್ಷ), ಅವರ ತಾಯಿ ಬಾಲಾ ದೇವಿ ಮತ್ತು ಅವರ ಪತ್ನಿ ಪ್ರಿಯಾ (29 ವರ್ಷ) ಎಲ್ಲರೂ ಶಹದಾರಾದ ರಾಮನಗರದ ಬುಧ್ ಬಜಾರ್‌ನಲ್ಲಿರುವ ತಮ್ಮ ಮನೆಯಲ್ಲಿದ್ದರು. ಶಿವಂ ಅವರ ಅಪ್ಪನೇ ಸಾವನ್ನಪ್ಪಿದ ವ್ಯಕ್ತಿ. ಶಿವಂ ಅವರ ಅವಿವಾಹಿತ ತಂಗಿ ಅನು ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದಳು.

ಇದನ್ನೂ ಓದಿ: ರಸ್ತೆ ಬದಿ ನಿಲ್ಲಿಸಿದ್ದ ಕಾರಿನೊಳಗೆ ಇಬ್ಬರು ಪುರುಷರ ನಿಗೂಢ ಸಾವು

ಶಿವಂ ಅವರ ಪತ್ನಿ ಪ್ರಿಯಾ ಅವರ ಹೇಳಿಕೆಯ ಆಧಾರದ ಮೇಲೆ, ತಂದೆ ಟೇಕ್ ಚಂದ್ ಗೋಯಲ್ ಅವರ ಮೇಲೆ ಅವರ ಮಗಳು ಅನು ಅಡುಗೆ ಮಾಡುವ ಬಾಣಲೆಯಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಲ್ಲೆಯಿಂದ ಚಂದ್ ಗೋಯಲ್ ಮಾರಣಾಂತಿಕ ಗಾಯಗಳಿಂದು ಕುಸಿದುಬಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಮೃತಪಟ್ಟಿದ್ದರು. ಅನು ತನ್ನ ತಂದೆಯನ್ನು ಕೊಲ್ಲಲು ಕಾರಣವೇನೆಂದು ತಿಳಿದುಬಂದಿಲ್ಲ.

ಆರೋಪಿ ಅನು ಅವರನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ಮುಂದುವರಿದಂತೆ ಸೂಕ್ತ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್