AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಮರ್ಯಾದಾ ಹತ್ಯೆ; ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ಅಪ್ಪ

ತಮ್ಮ ಜಾತಿಯವನನ್ನು ಬಿಟ್ಟು ಬೇರೆ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದಕ್ಕೆ ತಂದೆಯೇ ಮಗಳನ್ನು ಕೊಂದಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಈ ಮರ್ಯಾದಾ ಹತ್ಯೆಗೆ ದೆಹಲಿ ಬೆಚ್ಚಿಬಿದ್ದಿದೆ.

ದೆಹಲಿಯಲ್ಲಿ ಮರ್ಯಾದಾ ಹತ್ಯೆ; ಬೇರೆ ಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನೇ ಕೊಂದ ಅಪ್ಪ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jun 17, 2024 | 7:40 PM

Share

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಮಗಳನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಬಳಿಕ ಮಗಳ ಶವವನ್ನು ಜಮೀನಿನಲ್ಲಿ ಬಿಟ್ಟು ಹೋಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯಲ್ಲಿ (Delhi Crime News) ನಡೆದಿರುವ ಈ ಆಘಾತಕಾರಿ ಘಟನೆ (Shocking News) ರೋಹಿಣಿಯ ಕಂಝವಾಲಾ ಪ್ರದೇಶದಲ್ಲಿ ನಡೆದಿದೆ. ಕುಟುಂಬದವರ ಇಚ್ಛೆಗೆ ವಿರುದ್ಧವಾಗಿ ಅನ್ಯ ಜಾತಿಯ ವ್ಯಕ್ತಿಯನ್ನು ಮದುವೆಯಾಗಿದ್ದೇ ಈ ಭೀಕರ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ. 46 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ರೋಹಿಣಿ) ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಭಾನುವಾರ ಮಹಿಳೆಯ ಶವವು ರಕ್ತದ ಮಡುವಿನಲ್ಲಿ ಬಿದ್ದಿದ್ದು, ದೇಹದ ಮೇಲೆ ಸಾಕಷ್ಟು ಬಾರಿ ಇರಿದಿರುವ ಗಾಯಗಳಾಗಿತ್ತು. ಕಾಂಝಾವಾಲಾದ ಚಂದ್‌ಪುರ ಗ್ರಾಮದ ಕೃಷಿಭೂಮಿಯಲ್ಲಿ ಶವ ಪತ್ತೆಯಾಗಿತ್ತು. ರೋಹಿಣಿ ಉಪ ಪೊಲೀಸ್ ಆಯುಕ್ತ ಗುರಿಕ್ಬಾಲ್ ಸಿಂಗ್ ಸಿಧು ಅವರು 46 ವರ್ಷದ ಆರೋಪಿಯ ಬಂಧನವನ್ನು ಖಚಿತಪಡಿಸಿದ್ದಾರೆ. ಭಾನುವಾರ ರಾತ್ರಿ 8:53ಕ್ಕೆ ಈ ಕೊಲೆಯ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆ ಮಹಿಳೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಗಿದೆ.

ಇದನ್ನೂ ಓದಿ: Video Viral: ನಡುರಸ್ತೆಯಲ್ಲೇ ಯುವತಿಯ ವಿಚಿತ್ರ ಡ್ಯಾನ್ಸ್ ;ವಿಡಿಯೋ ವೈರಲ್​​

ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡವು ಮಹಿಳೆಯ ಕುತ್ತಿಗೆ ಮತ್ತು ಹೊಟ್ಟೆಯಲ್ಲಿ ಆಳವಾದ ಗಾಯಗಳಾಗಿದೆ ಎಂದು ಸಿಧು ಹೇಳಿದ್ದಾರೆ. ಆಕೆಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಪ್ರಕರಣದ ತನಿಖೆಗಾಗಿ ಅನೇಕ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸಲಾಗಿದೆ ಎಂದಿದ್ದಾರೆ.

ಅಪರಾಧ ನಡೆದಿದ್ದು ಹೇಗೆ?:

ಪೊಲೀಸರ ಪ್ರಕಾರ, ಆರೋಪಿ ತಂದೆ ಪ್ರೇಮ್ ನಗರದಲ್ಲಿರುವ ಅವರ ಮನೆಗೆ ಹೋಗಲು ಕ್ಯಾಬ್ ಬಾಡಿಗೆಗೆ ಪಡೆದಿದ್ದನು. ಆದರೆ ದಾರಿಯಲ್ಲಿ ಆಕೆಯ ಮದುವೆಯ ಬಗ್ಗೆ ಮಗಳೊಂದಿಗೆ ಜಗಳವಾಡಿದನು. ತಮ್ಮನ್ನು ಕಂಜ್ವಾಲಾದಲ್ಲಿ ಬಿಡುವಂತೆ ಚಾಲಕನಿಗೆ ಸೂಚಿಸಿದರು. ಆಗ ಅವರು ಅವಳನ್ನು ಜಮೀನಿಗೆ ಕರೆದೊಯ್ದು, ಕತ್ತು ಸೀಳಿ ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Viral News: 80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23ರ ಯುವತಿ, ಅಪರೂಪದ ಲವ್ ಸ್ಟೋರಿ 

ಈ ಕುಟುಂಬ ಬಿಹಾರದ ಮುಜಾಫರ್‌ಪುರ ಮೂಲದವರು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ಮುಜಾಫರ್‌ಪುರದಲ್ಲಿ ತನ್ನ ಮಗಳು ಅನ್ಯ ಜಾತಿಯ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು. ಆತನನ್ನೇ ಗುಟ್ಟಾಗಿ ಮದುವೆಯಾಗಿದ್ದಳು. ಈ ಮೂಲಕ ಕುಟುಂಬದ ಹೆಸರಿಗೆ ಕಳಂಕ ತಂದಿದ್ದಳು ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಕಾರು ಹಾಗೂ ಡಂಪರ್ ಟ್ರಕ್ ನಡುವೆ ಡಿಕ್ಕಿ, ಹೊತ್ತಿಕೊಂಡ ಬೆಂಕಿ
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ಸಿಎಂ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬರೋ ಸುಳಿವು
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ
ರಾಜ್​​ಕುಮಾರ್ 97ನೇ ಜನ್ಮದಿನ; ಆಚರಣೆಯಲ್ಲಿ ಸಿಎಂ, ಡಿಸಿಎಂ ಕೂಡ ಭಾಗಿ