AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ರೈಲ್ವೆ ನಿಲ್ದಾಣದ ಬಳಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ದೆಹಲಿಯ ರೈಲ್ವೆ ನಿಲ್ದಾಣವೊಂದರಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ನಿಲ್ದಾಣದ ಆವರಣದ ಬಳಿಯ ಪೊದೆಗಳ ಒಳಗೆ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಬ್ಜಿ ಮಂಡಿ ಪ್ರದೇಶದ ರೈಲ್ವೆ ಪೊಲೀಸರು ಕರೆ ಮಾಡಿ, ಆದರ್ಶ ನಗರ ರೈಲ್ವೆ ನಿಲ್ದಾಣದ ಶೆಡ್ ಸಂಖ್ಯೆ 2 ರ ಹಿಂದಿನ ಹಳಿಗಳ ಬಳಿ ಮಧ್ಯವಯಸ್ಕ ಮಹಿಳೆಯ ಶವ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದರು.

ದೆಹಲಿಯ ರೈಲ್ವೆ ನಿಲ್ದಾಣದ ಬಳಿ ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ
ಕ್ರೈಂ
ನಯನಾ ರಾಜೀವ್
|

Updated on: Nov 17, 2025 | 7:46 AM

Share

ನವದೆಹಲಿ, ನವೆಂಬರ್ 17: ದೆಹಲಿಯ ಆದರ್ಶ ನಗರ ರೈಲ್ವೆ ನಿಲ್ದಾಣದ ಬಳಿ ಮಹಿಳೆ(Woman)ಯ ಶವ ಪತ್ತೆಯಾಗಿದೆ. ದೇಹ ಅರೆನಗ್ನವಾಗಿದ್ದು, ಮುಖ, ದೇಹದ ತುಂಬೆಲ್ಲಾ ಗಾಯದ ಗುರುತುಗಳು ಕಂಡುಬಂದಿವೆ. ನಿಲ್ದಾಣದ ಆವರಣದ ಬಳಿಯ ಪೊದೆಗಳ ಒಳಗೆ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಬ್ಜಿ ಮಂಡಿ ಪ್ರದೇಶದ ರೈಲ್ವೆ ಪೊಲೀಸರು ಕರೆ ಮಾಡಿ, ಆದರ್ಶ ನಗರ ರೈಲ್ವೆ ನಿಲ್ದಾಣದ ಶೆಡ್ ಸಂಖ್ಯೆ 2 ರ ಹಿಂದಿನ ಹಳಿಗಳ ಬಳಿ ಮಧ್ಯವಯಸ್ಕ ಮಹಿಳೆಯ ಶವ ಪತ್ತೆಯಾಗಿದೆ ಎಂದು ಮಾಹಿತಿ ನೀಡಿದ್ದರು.

ಪೊಲೀಸ್ ತಂಡ ಸ್ಥಳಕ್ಕೆ ತಲುಪಿದಾಗ ಮಹಿಳೆ ಅರೆನಗ್ನ ಸ್ಥಿತಿಯಲ್ಲಿದ್ದರು, ಬಹು ಗಾಯದ ಗುರುತುಗಳು ಮತ್ತು ಮುಖ ಮತ್ತು ತಲೆಯ ಮೇಲೆ ಆಳವಾದ ಗಾಯಗಳಿದ್ದು, ಹರಿತವಾದ ಆಯುಧದಿಂದ ತಿವಿದಿರುವ ಶಂಕೆ ವ್ಯಕ್ತವಾಗಿದೆ.

ಮೃತ ಮಹಿಳೆಯ ಗುರುತು ಇನ್ನೂ ಸಿಕ್ಕಿಲ್ಲ, ಅವರು 40 ರಿಂದ 42 ವರ್ಷ ವಯಸ್ಸಿನವರಾಗಿದ್ದು, ಸುಮಾರು 5 ಅಡಿ ಎತ್ತರವಿದ್ದು, ಚಿಂದಿ ಆಯುವವ ಅಥವಾ ಅಲೆಮಾರಿ ಮಹಿಳೆಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಪೊಲೀಸರು ಸ್ಥಳದಿಂದ ಒಂದು ಆಯುಧವನ್ನು ವಶಪಡಿಸಿಕೊಂಡಿದ್ದಾರೆ. ಜೊತೆಗೆ ಮಹಿಳೆಯರು ಮತ್ತು ಪುರುಷರ ಚಪ್ಪಲಿಗಳನ್ನು ವಶಪಡಿಸಿಕೊಂಡಿದ್ದಾರೆ.

ಮಹಿಳೆಯ ಗುರುತು ಇನ್ನೂ ದೃಢಪಟ್ಟಿಲ್ಲ. ಆಕೆಯ ಕುಟುಂಬ ಅಥವಾ ಪರಿಚಯಸ್ಥರನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಪೊಲೀಸರು ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಅಪರಾಧದ ಸ್ಥಳವನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದ್ದಾರೆ. ಘಟನೆಗೂ ಮುನ್ನ ಮೃತ ವ್ಯಕ್ತಿಯ ಚಲನವಲನಗಳನ್ನು ಪತ್ತೆಹಚ್ಚಲು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ವಿಶ್ಲೇಷಿಸಲಾಗುತ್ತಿದೆ.

ಮತ್ತಷ್ಟು ಓದಿ: ಚರಂಡಿಯಲ್ಲಿ ಮಹಿಳೆಯ ತಲೆಯಿಲ್ಲದ ಬೆತ್ತಲೆ ಶವ ಪತ್ತೆ; ಬೆಚ್ಚಿಬಿದ್ದ ನೊಯ್ಡಾ

ಮಹೇಂದ್ರ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪ್ರಕರಣವನ್ನು ಭೇದಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ದೆಹಲಿಯಲ್ಲಿ ನವೆಂಬರ್ 10ರಂದು ಕೆಂಪುಕೋಟೆಯ ಬಳಿ ನಿಗೂಢ ಸ್ಫೋಟ ಸಂಭವಿಸಿತ್ತು, ಘಟನೆಯಲ್ಲಿ 10ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ