AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!
ಮನೀಷ್​ ಸಿಸೋಡಿಯಾ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 10, 2020 | 8:54 PM

Share

ದೆಹಲಿ: ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಇಂದು ಕೆಲ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ದಾಳಿ ನಡೆಸುವಾಗ ಮನೀಷ್​ ಸಿಸೋಡಿಯಾ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಅವರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಈ ದಾಳಿಯನ್ನು ಬಿಜೆಪಿಯವರೇ ಮಾಡಿದ್ದಾರೆ ಎನ್ನುವ ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್​, ಇದಕ್ಕೆ ದೆಹಲಿ ಪೊಲೀಸರ ಕುಮ್ಮಕ್ಕು ಕೂಡ ಇದೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅರವಿಂದ್ ಕೇಜ್ರಿವಾಲ್​, ಮನೀಷ್​ ಸಿಸೋಡಿಯಾ ಇಲ್ಲದಿರುವಾಗ ಗೂಂಡಾಗಳು ಮನೆಗೆ ಪ್ರವೇಶಿಸಿದ್ದಾರೆ. ಅಲ್ಲಿ ಪೊಲೀಸರು ಕೂಡ ಇದ್ದರು. ದೆಹಲಿಯಲ್ಲಿ ಬಿಜೆಪಿ ದಿನದಿಂದ ದಿನಕ್ಕೆ ಏಕೆ ಹತಾಶವಾಗುತ್ತಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಬಹುತೇಕ ಆಪ್​ ನಾಯಕರು ಇದೇ ಮಾದರಿಯ ಆರೋಪ ಮಾಡಿದ್ದಾರೆ. ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಆಪ್​ ವಕ್ತಾರ ಸೌರಭ್​ ಭಾರದ್ವಾಜ್​, ಸಿಸೋಡಿಯಾ ಮನೆಗೆ ಬಿಜೆಪಿ ಕಾರ್ಯಕರ್ತರು ಪ್ರವೇಶಿಸುವುದನ್ನು ಪೊಲೀಸರು ತಡೆದಿಲ್ಲ. ಬ್ಯಾರಿಕೇಡ್​ಗಳನ್ನು ಪೊಲೀಸರೇ ತೆಗೆದು ಹಾಕಿದ್ದರು ಎನ್ನುವ ಆರೋಪ ಹೊರಿಸಿದ್ದಾರೆ.

6 ಜನರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ದೆಹಲಿ ಪೊಲೀಸರು ಬಿಜೆಪಿ ಕೈಗೊಂಬೆ ಎಂದು ಆಪ್​ ಸರ್ಕಾರ ಈ ಮೊದಲಿನಿಂದಲೂ ಆರೋಪಿಸುತ್ತಲೇ ಬರುತ್ತಿದೆ. ಇದೇ ಆರೋಪವನ್ನು ಇಂದು ಕೂಡ ಮುಂದುವರಿಸಿದೆ. ಆದರೆ, ಇದು ಸುಳ್ಳು ಎಂದು ದೆಹಲಿ ಪೊಲೀಸ್​ ಸ್ಪಷ್ಟನೆ ನೀಡಿದೆ.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ