AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!
ಮನೀಷ್​ ಸಿಸೋಡಿಯಾ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 8:54 PM

Share

ದೆಹಲಿ: ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಇಂದು ಕೆಲ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ದಾಳಿ ನಡೆಸುವಾಗ ಮನೀಷ್​ ಸಿಸೋಡಿಯಾ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಅವರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಈ ದಾಳಿಯನ್ನು ಬಿಜೆಪಿಯವರೇ ಮಾಡಿದ್ದಾರೆ ಎನ್ನುವ ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್​, ಇದಕ್ಕೆ ದೆಹಲಿ ಪೊಲೀಸರ ಕುಮ್ಮಕ್ಕು ಕೂಡ ಇದೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅರವಿಂದ್ ಕೇಜ್ರಿವಾಲ್​, ಮನೀಷ್​ ಸಿಸೋಡಿಯಾ ಇಲ್ಲದಿರುವಾಗ ಗೂಂಡಾಗಳು ಮನೆಗೆ ಪ್ರವೇಶಿಸಿದ್ದಾರೆ. ಅಲ್ಲಿ ಪೊಲೀಸರು ಕೂಡ ಇದ್ದರು. ದೆಹಲಿಯಲ್ಲಿ ಬಿಜೆಪಿ ದಿನದಿಂದ ದಿನಕ್ಕೆ ಏಕೆ ಹತಾಶವಾಗುತ್ತಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಬಹುತೇಕ ಆಪ್​ ನಾಯಕರು ಇದೇ ಮಾದರಿಯ ಆರೋಪ ಮಾಡಿದ್ದಾರೆ. ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಆಪ್​ ವಕ್ತಾರ ಸೌರಭ್​ ಭಾರದ್ವಾಜ್​, ಸಿಸೋಡಿಯಾ ಮನೆಗೆ ಬಿಜೆಪಿ ಕಾರ್ಯಕರ್ತರು ಪ್ರವೇಶಿಸುವುದನ್ನು ಪೊಲೀಸರು ತಡೆದಿಲ್ಲ. ಬ್ಯಾರಿಕೇಡ್​ಗಳನ್ನು ಪೊಲೀಸರೇ ತೆಗೆದು ಹಾಕಿದ್ದರು ಎನ್ನುವ ಆರೋಪ ಹೊರಿಸಿದ್ದಾರೆ.

6 ಜನರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ದೆಹಲಿ ಪೊಲೀಸರು ಬಿಜೆಪಿ ಕೈಗೊಂಬೆ ಎಂದು ಆಪ್​ ಸರ್ಕಾರ ಈ ಮೊದಲಿನಿಂದಲೂ ಆರೋಪಿಸುತ್ತಲೇ ಬರುತ್ತಿದೆ. ಇದೇ ಆರೋಪವನ್ನು ಇಂದು ಕೂಡ ಮುಂದುವರಿಸಿದೆ. ಆದರೆ, ಇದು ಸುಳ್ಳು ಎಂದು ದೆಹಲಿ ಪೊಲೀಸ್​ ಸ್ಪಷ್ಟನೆ ನೀಡಿದೆ.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More