AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!
ಮನೀಷ್​ ಸಿಸೋಡಿಯಾ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 8:54 PM

Share

ದೆಹಲಿ: ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಇಂದು ಕೆಲ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ದಾಳಿ ನಡೆಸುವಾಗ ಮನೀಷ್​ ಸಿಸೋಡಿಯಾ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಅವರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಈ ದಾಳಿಯನ್ನು ಬಿಜೆಪಿಯವರೇ ಮಾಡಿದ್ದಾರೆ ಎನ್ನುವ ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್​, ಇದಕ್ಕೆ ದೆಹಲಿ ಪೊಲೀಸರ ಕುಮ್ಮಕ್ಕು ಕೂಡ ಇದೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅರವಿಂದ್ ಕೇಜ್ರಿವಾಲ್​, ಮನೀಷ್​ ಸಿಸೋಡಿಯಾ ಇಲ್ಲದಿರುವಾಗ ಗೂಂಡಾಗಳು ಮನೆಗೆ ಪ್ರವೇಶಿಸಿದ್ದಾರೆ. ಅಲ್ಲಿ ಪೊಲೀಸರು ಕೂಡ ಇದ್ದರು. ದೆಹಲಿಯಲ್ಲಿ ಬಿಜೆಪಿ ದಿನದಿಂದ ದಿನಕ್ಕೆ ಏಕೆ ಹತಾಶವಾಗುತ್ತಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಬಹುತೇಕ ಆಪ್​ ನಾಯಕರು ಇದೇ ಮಾದರಿಯ ಆರೋಪ ಮಾಡಿದ್ದಾರೆ. ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಆಪ್​ ವಕ್ತಾರ ಸೌರಭ್​ ಭಾರದ್ವಾಜ್​, ಸಿಸೋಡಿಯಾ ಮನೆಗೆ ಬಿಜೆಪಿ ಕಾರ್ಯಕರ್ತರು ಪ್ರವೇಶಿಸುವುದನ್ನು ಪೊಲೀಸರು ತಡೆದಿಲ್ಲ. ಬ್ಯಾರಿಕೇಡ್​ಗಳನ್ನು ಪೊಲೀಸರೇ ತೆಗೆದು ಹಾಕಿದ್ದರು ಎನ್ನುವ ಆರೋಪ ಹೊರಿಸಿದ್ದಾರೆ.

6 ಜನರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ದೆಹಲಿ ಪೊಲೀಸರು ಬಿಜೆಪಿ ಕೈಗೊಂಬೆ ಎಂದು ಆಪ್​ ಸರ್ಕಾರ ಈ ಮೊದಲಿನಿಂದಲೂ ಆರೋಪಿಸುತ್ತಲೇ ಬರುತ್ತಿದೆ. ಇದೇ ಆರೋಪವನ್ನು ಇಂದು ಕೂಡ ಮುಂದುವರಿಸಿದೆ. ಆದರೆ, ಇದು ಸುಳ್ಳು ಎಂದು ದೆಹಲಿ ಪೊಲೀಸ್​ ಸ್ಪಷ್ಟನೆ ನೀಡಿದೆ.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ

Follow Us
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಸಿನಿಮಾ ಜರ್ನಿಗೆ ಬೆಂಬಲವಾಗಿ ನಿಂತ ಶಿವಣ್ಣನಿಗೆ ಧನ್ಯವಾದ ಹೇಳಿದ ವಿಜಯ್
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ