AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​!
ಮನೀಷ್​ ಸಿಸೋಡಿಯಾ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 8:54 PM

Share

ದೆಹಲಿ: ಆಪ್​ ನಾಯಕ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ ಮನೆಯ ಮೇಲೆ ಇಂದು ಕೆಲ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಇದರ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ದಾಳಿ ನಡೆಸುವಾಗ ಮನೀಷ್​ ಸಿಸೋಡಿಯಾ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಅವರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಈ ದಾಳಿಯನ್ನು ಬಿಜೆಪಿಯವರೇ ಮಾಡಿದ್ದಾರೆ ಎನ್ನುವ ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್​, ಇದಕ್ಕೆ ದೆಹಲಿ ಪೊಲೀಸರ ಕುಮ್ಮಕ್ಕು ಕೂಡ ಇದೆ ಎನ್ನುವ ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಅರವಿಂದ್ ಕೇಜ್ರಿವಾಲ್​, ಮನೀಷ್​ ಸಿಸೋಡಿಯಾ ಇಲ್ಲದಿರುವಾಗ ಗೂಂಡಾಗಳು ಮನೆಗೆ ಪ್ರವೇಶಿಸಿದ್ದಾರೆ. ಅಲ್ಲಿ ಪೊಲೀಸರು ಕೂಡ ಇದ್ದರು. ದೆಹಲಿಯಲ್ಲಿ ಬಿಜೆಪಿ ದಿನದಿಂದ ದಿನಕ್ಕೆ ಏಕೆ ಹತಾಶವಾಗುತ್ತಿದೆ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಬಹುತೇಕ ಆಪ್​ ನಾಯಕರು ಇದೇ ಮಾದರಿಯ ಆರೋಪ ಮಾಡಿದ್ದಾರೆ. ಈ ಘಟನೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಆಪ್​ ವಕ್ತಾರ ಸೌರಭ್​ ಭಾರದ್ವಾಜ್​, ಸಿಸೋಡಿಯಾ ಮನೆಗೆ ಬಿಜೆಪಿ ಕಾರ್ಯಕರ್ತರು ಪ್ರವೇಶಿಸುವುದನ್ನು ಪೊಲೀಸರು ತಡೆದಿಲ್ಲ. ಬ್ಯಾರಿಕೇಡ್​ಗಳನ್ನು ಪೊಲೀಸರೇ ತೆಗೆದು ಹಾಕಿದ್ದರು ಎನ್ನುವ ಆರೋಪ ಹೊರಿಸಿದ್ದಾರೆ.

6 ಜನರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಲ್ಲದೆ, 6 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  ದೆಹಲಿ ಪೊಲೀಸರು ಬಿಜೆಪಿ ಕೈಗೊಂಬೆ ಎಂದು ಆಪ್​ ಸರ್ಕಾರ ಈ ಮೊದಲಿನಿಂದಲೂ ಆರೋಪಿಸುತ್ತಲೇ ಬರುತ್ತಿದೆ. ಇದೇ ಆರೋಪವನ್ನು ಇಂದು ಕೂಡ ಮುಂದುವರಿಸಿದೆ. ಆದರೆ, ಇದು ಸುಳ್ಳು ಎಂದು ದೆಹಲಿ ಪೊಲೀಸ್​ ಸ್ಪಷ್ಟನೆ ನೀಡಿದೆ.

ದೆಹಲಿಯಲ್ಲಿ ಐದು ಶಂಕಿತ ಉಗ್ರರ ಬಂಧನ; ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ, ತಪ್ಪಿದ ದುರಂತ

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!