AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ-ಎನ್​ಸಿಆರ್​ನಲ್ಲಿ 4.0 ತೀವ್ರತೆಯ ಭೂಕಂಪ

ದೆಹಲಿ-ಎನ್​ಸಿಆರ್​ನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 5.36 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ 4.0 ರಷ್ಟಿದ್ದರೂ, ಕಂಪನವು ಬಲವಾಗಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಪ್ರಬಲ ಭೂಕಂಪನದ ಅನುಭವವನ್ನು ಅನುಭವಿಸಿದ್ದಾರೆ. ಈ ಭೂಕಂಪದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಮಂಚ, ಕಿಟಕಿಗಳು ಮತ್ತು ಮನೆಯಲ್ಲಿದ್ದ ಅನೇಕ ವಸ್ತುಗಳು ಅಲುಗಾಡಲು ಪ್ರಾರಂಭಿಸಿದವು.

Delhi Earthquake: ದೆಹಲಿ-ಎನ್​ಸಿಆರ್​ನಲ್ಲಿ 4.0 ತೀವ್ರತೆಯ ಭೂಕಂಪ
ಭೂಕಂಪImage Credit source: India Today
ನಯನಾ ರಾಜೀವ್
|

Updated on: Feb 17, 2025 | 7:40 AM

Share

ದೆಹಲಿ-ಎನ್​ಸಿಆರ್​ನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 5.36 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ 4.0 ರಷ್ಟಿದ್ದರೂ, ಕಂಪನವು ಬಲವಾಗಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಪ್ರಬಲ ಭೂಕಂಪನದ ಅನುಭವವನ್ನು ಅನುಭವಿಸಿದ್ದಾರೆ. ಈ ಭೂಕಂಪದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಮಂಚ, ಕಿಟಕಿಗಳು ಮತ್ತು ಮನೆಯಲ್ಲಿದ್ದ ಅನೇಕ ವಸ್ತುಗಳು ಅಲುಗಾಡಲು ಪ್ರಾರಂಭಿಸಿದವು.

ಜನರಲ್ಲಿ ಭಯದ ವಾತಾವರಣವಿತ್ತು. ತಕ್ಷಣ ಜನರು ತಮ್ಮ ಮನೆಗಳಿಂದ ಹೊರಬರಲು ಪ್ರಾರಂಭಿಸಿದರು. ಈ ಭೂಕಂಪದ ಕೇಂದ್ರ ದೆಹಲಿಯಲ್ಲಿತ್ತು ಮತ್ತು ಅದರ ಆಳ ಕೇವಲ 5 ಕಿ.ಮೀ. ಆದರೆ, ಇಲ್ಲಿಯವರೆಗೆ ಯಾವುದೇ ನಷ್ಟದ ಸುದ್ದಿ ಬಂದಿಲ್ಲ. ನಮಗೆ ರೈಲಿನಲ್ಲಿ ಚಲಿಸುತ್ತಿರುವಂತೆ ಭಾಸವಾಯಿತು ಎಂದು ಸ್ಥಳೀಯರೊಬ್ಬರು ಹೇಳಿಕೊಂಡಿದ್ದಾರೆ.

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಮತ್ತು ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರುವಂತೆ ಕೋರಲಾಗಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಭೂಮಿ ಸ್ಫೋಟಗೊಳ್ಳುವ ಹಂತದಲ್ಲಿದೆಯೇನೋ ಎಂಬಂತೆ ಭಾಸವಾಯಿತು. ನನಗೆ ಈ ರೀತಿ ಹಿಂದೆಂದೂ ಅನಿಸಿರಲಿಲ್ಲ. ಇಡೀ ಕಟ್ಟಡ ನಡುಗಿತು ಎಂದರು.

ಮತ್ತಷ್ಟು ಓದಿ: ವ್ಯಾನವಾಟುವಿನಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ

ನವದೆಹಲಿ ರೈಲು ನಿಲ್ದಾಣದಲ್ಲಿ ತನ್ನ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕನೊಬ್ಬ, ಅದು ಅಲ್ಪಾವಧಿಗೆ ಮಾತ್ರ ಇತ್ತು ಆದರೆ ಅದರ ತೀವ್ರತೆ ತುಂಬಾ ಬಲವಾಗಿತ್ತು ಎಂದು ಹೇಳಿದರು. ಕೆಳಗಿನಿಂದ ರೈಲು ಹಾದು ಹೋಗುತ್ತಿರುವಂತೆ ಭಾಸವಾಯಿತು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್