AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Earthquake: ದೆಹಲಿ-ಎನ್​ಸಿಆರ್​ನಲ್ಲಿ 4.0 ತೀವ್ರತೆಯ ಭೂಕಂಪ

ದೆಹಲಿ-ಎನ್​ಸಿಆರ್​ನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 5.36 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ 4.0 ರಷ್ಟಿದ್ದರೂ, ಕಂಪನವು ಬಲವಾಗಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಪ್ರಬಲ ಭೂಕಂಪನದ ಅನುಭವವನ್ನು ಅನುಭವಿಸಿದ್ದಾರೆ. ಈ ಭೂಕಂಪದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಮಂಚ, ಕಿಟಕಿಗಳು ಮತ್ತು ಮನೆಯಲ್ಲಿದ್ದ ಅನೇಕ ವಸ್ತುಗಳು ಅಲುಗಾಡಲು ಪ್ರಾರಂಭಿಸಿದವು.

Delhi Earthquake: ದೆಹಲಿ-ಎನ್​ಸಿಆರ್​ನಲ್ಲಿ 4.0 ತೀವ್ರತೆಯ ಭೂಕಂಪ
ಭೂಕಂಪImage Credit source: India Today
ನಯನಾ ರಾಜೀವ್
|

Updated on: Feb 17, 2025 | 7:40 AM

Share

ದೆಹಲಿ-ಎನ್​ಸಿಆರ್​ನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 5.36 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ 4.0 ರಷ್ಟಿದ್ದರೂ, ಕಂಪನವು ಬಲವಾಗಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು ಪ್ರಬಲ ಭೂಕಂಪನದ ಅನುಭವವನ್ನು ಅನುಭವಿಸಿದ್ದಾರೆ. ಈ ಭೂಕಂಪದ ತೀವ್ರತೆ ಎಷ್ಟು ಪ್ರಬಲವಾಗಿತ್ತೆಂದರೆ, ಮಂಚ, ಕಿಟಕಿಗಳು ಮತ್ತು ಮನೆಯಲ್ಲಿದ್ದ ಅನೇಕ ವಸ್ತುಗಳು ಅಲುಗಾಡಲು ಪ್ರಾರಂಭಿಸಿದವು.

ಜನರಲ್ಲಿ ಭಯದ ವಾತಾವರಣವಿತ್ತು. ತಕ್ಷಣ ಜನರು ತಮ್ಮ ಮನೆಗಳಿಂದ ಹೊರಬರಲು ಪ್ರಾರಂಭಿಸಿದರು. ಈ ಭೂಕಂಪದ ಕೇಂದ್ರ ದೆಹಲಿಯಲ್ಲಿತ್ತು ಮತ್ತು ಅದರ ಆಳ ಕೇವಲ 5 ಕಿ.ಮೀ. ಆದರೆ, ಇಲ್ಲಿಯವರೆಗೆ ಯಾವುದೇ ನಷ್ಟದ ಸುದ್ದಿ ಬಂದಿಲ್ಲ. ನಮಗೆ ರೈಲಿನಲ್ಲಿ ಚಲಿಸುತ್ತಿರುವಂತೆ ಭಾಸವಾಯಿತು ಎಂದು ಸ್ಥಳೀಯರೊಬ್ಬರು ಹೇಳಿಕೊಂಡಿದ್ದಾರೆ.

ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಮತ್ತು ಸಂಭವನೀಯ ಭೂಕಂಪಗಳ ಬಗ್ಗೆ ಎಚ್ಚರದಿಂದಿರುವಂತೆ ಕೋರಲಾಗಿದೆ. ಅಧಿಕಾರಿಗಳು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಭೂಮಿ ಸ್ಫೋಟಗೊಳ್ಳುವ ಹಂತದಲ್ಲಿದೆಯೇನೋ ಎಂಬಂತೆ ಭಾಸವಾಯಿತು. ನನಗೆ ಈ ರೀತಿ ಹಿಂದೆಂದೂ ಅನಿಸಿರಲಿಲ್ಲ. ಇಡೀ ಕಟ್ಟಡ ನಡುಗಿತು ಎಂದರು.

ಮತ್ತಷ್ಟು ಓದಿ: ವ್ಯಾನವಾಟುವಿನಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ

ನವದೆಹಲಿ ರೈಲು ನಿಲ್ದಾಣದಲ್ಲಿ ತನ್ನ ರೈಲಿಗಾಗಿ ಕಾಯುತ್ತಿದ್ದ ಪ್ರಯಾಣಿಕನೊಬ್ಬ, ಅದು ಅಲ್ಪಾವಧಿಗೆ ಮಾತ್ರ ಇತ್ತು ಆದರೆ ಅದರ ತೀವ್ರತೆ ತುಂಬಾ ಬಲವಾಗಿತ್ತು ಎಂದು ಹೇಳಿದರು. ಕೆಳಗಿನಿಂದ ರೈಲು ಹಾದು ಹೋಗುತ್ತಿರುವಂತೆ ಭಾಸವಾಯಿತು ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!