Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Crime: ದೆಹಲಿಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ

ದೆಹಲಿಯ ಕೊಹತ್ ಎನ್​ಕ್ಲೇವ್​ನಲ್ಲಿರುವ ಮನೆಯೊಂದರಲ್ಲಿ ವೃದ್ಧ ದಂಪತಿಯ ಶವಗಳು ಪತ್ತೆಯಾಗಿವೆ. ಈ ಅಪರಾಧದ ಹಿಂದೆ ಅವರ ಮನೆ ಕೆಲಸದಾಕೆಯ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಪೊಲೀಸರ ಪ್ರಕಾರ, ದಂಪತಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಹೇಳಲಾಗಿದ್ದು, ಅವರ ಶವಗಳು ಮಂಗಳವಾರ (ಮಾರ್ಚ್ 18) ಪತ್ತೆಯಾಗಿವೆ.

Delhi Crime: ದೆಹಲಿಯಲ್ಲಿ ವೃದ್ಧ ದಂಪತಿಯ ಬರ್ಬರ ಹತ್ಯೆ
ಕ್ರೈಂImage Credit source: ICE Cleaning
Follow us
ನಯನಾ ರಾಜೀವ್
|

Updated on: Mar 20, 2025 | 7:45 AM

ನವದೆಹಲಿ, ಮಾರ್ಚ್​ 20: ದೆಹಲಿಯ ಕೊಹತ್ ಎನ್​ಕ್ಲೇವ್​ನಲ್ಲಿರುವ ಮನೆಯೊಂದರಲ್ಲಿ ವೃದ್ಧ ದಂಪತಿಯ ಶವಗಳು ಪತ್ತೆಯಾಗಿವೆ. ಈ ಅಪರಾಧದ ಹಿಂದೆ ಅವರ ಮನೆ ಕೆಲಸದಾಕೆಯ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳೀಯ ಪೊಲೀಸರ ಪ್ರಕಾರ, ದಂಪತಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ ಎಂದು ಹೇಳಲಾಗಿದ್ದು, ಅವರ ಶವಗಳು ಮಂಗಳವಾರ (ಮಾರ್ಚ್ 18) ಪತ್ತೆಯಾಗಿವೆ.

ದೆಹಲಿ ಪೊಲೀಸರು ಪ್ರಮುಖ ಶಂಕಿತನನ್ನು ಬಂಧಿಸಿದ್ದು, ಆತನ ಸಹಚರನನ್ನು ಪತ್ತೆಹಚ್ಚುವ ಪ್ರಯತ್ನಗಳು ನಡೆಯುತ್ತಿವೆ. ಕೊಲೆ ಎರಡು ಮೂರು ದಿನಗಳ ಹಿಂದೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ನಂಬಿದ್ದಾರೆ ಆದರೆ ಅದೇ ಪ್ರದೇಶದಲ್ಲಿ ವಾಸಿಸುವ ದಂಪತಿಯ ಮಗ ಅವರ ಮನೆಗೆ ಭೇಟಿ ನೀಡಿದಾಗ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು, ಅವರು ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಹೆಚ್ಚಿನ ವಿಚಾರಣೆಯ ನಂತರ ಕೊಲೆಗಳ ಹಿಂದಿನ ನಿಖರವಾದ ಉದ್ದೇಶ ದೃಢಪಡಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ ಕ್ರಿಕೆಟ್ ಬೆಟ್ಟಿಂಗ್ ಸಾಲ ತೀರಿಸಲು ವೃದ್ಧೆ ಹತ್ಯೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ವೃದ್ಧೆ ಕಮಲಾ (82) ಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಶೋಕ, ಪ್ಲಂಬರ್ ಆಗಿದ್ದ. ಆಟೊ ಚಾಲಕ ಅಂಜನ್‌ಮೂರ್ತಿ ಹಾಗೂ ಕಾರ್ಮಿಕ ಸಿದ್ದರಾಜು ಸ್ನೇಹಿತರಾಗಿದ್ದರು. ಐಪಿಎಲ್ ಟಿ20 ಕ್ರಿಕೆಟ್ ಪಂದ್ಯಾವಳಿ ವೇಳೆ ಮೂವರು ವಿಪರೀತ ಬೆಟ್ಟಿಂಗ್ ಕಟ್ಟುತ್ತಿದ್ದರು. ಇದಕ್ಕಾಗಿ ಹಲವರ ಬಳಿ ಸಾಲ ಮಾಡಿದ್ದರು ಎಂದು ಪೊಲೀಸರು ಹೇಳಿದರು.

ಮತ್ತಷ್ಟು ಓದಿ: ಅಮ್ಮನಿಗೆ ಬೈದಿದ್ದಕ್ಕೆ ಮಾವನನ್ನೇ ಕೊಂದ ಪುತ್ರ: ಅಳಿಯನ ಕೈಯಲ್ಲೇ ಹೆಣವಾದ ಪಂಚನಹಳ್ಳಿ ಸಾಹುಕಾರ

ಕ್ರಿಕೆಟ್ ಪಂದ್ಯಗಳ ಸೋಲು–ಗೆಲುವು ಲೆಕ್ಕಾಚಾರದಲ್ಲಿ ಬೆಟ್ಟಿಂಗ್ ಕಟ್ಟಿ ಹಣ ಕಳೆದುಕೊಂಡಿದ್ದರು. ಸಾಲ ನೀಡಿದ್ದ ಜನ, ಹಣ ವಾಪಸು ನೀಡುವಂತೆ ಒತ್ತಾಯಿಸುತ್ತಿದ್ದರು. ಕೆಲಸದಿಂದ ಬರುವ ಹಣದಲ್ಲಿ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಅದೇ ಕಾರಣಕ್ಕೆ ಆರೋಪಿಗಳು, ಚಿನ್ನಾಭರಣ ಕಳ್ಳತನ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದರು.

ಪಶ್ಚಿಮ ಕಾರ್ಡ್ ರಸ್ತೆಗೆ ಹೊಂದಿಕೊಂಡಿರುವ 2ನೇ ಹಂತದ 12ನೇ ಅಡ್ಡರಸ್ತೆಯ ಮನೆಯಲ್ಲಿ ವೃದ್ಧೆ ಕಮಲಾ ನೆಲೆಸಿದ್ದರು. ಪತಿ ಹಲವು ವರ್ಷಗಳ ಹಿಂದೆಯೇ ತೀರಿಕೊಂಡಿದ್ದರು. ಮಕ್ಕಳು ಪ್ರತ್ಯೇಕವಾಗಿ ಬೇರೆಡೆ ವಾಸವಿದ್ದರು. ಅಶೋಕ, ತಿಂಗಳ ಹಿಂದೆಯಷ್ಟೇ ಕಮಲಾ ಮನೆಗೆ ಪ್ಲಂಬರ್ ಕೆಲಸಕ್ಕೆ ಹೋಗಿದ್ದ. ಇಡೀ ದಿನ ಮನೆಯಲ್ಲಿ ಅಶೋಕ, ವೃದ್ಧೆ ಧರಿಸಿದ್ದ ಚಿನ್ನಾಭರಣ ಗಮನಿಸಿದ್ದ ಎಂದು ಪೊಲೀಸರು ಹೇಳಿದರು.

ಲಗ್ಗೆರೆ ಎಲ್‌.ಜಿ. ರಾಮಣ್ಣ ಬಡಾವಣೆಯ ಆರ್‌. ಅಶೋಕ (40), ಲಗ್ಗೆರೆ ಕೆಂಪೇಗೌಡ ನಗರದ ಸಿ.ಎಂ. ಸಿದ್ದರಾಜು (34) ಹಾಗೂ ಕಾಮಾಕ್ಷಿಪಾಳ್ಯದ ಸಣ್ಣಕಿ ಬಯಲು ನಿವಾಸಿ ಅಂಜನಮೂರ್ತಿ (33) ಬಂಧಿತರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ