AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಫಲಿತಾಂಶ: ಬಿಜೆಪಿಯಲ್ಲಿ ಸಿಎಂ ರೇಸ್​ನಲ್ಲಿ ಯಾರೆಲ್ಲ? ಇಲ್ಲಿದೆ ವಿವರ

Delhi Election Result 2025: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಬಹುತೇಕ ಖಚಿತವಾಗಿದ್ದು, ಇದರ ಬೆನ್ನಲ್ಲೇ ಪಕ್ಷದಿಂದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಶುರುವಾಗಿವೆ. ಕೆಲವು ಮಂದಿ ನಾಯಕರು ಸಿಎಂ ಹುದ್ದೆಯ ರೇಸ್​​ನಲ್ಲಿ ಇದ್ದಾರೆ. ಆದರೆ, ಬಿಜೆಪಿ ಹೈಕಮಾಂಡ್ ಇದರ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ದೆಹಲಿ ನಾಯಕರು ಹೇಳಿದ್ದಾರೆ. ಸಿಎಂ ರೇಸ್​​ನಲ್ಲಿರವವರು ಯಾರೆಲ್ಲ ಎಂಬ ಮಾಹಿತಿ ಇಲ್ಲಿದೆ.

ದೆಹಲಿ ಫಲಿತಾಂಶ: ಬಿಜೆಪಿಯಲ್ಲಿ ಸಿಎಂ ರೇಸ್​ನಲ್ಲಿ ಯಾರೆಲ್ಲ? ಇಲ್ಲಿದೆ ವಿವರ
ಬಿಜೆಪಿಯಲ್ಲಿ ಸಿಎಂ ರೇಸ್​ನಲ್ಲಿ ಯಾರೆಲ್ಲ? ಇಲ್ಲಿದೆ ವಿವರ
Ganapathi Sharma
|

Updated on: Feb 08, 2025 | 12:00 PM

Share

ನವದೆಹಲಿ, ಫೆಬ್ರವರಿ 8: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಮ್ಯಾಜಿಕ್ ನಂಬರ್ ಗಡಿ ದಾಟುತ್ತಿದ್ದಂತೆಯೇ ಕೇಸರಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಬಿಜೆಪಿ ನಾಯಕ ವೀರೇಂದ್ರ ಸಚ್‌ದೇವ್ ಶನಿವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಯಾರೆಂಬ ವಿಷಯ ನಮಗೆ ಹೆಚ್ಚು ಮುಖ್ಯವಲ್ಲ. ಜನರಿಗೆ ದ್ರೋಹ ಮಾಡುವವರಿಗೆ (ಎಎಪಿ), ಜನರು ಈ ರೀತಿ (ಸೋಲು) ಪಾಠ ಕಲಿಸುತ್ತಾರೆ ಎಂದು ವೀರೇಂದ್ರ ಸಚ್‌ದೇವ್ ಹೇಳಿದ್ದಾರೆ.

ಬಿಜೆಪಿಯ ಸಂಭಾವ್ಯ ಸಿಎಂ ಅಭ್ಯರ್ಥಿಗಳು ಯಾರೆಲ್ಲ?

ಪರ್ವೇಶ್ ವರ್ಮಾ: ದೆಹಲಿಯ ಮಾಜಿ ಸಿಎಂ ಸಾಹಿಬ್ ಸಿಂಗ್ ವರ್ಮಾ ಅವರ ಪುತ್ರ. ನವದೆಹಲಿ ಕ್ಷೇತ್ರದಿಂದ ಎಎಪಿ ರಾಷ್ಟ್ರೀಯ ಸಂಚಾಲಕ ಮತ್ತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿದ್ದಾರೆ.

ರಮೇಶ್ ಬಿಧುರಿ: ಬಿಜೆಪಿಯ ಸಿಎಂ ಫೇಸ್ ಎಂದು ರಮೇಶ್ ಬಿಧುರಿಯವರನ್ನು ಎಎಪಿ ಹೇಳಿತ್ತು. ಹಾಗೆಂದು ಚುನಾವಣಾ ಪ್ರಚಾರದ ಸಮಯದಲ್ಲಿ ಅವರನ್ನು ಚರ್ಚೆಗೂ ಆಹ್ವಾನಿಸಿತ್ತು. ಆದರೆ ಮಾತ್ರ ಪಕ್ಷದ ಸಿಎಂ ಫೇಸ್ ಅನ್ನು ನಿರ್ಧರಿಸಲಾಗಿಲ್ಲ ಎಂದಿತ್ತು. ದೆಹಲಿ ಸಿಎಂ ಅತಿಶಿ ವಿರುದ್ಧ ಬಿಧುರಿ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ.

ಕೈಲಾಶ್ ಗಹ್ಲೋಟ್: ಬಿಜ್ವಾಸನ್‌ನಿಂದ ಸ್ಪರ್ಧಿಸಿದ ಗಹ್ಲೋಟ್, ಬಿಜೆಪಿಯ ಮತ್ತೊಬ್ಬ ಸಂಭಾವ್ಯ ಸಿಎಂ ಅಭ್ಯರ್ಥಿ.

ಕಪಿಲ್ ಮಿಶ್ರಾ: ಕರವಾಲ್ ನಗರದಿಂದ ಸ್ಪರ್ಧಿಸಿರುವ ಮಿಶ್ರಾ, ಆರಂಭಿಕ ಟ್ರೆಂಡ್‌ಗಳ ಪ್ರಕಾರ ಮುನ್ನಡೆಯಲ್ಲಿದ್ದಾರೆ.

ವಿಜೇಂದರ್ ಗುಪ್ತಾ: ದೆಹಲಿಯಲ್ಲಿ ಪಕ್ಷ ಗೆಲುವು ಸಾಧಿಸಿದರೆ ಬಿಜೆಪಿಯ ಈ ಹಿರಿಯ ನಾಯಕ ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಪರ್ಧಿ. ದೆಹಲಿ ಬಿಜೆಪಿಯ ಮಾಜಿ ಮುಖ್ಯಸ್ಥರಾಗಿರುವ ಅವರು, ಎಎಪಿ ಪ್ರಾಬಲ್ಯದ ಹೊರತಾಗಿಯೂ 2015 ಮತ್ತು 2020 ಎರಡರಲ್ಲೂ ರೋಹಿಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಗುಪ್ತಾ ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ