AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ವೇಗದ ಅಭಿವೃದ್ಧಿ; ಗೆಲುವಿನ ಬಳಿಕ ಪ್ರಧಾನಿ ಮೋದಿ ಭರವಸೆ

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಬಗ್ಗೆ ಚುನಾವಣಾ ಆಯೋಗದ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ. ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಿ ಬಿಜೆಪಿ ಜಯಭೇರಿ ಬಾರಿಸಿದೆ. ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. ಬಿಜೆಪಿಯ ಭರ್ಜರಿ ಗೆಲುವಿನ ಬಳಿಕ ದೆಹಲಿಯ ಕೇಂದ್ರ ಕಚೇರಿಯಲ್ಲಿ ಕಾರ್ಯಕರ್ತರು ಮತ್ತು ಬಿಜೆಪಿ ನಾಯಕರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡುತ್ತಿದ್ದಾರೆ.

ದೆಹಲಿಯಲ್ಲಿ ಡಬಲ್ ಎಂಜಿನ್ ಸರ್ಕಾರದಿಂದ ಡಬಲ್ ವೇಗದ ಅಭಿವೃದ್ಧಿ; ಗೆಲುವಿನ ಬಳಿಕ ಪ್ರಧಾನಿ ಮೋದಿ ಭರವಸೆ
Prime Minister Modi
ಸುಷ್ಮಾ ಚಕ್ರೆ
|

Updated on:Feb 08, 2025 | 7:53 PM

Share

ನವದೆಹಲಿ: 2025ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಕುರಿತು ಇಂದು ಬಿಜೆಪಿ ಕಚೇರಿಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿಜೆಪಿಯ ಗೆಲುವಿನ ನಂತರ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು. ಬಿಜೆಪಿ ಕಾರ್ಯಕರ್ತರಿಂದ ಚಪ್ಪಾಳೆ ತಟ್ಟಿದ ನಂತರ ಅವರು ವೇದಿಕೆಯತ್ತ ನಡೆದು ದೆಹಲಿ ಚುನಾವಣೆಯ ಫಲಿತಾಂಶದ ಬಗ್ಗೆ ಮಾತನಾಡಿದ್ದಾರೆ. 27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ “ಡಬಲ್ ಸ್ಪೀಡ್”ನಲ್ಲಿ ಅಭಿವೃದ್ಧಿಯನ್ನು ಜನರು ನಿರೀಕ್ಷಿಸಬಹುದು ಎಂದು ಮೋದಿ ಭರವಸೆ ನೀಡಿದರು.

“ಇಂದಿನ ಗೆಲುವು ಐತಿಹಾಸಿಕ. ಇದು ಸಾಮಾನ್ಯ ವಿಜಯವಲ್ಲ. ದೆಹಲಿಯ ಜನರು ‘ಆಪ್ದಾ’ವನ್ನು ಓಡಿಸಿದ್ದಾರೆ. ದೆಹಲಿಯನ್ನು ‘ಆಪ್ದಾ’ದಿಂದ ಮುಕ್ತಗೊಳಿಸಲಾಗಿದೆ. ದೆಹಲಿಯ ಜನಾದೇಶ ಸ್ಪಷ್ಟವಾಗಿದೆ. ಇಂದು ದೆಹಲಿಯಲ್ಲಿ ಅಭಿವೃದ್ಧಿ, ದೃಷ್ಟಿಕೋನ ಮತ್ತು ನಂಬಿಕೆ ಗೆದ್ದಿದೆ. ಇಂದು, ದೆಹಲಿಯನ್ನು ಆವರಿಸಿದ್ದ ವಂಚಕ ಸರ್ಕಾರ ಸೋಲನುಭವಿಸಿದೆ. ಈ ಗೆಲುವಿಗಾಗಿ ನಾನು ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ಮತ್ತು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Delhi Results: ದೆಹಲಿಯಲ್ಲಿ 40 ಸ್ಥಾನಗಳನ್ನು ಪಡೆದು ಬಹುಮತ ದಾಟಿದ ಬಿಜೆಪಿ; ಡೊಳ್ಳು ಬಾರಿಸಿ ಕಾರ್ಯಕರ್ತರ ಸಂಭ್ರಮಾಚರಣೆ

ನಾವು ಅಭಿವೃದ್ಧಿಯೊಂದಿಗೆ ದೆಹಲಿಯ ಜನರು ನಮಗೆ ನೀಡಿದ ಪ್ರೀತಿಯನ್ನು ಜನರಿಗೆ ಹಿಂದಿರುಗಿಸುತ್ತೇವೆ. ದೆಹಲಿ ನಮಗೆ ಪೂರ್ಣ ಹೃದಯದಿಂದ ಪ್ರೀತಿ ನೀಡಿದೆ ಎಂದು ಮತದಾರರಿಗೆ ಪ್ರಧಾನಿ ಮೋದಿ ಧನ್ಯವಾದ ಅರ್ಪಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಜನರು ನಮ್ಮನ್ನು ಎಂದಿಗೂ ನಿರಾಶೆಗೊಳಿಸಿಲ್ಲ. 2014, 2019 ಮತ್ತು 2024ರಲ್ಲಿ ದೆಹಲಿಯ ಜನರು 7 ಸ್ಥಾನಗಳಲ್ಲಿಯೂ ಬಿಜೆಪಿಗೆ ಗೆಲುವನ್ನು ನೀಡಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಈ ಜನಾದೇಶವು “ಮೋದಿಯವರ ಭರವಸೆ”ಯಲ್ಲಿ ಜನರು ಇಟ್ಟಿರುವ ನಂಬಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದ್ದಾರೆ.

“ಇಂದಿನ ಫಲಿತಾಂಶಗಳು ಬಿಜೆಪಿಯ ಡಬಲ್-ಎಂಜಿನ್ ಸರ್ಕಾರದ ಮೇಲೆ ದೇಶ ಎಷ್ಟು ನಂಬಿಕೆಯನ್ನು ಹೊಂದಿದೆ ಎಂಬುದನ್ನು ತೋರಿಸುತ್ತದೆ. ಸಮಾಜದ ಪ್ರತಿಯೊಂದು ವರ್ಗವು ಬಿಜೆಪಿಗೆ ಮತ ಹಾಕಿದೆ. ಇಂದು, ಭಾರತ ಆಪ್​ನ ಓಲೈಕೆಯನ್ನು ತಿರಸ್ಕರಿಸಿದೆ ಮತ್ತು ಬಿಜೆಪಿಯ ‘ಸಂತುಷ್ಟೀಕರಣ’ ನೀತಿಯನ್ನು ಒಪ್ಪಿಕೊಂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Parvesh Verma: ಅರವಿಂದ್ ಕೇಜ್ರಿವಾಲ್​ ಎದುರು ಗೆದ್ದು ದೆಹಲಿ ಸಿಎಂ ರೇಸ್​ನಲ್ಲಿ ಮೊದಲ ಸ್ಥಾನದಲ್ಲಿರುವ ಪರ್ವೇಶ್ ವರ್ಮಾ ಯಾರು?

ಲೋಕಸಭಾ ಚುನಾವಣೆಯಲ್ಲಿ ದಾಖಲೆಯ ಪ್ರದರ್ಶನ ನೀಡಿದ ನಂತರ, ಹರಿಯಾಣ, ಮಹಾರಾಷ್ಟ್ರ ಮತ್ತು ಈಗ ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ದಾಖಲೆಗಳನ್ನು ನಿರ್ಮಿಸಿದೆ ಎಂದು ಅವರು ಹೇಳಿದ್ದಾರೆ. ದೇಶಾದ್ಯಂತ ಬಿಜೆಪಿ ಕಾರ್ಯಕರ್ತರ ಹೃದಯದಲ್ಲಿ ನೋವು ಇರುವುದನ್ನು ನಾನು ನೋಡುತ್ತಿದ್ದೆ. ದೆಹಲಿಗೆ ಸಂಪೂರ್ಣವಾಗಿ ಸೇವೆ ಸಲ್ಲಿಸಲು ಸಾಧ್ಯವಾಗದಿರುವ ಬಗ್ಗೆ ನಮಗೆ ನೋವಿತ್ತು. ಆದರೆ ಇಂದು ದೆಹಲಿ ನಮ್ಮ ವಿನಂತಿಯನ್ನು ಸಹ ಸ್ವೀಕರಿಸಿದೆ” ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sat, 8 February 25

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ