AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavitha) ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.

ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ
ಕೆ ಕವಿತಾ
ನಯನಾ ರಾಜೀವ್
|

Updated on: Apr 09, 2024 | 12:38 PM

Share

ಮದ್ಯನೀತಿ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ(K Kavitha) ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್​ 23ರವರೆಗೆ ವಿಸ್ತರಿಸಲಾಗಿದೆ. ಜಾರಿ ನಿರ್ದೇಶನಾಲಯ (ಇಡಿ) ನ್ಯಾಯಾಲಯಕ್ಕೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂಎಲ್‌ಸಿ ಕೆ. ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಅವಧಿ ಮುಗಿದ ನಂತರ ಕವಿತಾ ಅವರನ್ನು ತಿಹಾರ್ ಜೈಲಿನಿಂದ ಕೋರ್ಟ್ ಕೊಠಡಿಗೆ ಕರೆತರಲಾಯಿತು. ಇಡಿ ನ್ಯಾಯಾಂಗ ಬಂಧನವನ್ನು 14 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಅರ್ಜಿ ಸಲ್ಲಿಸಿದೆ.

ಇದಕ್ಕೂ ಮುನ್ನ ಕವಿತಾ ಅವರನ್ನು ಸೋಮವಾರ (ಏಪ್ರಿಲ್ 8) ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾ ಅವರಿಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.

ಮತ್ತಷ್ಟು ಓದಿ: ದೆಹಲಿ ಮದ್ಯನೀತಿ ಹಗರಣ, ಕೆ ಕವಿತಾ ಮಧ್ಯಂತರ ಜಾಮೀನು ಅರ್ಜಿ ವಜಾ

ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮದ್ಯಪಾನ ನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಬಿಆರ್‌ಎಸ್ ಮುಖಂಡರ ಅರ್ಜಿಯ ವಿಚಾರಣೆ ವೇಳೆ ಅವರ ವಕೀಲರು ವಾದ ಮಂಡಿಸಿದ ಕೆ. ಕವಿತಾ ಅವರ ಮಗನ ಪರೀಕ್ಷೆಗಳು ಏಪ್ರಿಲ್ ತಿಂಗಳಿನಲ್ಲಿ ಪ್ರಾರಂಭವಾಗಲಿವೆ.

ತಾಯಿಯ ಅನುಪಸ್ಥಿತಿಯನ್ನು ಸಹೋದರ ಅಥವಾ ತಂದೆ ಪೂರೈಸಲು ಸಾಧ್ಯವಿಲ್ಲ, ಅಂತಹ ಪರಿಸ್ಥಿತಿಯಲ್ಲಿ ಅವರಿಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ವಾದಿಸಿದ್ದರು. ದೆಹಲಿ ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮದ್ಯನೀತಿ ಪ್ರಕರಣದಲ್ಲಿ ಕಳೆದ ತಿಂಗಳು ಬಂಧಿಸಲಾಗಿತ್ತು.

ಏಪ್ರಿಲ್ 2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಆಕೆ ಏಪ್ರಿಲ್ 15ರವರೆಗೆ ಜೈಲಿನಲ್ಲಿ ಇರಲಿದ್ದಾರೆ. ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಕವಿತಾ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಪ್ರಕರಣದಲ್ಲಿ ತನಿಖಾ ಸಂಸ್ಥೆ ಯಶಸ್ಸಿನ ಅಂಚಿನಲ್ಲಿದ್ದು, ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡುವುದರಿಂದ ತನಿಖೆಗೆ ಅಡ್ಡಿಯಾಗಲಿದೆ ಎಂದು ಇಡಿ ವಕೀಲರು ಪ್ರತಿಪಾದಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ