AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶ ನಿಯಾಯ್ ಬಿಂದು ಅವರು ಗುರುವಾರ ಈ ಪ್ರಕರಣದ ಆದೇಶವನ್ನು ಕಾಯ್ದಿರಿಸುವ ಮೊದಲು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದರು. ಎಲ್ಲಾ ವಕೀಲರು ತಮ್ಮ ವಾದಗಳಲ್ಲಿ ಸಂಕ್ಷಿಪ್ತವಾಗಿರಲು ಕೇಳಿದಾಗ ನ್ಯಾಯಾಧೀಶರು ಈ ವಿಷಯವನ್ನು ಅನಿರ್ದಿಷ್ಟವಾಗಿ ಬಾಕಿ ಇರಿಸಲು ಬಯಸುವುದಿಲ್ಲ ಎಂದು ಸೂಚಿಸಿದರು.

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ಆದೇಶ ಕಾಯ್ದಿರಿಸಿದ ದೆಹಲಿ ನ್ಯಾಯಾಲಯ
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 20, 2024 | 1:13 PM

Share

ದೆಹಲಿ ಜೂನ್ 20: ಈಗ ರದ್ದುಗೊಂಡಿರುವ ದೆಹಲಿಯ ಅಬಕಾರಿ ನೀತಿಯಲ್ಲಿನ (excise policy)ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (Enforcement Directorate) ತನಿಖೆ ನಡೆಸುತ್ತಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಕೋರಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮನವಿ ಸಲ್ಲಿಸಿದ್ದು, ಈ ಮನವಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರ ಕಾಯ್ದಿರಿಸಿದೆ. ವೈದ್ಯಕೀಯ ಮಂಡಳಿಯ ಪರೀಕ್ಷೆಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಭಾಗವಹಿಸಲು ಪತ್ನಿ ಸುನಿತಾ ಕೇಜ್ರಿವಾಲ್‌ಗೆ ಅನುಮತಿ ನೀಡುವಂತೆ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ಆದೇಶವನ್ನೂ ನ್ಯಾಯಾಲಯ ಕಾಯ್ದಿರಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯದ ನ್ಯಾಯಾಧೀಶ ನಿಯಾಯ್ ಬಿಂದು ಅವರು ಗುರುವಾರ ಈ ಪ್ರಕರಣದ ಆದೇಶವನ್ನು ಕಾಯ್ದಿರಿಸುವ ಮೊದಲು ಎರಡು ದಿನಗಳ ಕಾಲ ವಿಚಾರಣೆ ನಡೆಸಿದ್ದರು. ಎಲ್ಲಾ ವಕೀಲರು ತಮ್ಮ ವಾದಗಳಲ್ಲಿ ಸಂಕ್ಷಿಪ್ತವಾಗಿರಲು ಕೇಳಿದಾಗ ನ್ಯಾಯಾಧೀಶರು ಈ ವಿಷಯವನ್ನು ಅನಿರ್ದಿಷ್ಟವಾಗಿ ಬಾಕಿ ಇರಿಸಲು ಬಯಸುವುದಿಲ್ಲ ಎಂದು ಸೂಚಿಸಿದರು. ದೆಹಲಿ ಮುಖ್ಯಮಂತ್ರಿಯ ಜಾಮೀನು ಅರ್ಜಿಯನ್ನು ವಿರೋಧಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಎಸ್‌ವಿ ರಾಜು, ಅಪರಾಧದ ಆದಾಯದ ಒಂದು ಭಾಗವನ್ನು ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗೋವಾದಲ್ಲಿ ಆಮ್ ಆದ್ಮಿ ಪಕ್ಷದ ಸಂಚಾಲಕನ ಹೋಟೆಲ್ ವಾಸ್ತವ್ಯಕ್ಕೆ ಬಳಸಲಾಗಿದೆ ಎಂದು ಸಾಬೀತುಪಡಿಸಲು ಇಡಿ ಸಾಕ್ಷ್ಯಾಧಾರಗಳನ್ನು ಹೊಂದಿದೆ ಎಂದು ವಾದಿಸಿದರು. .

ಗೋವಾ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷದ ಪ್ರಚಾರಕ್ಕಾಗಿ ಹಣವನ್ನು ನಿರ್ವಹಿಸಿದ ಸಹ-ಆರೋಪಿ ಚನ್‌ಪ್ರೀತ್ ಸಿಂಗ್ ಅವರು ಸ್ವೀಕರಿಸಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಫೆಡರಲ್ ಏಜೆನ್ಸಿಯು ದೂರವಾಣಿ ಕರೆಗಳು ಮತ್ತು ಕರೆ ಡೇಟಾ ದಾಖಲೆಗಳ (ಸಿಡಿಆರ್) ರೂಪದಲ್ಲಿ ಸಾಕ್ಷ್ಯವನ್ನು ಹೊಂದಿದೆ. ವಿವಿಧ ಅಂಗಡಿಯಾ ನೆಟ್​​ವರ್ಕ್​​​ಗಳ (ಅಂಗಡಿಯಾ ಅಂದರೆ ಅಮೂಲ್ಯ ವಸ್ತುಗಳ ವ್ಯವಹಾರಕ್ಕಾಗಿ ಬಳಸುವ ವಿಶ್ವಾಸರ್ಹ ನೆಟ್​​ವರ್ಕ್ ಇದಾಗಿದ್ದು, ಇದು ಬ್ಯಾಂಕ್​​​ನಂತೆಯೇ ಕಾರ್ಯನಿರ್ವಹಿಸುತ್ತದೆ)  ಮೂಲಕ ₹ 45 ಕೋಟಿ ನಗದು ಸ್ವೀಕರಿಸಿದ್ದು ಅರವಿಂದ್ ಕೇಜ್ರಿವಾಲ್ ಗೋವಾದಲ್ಲಿ ಹೋಟೆಲ್ ತಂಗಿದ್ದಕ್ಕಾಗಿ ಈ ನೆಟ್​​ವರ್ಕ್​​​ಗಳ ಖಾತೆಯಿಂದ ಪಾವತಿಸಲಾಗಿದೆ.

ಈ ನೆಟ್​​ವರ್ಕ್​​​ಗಳಿಂದ ವಶಪಡಿಸಿಕೊಂಡ ಟೋಕನ್ ಸಂಖ್ಯೆಗಳು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ನೇರ ಸಂಪರ್ಕವನ್ನು ಹೊಂದಿವೆ ಎಂದು ಕಾನೂನು ಅಧಿಕಾರಿ ತಿಳಿಸಿದ್ದಾರೆ.

“ಇಡಿ ಸುಖಾಸುಮ್ಮನೆ ತನಿಖೆ ನಡೆಸುತ್ತಿದೆ ಎಂದಲ್ಲ. ಖಚಿತವಾದ ಪುರಾವೆಗಳಿವೆ, ”ರಾಜು ಹೇಳಿದ್ದಾರೆ.

ಗೋವಾ ಚುನಾವಣೆಯ ಪ್ರಚಾರದ ವೇಳೆ “ಸೌತ್ ಗ್ರೂಪ್” ನಿಂದ ಎಎಪಿಗೆ ನಗದು ಲಂಚವನ್ನು ವರ್ಗಾಯಿಸಿದ ಆರೋಪದ ಸಹ ಆರೋಪಿ ವಿನೋದ್ ಚೌಹಾಣ್ ಅವರೊಂದಿಗೆ ಸಿಎಂ “ಉತ್ತಮ ಸಂಬಂಧ” ಹೊಂದಿದ್ದಾರೆ ಎಂದು ಕಾನೂನು ಅಧಿಕಾರಿ ತಿಳಿಸಿದ್ದಾರೆ. “ಸಿಎಂ ಈ ನೆಟ್ವರ್ಕ್ ಮಾಲೀಕರೊಂದಿಗೆ ಏನು ಮಾಡುತ್ತಿದ್ದರು? ಅರವಿಂದ್ ಕೇಜ್ರಿವಾಲ್ ಅವರು ವಿನೋದ್ ಚೌಹಾನ್ ಅವರೊಂದಿಗೆ ಚಾಟ್ ಮಾಡುತ್ತಿದ್ದರು ಎಂದು ರಾಜು ಹೇಳಿದ್ದಾರೆ.

ಎಎಪಿಯ ವ್ಯವಹಾರಗಳಿಗೆ ಸಿಎಂ ನೇರ ಜವಾಬ್ದಾರರು ಮತ್ತು ಪಕ್ಷದ ಮೂಲಕ ಮಾಡಿದ ಅಕ್ರಮ ಹಣ ವರ್ಗಾವಣೆಗೆ ನೇರ ಹೊಣೆಗಾರರು ಎಂದು ಅವರು ಹೇಳಿದರು.

ಇದನ್ನೂ ಓದಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಯಾವಾಗಲೂ ಬಿಳಿ ಬಣ್ಣದ ಟಿ ಶರ್ಟ್​ ಧರಿಸುವುದೇಕೆ?

ಬಂಧನದ ಸಮಯಕ್ಕೆ ಸಂಬಂಧಿಸಿದಂತೆ, ಇಡಿ ಆತುರದಲ್ಲಿ ಕಾರ್ಯನಿರ್ವಹಿಸಲಿಲ್ಲ. “ವಿವರವಾದ ದಾಖಲೆಗಳನ್ನು” ಪರಿಗಣಿಸಿ ಯಾವುದೇ ಬಲವಂತದ ಕ್ರಮದ ಪರಿಹಾರವನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದ ನಂತರವೇ ಸಿಎಂ ಅವರನ್ನು ಬಂಧಿಸಿದೆ. ವಿಭಾಗೀಯ ಪೀಠವು ಸಾಕ್ಷ್ಯಗಳು ಸಮರ್ಪಕವಾಗಿದೆ ಎಂದು ಕಂಡುಹಿಡಿದಿದೆ. ಒಂಬತ್ತು ಸಮನ್ಸ್‌ಗಳಿಗೆ ಹಾಜರಾಗದಿದ್ದರೂ ಫೆಡರಲ್ ಏಜೆನ್ಸಿ ಸಿಎಂ ಅವರನ್ನು ಬಂಧಿಸಲಿಲ್ಲ ಎಂದು ರಾಜು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್