Excise Policy Case: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ

ದೆಹಲಿ ಮದ್ಯನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್​ಎಸ್​ ನಾಯಕಿ ಕವಿತಾರ ನ್ಯಾಯಾಂಗ ಬಂಧನದ ಅವಧಿ ಮೇ 20ರವರೆಗೆ ದೆಹಲಿ ಹೈಕೋರ್ಟ್​ ವಿಸ್ತರಿಸಿದೆ.

Excise Policy Case: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ಮೇ 20ರವರೆಗೆ ವಿಸ್ತರಣೆ
ಕೆ ಕವಿತಾ

Updated on: May 14, 2024 | 2:53 PM

ದೆಹಲಿಯ ಅಬಕಾರಿ ನೀತಿ(Delhi Excise Policy Case) ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಕೆ.ಕವಿತಾ(K Kavitha) ರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದೆ. ದೆಹಲಿ ಮದ್ಯದ ಅಬಕಾರಿ ನೀತಿ 2021-22ಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಆರನೇ ಪೂರಕ ಆರೋಪಪಟ್ಟಿಯನ್ನು ಪರಿಗಣಿಸಿ ವಾದಗಳನ್ನು ಆಲಿಸುವುದನ್ನು ರೂಸ್ ಅವೆನ್ಯೂ ನ್ಯಾಯಾಲಯವು ಮೇ 20ಕ್ಕೆ ಮುಂದೂಡಿದೆ.

ಸಿಬಿಐ ಮತ್ತು ಇ.ಡಿ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ತೆಲಂಗಾಣ ಎಂಎಲ್‌ಸಿಯ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರ ಕಸ್ಟಡಿಯನ್ನು ವಿಸ್ತರಿಸಿ ಈ ಹಿಂದೆ ಆದೇಶಿಸಲಾಗಿತ್ತು.

ಸದ್ಯ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ 46 ವರ್ಷದ ಬಿಆರ್‌ಎಸ್ ನಾಯಕಿ ಕವಿತಾ ಅವರನ್ನು ಮಾರ್ಚ್ 15ರಂದು ಹೈದರಾಬಾದ್‌ನ ಬಂಜಾರಾ ಹಿಲ್ಸ್ ನಿವಾಸದಿಂದ ಇ.ಡಿ ಅಧಿಕಾರಿಗಳು ಬಂಧಿಸಿದ್ದರು.

ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಕೆ ಕವಿತಾ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಮತ್ತು ಸಾಕ್ಷ್ಯವನ್ನು ಹಾಳು ಮಾಡಲು ಪ್ರಯತ್ನಿಸಬಹುದು ಎನ್ನುವ ಕಾರಣಕ್ಕೆ ಅವರಿಗೆ ಮಧ್ಯಂತರ ಜಾಮೀನು ನೀಡಲು ಕೋರ್ಟ್​ ನಿರಾಕರಿಸಿದೆ. ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಕೆಕವಿತಾ ಅವರನ್ನು ಮಂಗಳವಾರ ಕೋರ್ಟ್​ ಎದುರು ಹಾಜರುಪಡಿಸಲಾಯಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us