AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಬಕಾರಿ ನೀತಿ ಪ್ರಕರಣ: ಸಂಜಯ್​ ಸಿಂಗ್​ಗೆ ಅ. 27ರವರೆಗೆ ನ್ಯಾಯಾಂಗ ಬಂಧನ

ದೆಹಲಿ ಅಬಕಾರಿ ನೀತಿ ಹಾಗೂ ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್(Sanjay Singh) ಅವರನ್ನು ಅಕ್ಟೋಬರ್ 27 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೇ ವೇಳೆ ಸಿಂಗ್ ಅವರು ಮಧುಮೇಹಿಯಾಗಿರುವುದರಿಂದ ಔಷಧಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ. ಅಕ್ಟೋಬರ್ 10 ರಂದು, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರ ಇಡಿ ಕಸ್ಟಡಿಯನ್ನು ನ್ಯಾಯಾಲಯವು ಅಕ್ಟೋಬರ್ 13 ರವರೆಗೆ ವಿಸ್ತರಿಸಿತ್ತು.

ದೆಹಲಿ ಅಬಕಾರಿ ನೀತಿ ಪ್ರಕರಣ: ಸಂಜಯ್​ ಸಿಂಗ್​ಗೆ ಅ. 27ರವರೆಗೆ ನ್ಯಾಯಾಂಗ ಬಂಧನ
ಸಂಜಯ್ ಸಿಂಗ್Image Credit source: The Week
ನಯನಾ ರಾಜೀವ್
|

Updated on: Oct 13, 2023 | 3:17 PM

Share

ದೆಹಲಿ ಅಬಕಾರಿ ನೀತಿ ಹಾಗೂ ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್(Sanjay Singh) ಅವರನ್ನು ಅಕ್ಟೋಬರ್ 27 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಇದೇ ವೇಳೆ ಸಿಂಗ್ ಅವರು ಮಧುಮೇಹಿಯಾಗಿರುವುದರಿಂದ ಔಷಧಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಲಾಗಿದೆ. ಅಕ್ಟೋಬರ್ 10 ರಂದು, ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರ ಇಡಿ ಕಸ್ಟಡಿಯನ್ನು ನ್ಯಾಯಾಲಯವು ಅಕ್ಟೋಬರ್ 13 ರವರೆಗೆ ವಿಸ್ತರಿಸಿತ್ತು.

ಕಳೆದ ವಾರ ದೆಹಲಿ ಕೋರ್ಟ್ ಎಎಪಿ ಸಂಸದರನ್ನು 5 ದಿನಗಳ ಕಾಲ ಇಡಿ ವಶಕ್ಕೆ ನೀಡಿ ಆದೇಶಿಸಿತ್ತು. ಇಡಿ ಕಸ್ಟಡಿ ಅವಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರ ಮುಂದೆ ಹಾಜರುಪಡಿಸಿದರು.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4 ರಂದು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು, ಸತತ 11 ಗಂಟೆಗಳ ವಿಚಾರಣೆ ಬಳಿಕ ಅವರನ್ನು ಬಂಧಿಸಿತ್ತು.

ಮತ್ತಷ್ಟು ಓದಿ: ದೆಹಲಿ ಮದ್ಯ ನೀತಿ ಪ್ರಕರಣ: ಸಂಜಯ್ ಸಿಂಗ್​​ಗೆ ಇಡಿ ಕಸ್ಟಡಿ ಅ.13ರವರೆಗೆ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ತಮ್ಮ ಬಂಧನವನ್ನು ಪ್ರಶ್ನಿಸಿ ಸಂಜಯ್ ಸಿಂಗ್ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸಿಂಗ್ ಅವರ ಮನವಿಯನ್ನು ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ನರುಲಾ ಅವರ ಪೀಠದ ಮುಂದೆ ಉಲ್ಲೇಖಿಸಲಾಗಿತ್ತು.

ರೆಸ್ಟೋರೆಂಟ್ ಮಾಲೀಕ ದಿನೇಶ್ ಅರೋರಾ ಸಿಂಗ್ ಮತ್ತು ಸಿಸೋಡಿಯಾ ಇಬ್ಬರಿಗೂ ಆಪ್ತರಾಗಿದ್ದರು ಎಂದು ಇಡಿ ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಜುಲೈನಲ್ಲಿ, ಅರೋರಾ ಅವರನ್ನು ಇಡಿ ಬಂಧಿಸಿತು, ಅವರು ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು: ದಂಧೆಕೋರರಿಗೆ ಬಿಗ್​​ ಶಾಕ್​​
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಒಂದು ರನ್​​ಗಾಗಿ ಇಷ್ಟೆಲ್ಲ ಪೋಸ್​​​ ಬೇಕಿತ್ತಾ ಪಾಂಡ್ಯ?
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ