AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯನೀತಿ ಹಗರಣ: ತಿಹಾರ್​ ಜೈಲಿನಲ್ಲಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರ ಪುತ್ರಿ ಕೆ.ಕವಿತಾ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಂಗಳವಾರ (ಏಪ್ರಿಲ್ 9, 2024) ನ್ಯಾಯಾಲಯವು ಕೆ ಕವಿತಾ ಅವರ ಕಸ್ಟಡಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿತು. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ದೆಹಲಿ ಮದ್ಯನೀತಿ ಹಗರಣ: ತಿಹಾರ್​ ಜೈಲಿನಲ್ಲಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ
ಕೆ ಕವಿತಾ
ನಯನಾ ರಾಜೀವ್
|

Updated on: Apr 11, 2024 | 2:32 PM

Share

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರ ಪುತ್ರಿ ಕೆ ಕವಿತಾ(K Kavitha) ಅವರನ್ನು ಸಿಬಿಐ ಗುರುವಾರ ಬಂಧಿಸಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಂಗಳವಾರ (ಏಪ್ರಿಲ್ 9, 2024) ನ್ಯಾಯಾಲಯವು ಕೆ ಕವಿತಾ ಅವರ ಕಸ್ಟಡಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿತು. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಸೋಮವಾರವೇ (ಏಪ್ರಿಲ್ 8) ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತ್ತು, ಪ್ರಾಥಮಿಕ ದೃಷ್ಟಿಯಲ್ಲಿ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ತೋರುತ್ತದೆ ಎಂದು ವಕೀಲರು ಹೇಳಿದ್ದರು.

ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ 6 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಆ ಬಳಿಕ ಇಂದು ತಿಹಾರ್ ಜೈಲಿನಿಂದ ಕೆ. ಕವಿತಾ ಬಂಧಿಸಲಾಗಿದೆ. ಬಿಆರ್‌ಎಸ್ ನಾಯಕ ಕೆ. ಕವಿತಾ ಅವರನ್ನು ತಿಹಾರ್ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಏಪ್ರಿಲ್ 5 ರಂದು ಕವಿತಾ ಅವರನ್ನು ಜೈಲಿನಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ಸಿಬಿಐಗೆ ಅನುಮತಿ ನೀಡಿತ್ತು.

ಇದಲ್ಲದೇ ಸಾಕ್ಷ್ಯ ನಾಶಪಡಿಸುವ ಪ್ರಯತ್ನವೂ ನಡೆದಿದೆ. ಅಂತಹ ಪರಿಸ್ಥಿತಿಯಲ್ಲಿ, ಅವರಿಗೆ ಪರಿಹಾರವನ್ನು ನೀಡಿದರೆ ಅವರು ಭವಿಷ್ಯದಲ್ಲಿಯೂ ಇದನ್ನು ಮಾಡಬಹುದು ಎಂದಿದ್ದರು.

ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಮದ್ಯದ ಪರವಾನಗಿಯಲ್ಲಿ ಹೆಚ್ಚಿನ ಪಾಲು ಪಡೆಯಲು ದೆಹಲಿಯ ಆಡಳಿತ ಪಕ್ಷ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪ ಹೊತ್ತಿರುವ ಕೆ ಕವಿತಾ ಸೌತ್ ಗ್ರೂಪ್‌ನ ಪ್ರಮುಖ ಸದಸ್ಯೆ ಎಂದು ಇಡಿ ಹೇಳಿದೆ.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ.

ಮದ್ಯದ ನೀತಿಯನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೊಂಡಿದೆ. ಕೇಜ್ರಿವಾಲ್ ಅವರನ್ನು ಪ್ರಕರಣದ ಪ್ರಮುಖ ಕಿಂಗ್​ಪಿನ್​ ಎಂದು ಇಡಿ ಬಣ್ಣಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು