AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮದ್ಯನೀತಿ ಹಗರಣ: ತಿಹಾರ್​ ಜೈಲಿನಲ್ಲಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರ ಪುತ್ರಿ ಕೆ.ಕವಿತಾ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಂಗಳವಾರ (ಏಪ್ರಿಲ್ 9, 2024) ನ್ಯಾಯಾಲಯವು ಕೆ ಕವಿತಾ ಅವರ ಕಸ್ಟಡಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿತು. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ದೆಹಲಿ ಮದ್ಯನೀತಿ ಹಗರಣ: ತಿಹಾರ್​ ಜೈಲಿನಲ್ಲಿರುವ ಬಿಆರ್​ಎಸ್​ ನಾಯಕಿ ಕೆ ಕವಿತಾರನ್ನು ಬಂಧಿಸಿದ ಸಿಬಿಐ
ಕೆ ಕವಿತಾ
ನಯನಾ ರಾಜೀವ್
|

Updated on: Apr 11, 2024 | 2:32 PM

Share

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ತೆಲಂಗಾಣ ಮಾಜಿ ಸಿಎಂ ಕೆಸಿಆರ್ ಅವರ ಪುತ್ರಿ ಕೆ ಕವಿತಾ(K Kavitha) ಅವರನ್ನು ಸಿಬಿಐ ಗುರುವಾರ ಬಂಧಿಸಿದೆ. ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ.ಕವಿತಾ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಂಗಳವಾರ (ಏಪ್ರಿಲ್ 9, 2024) ನ್ಯಾಯಾಲಯವು ಕೆ ಕವಿತಾ ಅವರ ಕಸ್ಟಡಿಯನ್ನು ಏಪ್ರಿಲ್ 23 ರವರೆಗೆ ವಿಸ್ತರಿಸಿತು. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಸೋಮವಾರವೇ (ಏಪ್ರಿಲ್ 8) ಕವಿತಾ ಅವರಿಗೆ ಮಧ್ಯಂತರ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿತ್ತು, ಪ್ರಾಥಮಿಕ ದೃಷ್ಟಿಯಲ್ಲಿ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ್ದಾರೆ ಎಂದು ತೋರುತ್ತದೆ ಎಂದು ವಕೀಲರು ಹೇಳಿದ್ದರು.

ದೆಹಲಿ ಮದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶನಿವಾರ 6 ಗಂಟೆಗಳ ಕಾಲ ವಿಚಾರಣೆ ನಡೆಸಿದೆ. ಆ ಬಳಿಕ ಇಂದು ತಿಹಾರ್ ಜೈಲಿನಿಂದ ಕೆ. ಕವಿತಾ ಬಂಧಿಸಲಾಗಿದೆ. ಬಿಆರ್‌ಎಸ್ ನಾಯಕ ಕೆ. ಕವಿತಾ ಅವರನ್ನು ತಿಹಾರ್ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಲಾಗಿದೆ. ಏಪ್ರಿಲ್ 5 ರಂದು ಕವಿತಾ ಅವರನ್ನು ಜೈಲಿನಲ್ಲಿ ವಿಚಾರಣೆ ನಡೆಸಲು ನ್ಯಾಯಾಲಯ ಸಿಬಿಐಗೆ ಅನುಮತಿ ನೀಡಿತ್ತು.

ಇದಲ್ಲದೇ ಸಾಕ್ಷ್ಯ ನಾಶಪಡಿಸುವ ಪ್ರಯತ್ನವೂ ನಡೆದಿದೆ. ಅಂತಹ ಪರಿಸ್ಥಿತಿಯಲ್ಲಿ, ಅವರಿಗೆ ಪರಿಹಾರವನ್ನು ನೀಡಿದರೆ ಅವರು ಭವಿಷ್ಯದಲ್ಲಿಯೂ ಇದನ್ನು ಮಾಡಬಹುದು ಎಂದಿದ್ದರು.

ಮತ್ತಷ್ಟು ಓದಿ: ಮದ್ಯನೀತಿ ಹಗರಣ: ಬಿಆರ್​ಎಸ್​ ನಾಯಕಿ ಕೆ ಕವಿತಾ ನ್ಯಾಯಾಂಗ ಬಂಧನ ವಿಸ್ತರಣೆ

ಮದ್ಯದ ಪರವಾನಗಿಯಲ್ಲಿ ಹೆಚ್ಚಿನ ಪಾಲು ಪಡೆಯಲು ದೆಹಲಿಯ ಆಡಳಿತ ಪಕ್ಷ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) 100 ಕೋಟಿ ರೂಪಾಯಿ ಲಂಚ ನೀಡಿದ ಆರೋಪ ಹೊತ್ತಿರುವ ಕೆ ಕವಿತಾ ಸೌತ್ ಗ್ರೂಪ್‌ನ ಪ್ರಮುಖ ಸದಸ್ಯೆ ಎಂದು ಇಡಿ ಹೇಳಿದೆ.

ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಜೈಲಿನಲ್ಲಿದ್ದಾರೆ.

ಮದ್ಯದ ನೀತಿಯನ್ನು ರೂಪಿಸುವಲ್ಲಿ ಮತ್ತು ಅನುಷ್ಠಾನಗೊಳಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕೇಂದ್ರೀಯ ತನಿಖಾ ಸಂಸ್ಥೆ ಹೇಳಿಕೊಂಡಿದೆ. ಕೇಜ್ರಿವಾಲ್ ಅವರನ್ನು ಪ್ರಕರಣದ ಪ್ರಮುಖ ಕಿಂಗ್​ಪಿನ್​ ಎಂದು ಇಡಿ ಬಣ್ಣಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ