AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಬಕಾರಿ ನೀತಿ ಹಗರಣ: 7 ಆರೋಪಿಗಳ ವಿರುದ್ಧ ಮೊದಲ ಆರೋಪಪಟ್ಟಿ ಸಲ್ಲಿಸಿದ ಸಿಬಿಐ

ಚಾರ್ಜ್ ಶೀಟ್‌ನಲ್ಲಿ ಹೆಸರಿಸಲಾದವರಲ್ಲಿ ಇಬ್ಬರು ಬಂಧಿತ ಉದ್ಯಮಿಗಳು, ಸುದ್ದಿ ವಾಹಿನಿಯ ಮುಖ್ಯಸ್ಥರು, ಹೈದರಾಬಾದ್ ಮೂಲದ ಮದ್ಯ ಉದ್ಯಮಿ, ದೆಹಲಿ ಮೂಲದ ಮದ್ಯ ವಿತರಕರು ಮತ್ತು ಅಬಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳು ಸೇರಿದ್ದಾರೆ ಎಂದು ವರದಿ ತಿಳಿಸಿದೆ.

ದೆಹಲಿ ಅಬಕಾರಿ ನೀತಿ ಹಗರಣ: 7 ಆರೋಪಿಗಳ ವಿರುದ್ಧ ಮೊದಲ ಆರೋಪಪಟ್ಟಿ ಸಲ್ಲಿಸಿದ ಸಿಬಿಐ
ಸಿಬಿಐ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Nov 25, 2022 | 9:46 PM

Share

ದೆಹಲಿ ಅಬಕಾರಿ ನೀತಿ ಹಗರಣ (Delhi Excise policy )ಪ್ರಕರಣದಲ್ಲಿ ಏಳು ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ಶುಕ್ರವಾರ ತನ್ನ ಮೊದಲ ಚಾರ್ಜ್ ಶೀಟ್ ಸಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಚಾರ್ಜ್ ಶೀಟ್‌ನಲ್ಲಿ ಹೆಸರಿಸಲಾದವರಲ್ಲಿ ಇಬ್ಬರು ಬಂಧಿತ ಉದ್ಯಮಿಗಳು, ಸುದ್ದಿ ವಾಹಿನಿಯ ಮುಖ್ಯಸ್ಥರು, ಹೈದರಾಬಾದ್ ಮೂಲದ ಮದ್ಯ ಉದ್ಯಮಿ, ದೆಹಲಿ ಮೂಲದ ಮದ್ಯ ವಿತರಕರು ಮತ್ತು ಅಬಕಾರಿ ಇಲಾಖೆಯ ಇಬ್ಬರು ಅಧಿಕಾರಿಗಳು ಸೇರಿದ್ದಾರೆ ಎಂದು ವರದಿ ತಿಳಿಸಿದೆ. ಹೆಸರುಗಳಲ್ಲಿ ಎಎಪಿ ಸಂವಹನ ತಂತ್ರಜ್ಞ ವಿಜಯ್ ನಾಯರ್, “ಸೌತ್ ಲಾಬಿ” ವ್ಯಕ್ತಿ ಅಭಿಷೇಕ್ ಬೋಯಿನ್ಪಲ್ಲಿ, ಮೂತ ಗೌತಮ್ (ಇಂಡಿಯಾ ಅಹೆಡ್ ನ್ಯೂಸ್ ಎಂಡಿ), ಸಮೀರ್ ಮಹೇಂದ್ರು, ಅರುಣ್ ಪಿಳ್ಳೈ ಮತ್ತು ಇಬ್ಬರು ಮಾಜಿ ಅಬಕಾರಿ ಅಧಿಕಾರಿಗಳಾದ ಕುಲದೀಪ್ ಮತ್ತು ನರೇಂದ್ರ ಸಿಂಗ್ ಸೇರಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ. ಸಂಬಂಧಿತ ವಿಚಾರಣಾ ನ್ಯಾಯಾಲಯಕ್ಕೆ ಶುಕ್ರವಾರ ಚಾರ್ಜ್ ಶೀಟ್ ಸಲ್ಲಿಸಲಾಗುವುದು ಎಂದು ಸಿಬಿಐ ಗುರುವಾರ ದೆಹಲಿ ಹೈಕೋರ್ಟ್‌ಗೆ ತಿಳಿಸಿತ್ತು.

ದೆಹಲಿ ಮದ್ಯ ನೀತಿ ಪ್ರಕರಣದ ಮೊದಲ ಚಾರ್ಜ್‌ಶೀಟ್‌ನಲ್ಲಿ ಮನೀಶ್ ಸಿಸೋಡಿಯಾ ಹೆಸರು  ಇಲ್ಲ

ಇಂದು ಸಲ್ಲಿಸಲಾದ ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐನ ಮೊದಲ ಆರೋಪಪಟ್ಟಿಯಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಹೆಸರಿಲ್ಲ. ತನಿಖಾ ಸಂಸ್ಥೆ ಸುಳ್ಳು ಆರೋಪಗಳಿಂದ ನಮ್ಮನ್ನು ಮುಕ್ತಗೊಳಿಸಿದೆ ಎಂದು ಇದರರ್ಥ ಎಂದು ಸಿಸೋಡಿಯಾ ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಹೇಳಿದೆ. ಚಾರ್ಜ್‌ಶೀಟ್‌ನಲ್ಲಿ ಎಎಪಿಯ ಸಂವಹನ ಮುಖ್ಯಸ್ಥ ಮತ್ತು ಸಿಸೋಡಿಯಾ ಅವರ ಆಪ್ತ ಸಹಾಯಕ ವಿಜಯ್ ನಾಯರ್ ಮತ್ತು ಹೈದರಾಬಾದ್ ಮೂಲದ ಉದ್ಯಮಿ ಅಭಿಷೇಕ್ ಬೋಯಿನ್ಪಲ್ಲಿ ಸೇರಿದಂತೆ ಏಳು ಆರೋಪಿಗಳನ್ನು ಹೆಸರಿಸಲಾಗಿದೆ. ಆಗಸ್ಟ್‌ನಲ್ಲಿ ಸಲ್ಲಿಸಲಾದ ಸಿಬಿಐನ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್) “ಆರೋಪಿ ನಂಬರ್ 1” ಎಂದು ಪಟ್ಟಿ ಮಾಡಲಾದ ಮನೀಶ್ ಸಿಸೋಡಿಯಾ ಅವರ ಪಾತ್ರದ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಏಜೆನ್ಸಿ ಮೂಲಗಳು ತಿಳಿಸಿವೆ.

ಬಿಜೆಪಿಯವರು ಮದ್ಯ ಹಗರಣದ ಕಥೆ ಕಟ್ಟಿಕೊಂಡು ನನ್ನ ಮನೆ ಮೇಲೆ ದಾಳಿ ನಡೆಸಿದ್ದರು. ಸಿಬಿಐ ಆರೋಪಪಟ್ಟಿಯಲ್ಲಿ ಮನೀಶ್ ಸಿಸೋಡಿಯಾ ಅವರ ಮಾನಹಾನಿ ಮಾಡಿರುವುದು ಸ್ಪಷ್ಟವಾಗಿದೆ. ಲೆಫ್ಟಿನೆಂಟ್ ಗವರ್ನರ್ ವಿನಯ್ ಸಕ್ಸೇನಾ ಮೂಲಕ ದೆಹಲಿ ಸರ್ಕಾರದ ವಿರುದ್ಧ ಬಿಜೆಪಿ ಸುಳ್ಳು ವರದಿ ಮಾಡಿದೆ. ಸಿಬಿಐ  ಮನೀಶ್ ಸಿಸೋಡಿಯಾಗೆ ಕ್ಲೀನ್ ಚಿಟ್ ನೀಡಿದೆ. ಲೆಫ್ಟಿನೆಂಟ್ ಗವರ್ನರ್ ರಾಜೀನಾಮೆ ನೀಡಬೇಕು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಸೋಡಿಯಾ ಹೇಳಿದ್ದಾರೆ.

ಸಿಸೋಡಿಯಾ ಅವರು ನಿರಪರಾಧಿ ಎಂಬುದಕ್ಕೆ ಸಿಬಿಐ ಚಾರ್ಜ್‌ಶೀಟ್ ಪುರಾವೆ ಎಂದು ಎಎಪಿ ಹೇಳಿದೆ.

ಎಲ್ಲ ಆರೋಪಗಳು ದೆಹಲಿ ನಾಗರಿಕ ಚುನಾವಣೆ ಮತ್ತು ಗುಜರಾತ್ ಚುನಾವಣೆಗೆ ಮುನ್ನ ನಮ್ಮ ನಾಯಕರನ್ನು ಗುರಿಯಾಗಿಸುವ ಪ್ರಯತ್ನವಾಗಿದೆ ಎಂದು ಸಾಬೀತುಪಡಿಸುತ್ತದೆ. ಬಿಜೆಪಿ ರಾಷ್ಟ್ರದ ಕ್ಷಮೆಯಾಚಿಸಬೇಕು ಎಂದು ಎಎಪಿ ವಕ್ತಾರ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಆರೋಪಪಟ್ಟಿಯಲ್ಲಿ ‘ಆರೋಪಿ ನಂಬರ್ 1’ ಕೂಡ ಇಲ್ಲದಿರುವುದು ಇತಿಹಾಸದಲ್ಲಿ ಇದೇ ಮೊದಲು. ಇದಕ್ಕಿಂತ ದೊಡ್ಡ ಸಮರ್ಥನೆ ಬೇರೊಂದಿಲ್ಲ ಎಂದು ಅವರು ಹೇಳಿದರು. ದೆಹಲಿಯ ಎಎಪಿ ಸರ್ಕಾರದ ಹೊಸ ಮದ್ಯ ನೀತಿಯಲ್ಲಿನ ಗಂಭೀರ ಉಲ್ಲಂಘನೆಯ ಆರೋಪಗಳನ್ನು ಸಿಬಿಐ ತನಿಖೆ ನಡೆಸುತ್ತಿದೆ.ದೆಹಲಿ ಸರ್ಕಾರ ಈ ನೀತಿಯನ್ನುಆರು ತಿಂಗಳೊಳಗೆ ಹಿಂತೆಗೆದುಕೊಂಡಿತ್ತು.

Published On - 9:45 pm, Fri, 25 November 22

ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
ಉತ್ಸಾಹದಿಂದ ಕೆಲಸ ಮಾಡುತ್ತಿರುವ ಸಚಿವ ಮಧು ಬಂಗಾರಪ್ಪ ಗಮನಹರಿಸುವರೇ?
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
VIDEO: ಅದ್ಭುತ ಕ್ಯಾಚ್ ಹಿಡಿದು ಮ್ಯಾಚ್ ಗೆಲ್ಲಿಸಿದ ಚಾರ್ಲಿ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
ಹಾಸನ ಜಿಲ್ಲಾಸ್ಪತ್ರೆಯನ್ನು ಮುಚ್ಚುವುದೇ ಒಳಿತು: ರೇವಣ್ಣ, ಶಾಸಕ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
4 ಸಿಕ್ಸ್, 8 ಫೋರ್: 56 ಎಸೆತಗಳಲ್ಲಿ ಪಂದ್ಯ ಮುಗಿಸಿದ ಮ್ಯಾಕ್ಸಿ ಪಡೆ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ