AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವೇಳೆ ತಮ್ಮ ಕಾರ್ಮಿಕರನ್ನು ವಿಮಾನದಲ್ಲಿ ಊರಿಗೆ ಕಳುಹಿಸಿದ್ದ ದೆಹಲಿಯ ರೈತ ಆತ್ಮಹತ್ಯೆ

ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅವರು ತಮ್ಮ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅವರ ಕುಟುಂಬಸ್ಥರನ್ನು ಭೇಟಿಯಾಗಲು ಅವರನ್ನು ವಿಮಾನದ ಮೂಲಕ ಬಿಹಾರಕ್ಕೆ ಕಳುಹಿಸಿದ್ದರು.

ಕೊವಿಡ್ ವೇಳೆ ತಮ್ಮ ಕಾರ್ಮಿಕರನ್ನು ವಿಮಾನದಲ್ಲಿ ಊರಿಗೆ ಕಳುಹಿಸಿದ್ದ ದೆಹಲಿಯ ರೈತ ಆತ್ಮಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 24, 2022 | 11:46 AM

Share

ನವದೆಹಲಿ: ಕೊವಿಡ್-19 (COVID-19) ಎಲ್ಲೆಡೆ ವ್ಯಾಪಕವಾಗಿ ಹರಡಿದ್ದ ಸಮಯದಲ್ಲಿ ಬಿಹಾರ (Bihar) ಮೂಲದ ತಮ್ಮ ಕಾರ್ಮಿಕರನ್ನು ಮನೆಗೆ ಕಳುಹಿಸಲು ವಿಮಾನದ ಟಿಕೆಟ್ ಖರೀದಿಸಿ, ವಿಮಾನದಲ್ಲಿ ಕಳುಹಿಸಿಕೊಟ್ಟಿದ್ದ ದೆಹಲಿ (Delhi) ಮೂಲದ ರೈತ ಪಪ್ಪನ್ ಸಿಂಗ್ ಗೆಹ್ಲೋಟ್ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ದೆಹಲಿಯ ಟಿಗಿ ಪುರ್ ಗ್ರಾಮದ ತಮ್ಮ ಮನೆಯಲ್ಲಿ ಅವರು ಮಂಗಳವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆ 5 ಗಂಟೆಗೆ ಈ ಘಟನೆ ಕುರಿತು ನಮಗೆ ಕರೆ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಪಪ್ಪನ್ ಸಿಂಗ್ ಗೆಹ್ಲೋಟ್ ಸೂಸೈಡ್ ನೋಟ್ ಬರೆದಿಟ್ಟಿದ್ದಾರೆ. ಅದರಲ್ಲಿ ಅನಾರೋಗ್ಯದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಬರೆದಿದ್ದಾರೆ. ಅಲ್ಲದೆ, ಈ ಕೃತ್ಯಕ್ಕೆ ತಾವೇ ಜವಾಬ್ದಾರರು ಎಂದು ಬರೆದಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Farmers Protest: ಭಾರೀ ಭದ್ರತೆಯ ನಡುವೆ ದೆಹಲಿಯ ಜಂತರ್ ಮಂತರ್​ನಲ್ಲಿ ರೈತರ ಪ್ರತಿಭಟನೆ, ಕರ್ನಾಟಕದಿಂದಲ್ಲೂ ಭಾಗಿ

ಕೊವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅವರು ತಮ್ಮ ಬಳಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಅವರ ಕುಟುಂಬಸ್ಥರನ್ನು ಭೇಟಿಯಾಗಲು ಅವರನ್ನು ವಿಮಾನದ ಮೂಲಕ ಬಿಹಾರಕ್ಕೆ ಕಳುಹಿಸಿದ್ದರು. ಇದಾದ ನಂತರ ಗೆಹ್ಲೋಟ್ ಬಹಳ ಚರ್ಚೆಯಲ್ಲಿದ್ದರು. ಅನೇಕರು ಅವರನ್ನು ದೆಹಲಿಯ ಸೋನು ಸೂದ್ ಎಂದು ಕರೆಯುತ್ತಿದ್ದರು. ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಕೂಡ ಈ ಬಗ್ಗೆ ಪ್ರಸ್ತಾಪಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:46 am, Wed, 24 August 22

ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!