AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಮಕ್ಕಳ ಸಮೇತ 4 ಮಂದಿ ಸಜೀವ ದಹನ

ನಾಲ್ಕು ಅಂತಸ್ತಿಕ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ವರು ಸಜೀವ ದಹನವಾಗಿರುವ ಘಟನೆ ದೆಹಲಿಯ ಗೀತಾ ಕಾಲೋನಿಯಲ್ಲಿ ನಡೆದಿದೆ. ಪಾರ್ಕಿಂಗ್ ಪ್ರದೇಶದಿಂದ ಬೆಂಕಿ ಹಬ್ಬುತ್ತಾ ಇಡೀ ಕಟ್ಟಡವನ್ನೇ ಆವರಿಸಿಕೊಂಡಿತ್ತು, ಆಗ ಹೊಗೆ ನೋಡಿ ಅಕ್ಕಪಕ್ಕದ ಮನೆಯವರು ತಕ್ಷಣ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು.

ದೆಹಲಿ: ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಬೆಂಕಿ, ಇಬ್ಬರು ಮಕ್ಕಳ ಸಮೇತ 4 ಮಂದಿ ಸಜೀವ ದಹನ
ದೆಹಲಿ ಬೆಂಕಿImage Credit source: NDTV
ನಯನಾ ರಾಜೀವ್
|

Updated on:Mar 14, 2024 | 9:59 AM

Share

ದೆಹಲಿಯ ಗೀತಾ ಕಾಲೋನಿಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಸಜೀವ ದಹನವಾಗಿದ್ದಾರೆ. ಪಾರ್ಕಿಂಗ್ ಪ್ರದೇಶದಿಂದ ಬೆಂಕಿ ಹಬ್ಬುತ್ತಾ ಇಡೀ ಕಟ್ಟಡವನ್ನೇ ಆವರಿಸಿಕೊಂಡಿತ್ತು, ಆಗ ಹೊಗೆ ನೋಡಿ ಅಕ್ಕಪಕ್ಕದ ಮನೆಯವರು ತಕ್ಷಣ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು.

ತಕ್ಷಣವೇ ಅಗ್ನಿಶಾಮಕ ದಳ ತಂಡ ಸ್ಥಳಕ್ಕೆ ಆಗಮಿಸಿ ತುಂಬಾ ಹೊತ್ತಿನ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಈ ಅಪಘಾತದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಪತಿ-ಪತ್ನಿಯರ ಜೊತೆಗೆ ಇಬ್ಬರು ಸಹೋದರಿಯರು ಕೂಡ ಮೃತಪಟ್ಟಿದ್ದಾರೆ.

ಬೆಳಗ್ಗೆ 5.22ರ ಸುಮಾರಿಗೆ ಘಟನೆ ನಡೆದಿದೆ, ಮೃತರನ್ನು ಮನೋಜ್​(30), ಸುಮನ್(28), ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶ: ಢಾಕಾದ ಆರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ಅವಘಡ, 43 ಮಂದಿ ಸಾವು, ಹಲವರಿಗೆ ಗಾಯ ಬಾಂಗ್ಲಾದೇಶದ ಢಾಕಾದಲ್ಲಿರುವ 6 ಅಂತಸ್ತಿನ ಶಾಂಪಿಂಗ್​ ಕಾಂಪ್ಲೆಕ್ಸ್​ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು 43 ಮಂದಿ ಸಜೀವದಹನವಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಗುರುವಾರ ತಡರಾತ್ರಿ, ಢಾಕಾದ ಗದ್ದಲದ ಡೌನ್‌ಟೌನ್ ಪ್ರದೇಶದಲ್ಲಿ ನೆಲೆಗೊಂಡಿರುವ ಗ್ರೀನ್ ಕೋಜಿ ಕಾಟೇಜ್ ಶಾಪಿಂಗ್ ಮಾಲ್ ಅನ್ನು ಜ್ವಾಲೆ ಆವರಿಸಿದೆ.

ಮತ್ತಷ್ಟು ಓದಿ: ಬೆಂಗಳೂರಿನ ಬಸವೇಶ್ವರನಗರದ ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ; ಗ್ಯಾರೇಜ್ ಮಾಲೀಕ ಸೇರಿ ನಾಲ್ವರಿಗೆ ಗಾಯ

ಮಾಲ್‌ನ ಮೊದಲ ಮಹಡಿಯಲ್ಲಿರುವ ಜನಪ್ರಿಯ ರೆಸ್ಟೊರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ, ಇದು ಕಟ್ಟಡದಾದ್ಯಂತ ವೇಗವಾಗಿ ಹರಡಿತು, ಅನೇಕರು ಒಳಗೆ ಸಿಲುಕಿಕೊಂಡರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ರಕ್ಷಣಾ ಕಾರ್ಯ ನಡೆಯುತ್ತಿದೆ ಅಗ್ನಿಶಾಮಕ ಸಿಬ್ಬಂದಿಯ ಸತತ ಪ್ರಯತ್ನಗಳ

ಹೊರತಾಗಿಯೂ, ಬೆಂಕಿಯು 43 ವ್ಯಕ್ತಿಗಳ ಜೀವವನ್ನು ಬಲಿ ತೆಗೆದುಕೊಂಡಿತು, ಆದರೆ ಕನಿಷ್ಠ 22 ಇತರರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು.

ಬೆಂಕಿಯ ಕಾರಣದ ಬಗ್ಗೆ ತನಿಖೆ ತನಿಖೆ ಮುಂದುವರಿದಿದ್ದು, ಈ ದುರಂತ ಘಟನೆಗೆ ಕಾರಣವನ್ನು ಶೀಘ್ರವೇ ಕಂಡುಹಿಡಿಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 40 ಮಂದಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಎರಡು ಗಂಟೆಗಳಲ್ಲಿ ಬೆಂಕಿಯನ್ನು ಹತೋಟಿಗೆ ತಂದರು ಎಂದು ಅವರು ಹೇಳಿದರು. 75 ಜನರನ್ನು ಜೀವಂತವಾಗಿ ರಕ್ಷಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:58 am, Thu, 14 March 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ