AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ. ದೆಹಲಿ ಬಿಜೆಪಿ ಘಟಕದಿಂದಲೂ ನೆರವು: […]

ದೆಹಲಿ ಅಗ್ನಿ ದುರಂತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಸಿಎಂ
ಸಾಧು ಶ್ರೀನಾಥ್​
|

Updated on: Dec 08, 2019 | 12:08 PM

Share

ದೆಹಲಿ: ಬೆಳ್ಳಂಬೆಳಗ್ಗೆ ಫಿಲ್ಮಿಸ್ತಾನ್ ಪ್ರದೇಶದಲ್ಲಿ ಅಗ್ನಿ ದುರಂತ ಸಂಭವಿಸಿ 43 ಮಂದಿ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಅರವಿಂದ ಕೇಜ್ರಿವಾಲ್ ಪರಿಶೀಲನೆ ನಡೆಸಿದ್ದಾರೆ. ತನಿಖೆಗೆ ಆದೇಶಿಸಿದ ಸಿಎಂ, 7 ದಿನದಲ್ಲಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಿಎಂ ಅರವಿಂದ ಕೇಜ್ರಿವಾಲ್ ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಮತ್ತು ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಘೋಷಿಸಿದ್ದಾರೆ.

ದೆಹಲಿ ಬಿಜೆಪಿ ಘಟಕದಿಂದಲೂ ನೆರವು: ಮೃತರ ಕುಟುಂಬಕ್ಕೆ ದೆಹಲಿ ಬಿಜೆಪಿ ಘಟಕವೂ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಆರ್ಥಿಕ ನೆರವು ಹಾಗು ಗಾಯಾಳುಗಳಿಗೆ ತಲಾ 25 ಸಾವಿರ ರೂಪಾಯಿ ನೀಡುವುದಾಗಿ ದೆಹಲಿ ಬಿಜೆಪಿ ಅಧ್ಯಕ್ಷ ಮನೋಜ್ ತಿವಾರಿ ಘೋಷಣೆ ಮಾಡಿದ್ದಾರೆ.

ಮಾಲೀಕನ ವಿರುದ್ಧ ಎಫ್​ಐಆರ್: ದುರಂತ ಸಂಬಂಧ ಎಫ್​ಐಆರ್ ದಾಖಲಿಸಿ ದೆಹಲಿಯ ಅಪರಾಧ ವಿಭಾಗದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕಟ್ಟಡ ಮಾಲೀಕನ ನಿರ್ಲಕ್ಷ್ಯದಿಂದಲೇ ದುರಂತ ಸಂಭವಿಸಿದೆ.ಹೀಗಾಗಿ ಕಟ್ಟಡ ಮಾಲೀಕನಿಗಾಗಿ ದೆಹಲಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ