AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ದಟ್ಟ ಮಂಜು, ಸರಿಯಾದ ಸಮಯಕ್ಕೆ ತಲುಪದ ವಿಮಾನ, ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬ

ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್, ಇಥಿಯೋಪಿಯಾ ಹಾಗೂ ಓಮನ್ ದೇಶಗಳ ಪ್ರವಾಸಕ್ಕೆ ಹೊರಟಿದ್ದಾರೆ. ಆದರೆ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಧಾನಿಯ ವಿದೇಶ ಪ್ರವಾಸಕ್ಕೆ ವಿಳಂಬವಾಗಿದೆ. ಬೆಳಗಿನ ವೇಳೆಯಲ್ಲಿ ದೆಹಲಿ ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟವಾದ ಮಂಜು ಆವರಿಸಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲು ಸಾಧ್ಯವಾಗಲಿಲ್ಲ. ಪ್ರಧಾನಿ ಬೆಳಗ್ಗೆ 8.30ಕ್ಕೆ ಹೊರಡಬೇಕಾಗಿತ್ತು.

ದೆಹಲಿಯಲ್ಲಿ ದಟ್ಟ ಮಂಜು, ಸರಿಯಾದ ಸಮಯಕ್ಕೆ ತಲುಪದ ವಿಮಾನ, ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Dec 15, 2025 | 9:55 AM

Share

ನವದೆಹಲಿ, ಡಿಸೆಂಬರ್ 15: ಪ್ರಧಾನಿ ನರೇಂದ್ರ ಮೋದಿ(Narendra Modi) ಜೋರ್ಡಾನ್, ಇಥಿಯೋಪಿಯಾ ಮತ್ತು ಓಮನ್ ದೇಶಗಳಿಗೆ ಪ್ರವಾಸ ಕೈಗೊಂಡಿದ್ದಾರೆ. ದೆಹಲಿಯಲ್ಲಿ ದಟ್ಟ ಮಂಜಿನಿಂದಾಗಿ ವಿಮಾನ ಸರಿಯಾದ ಸಮಯಕ್ಕೆ ಬಾರದ ಪರಿಣಾಮ ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬವಾಗಿದೆ. ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ದಟ್ಟವಾದ ಮಂಜಿನಿಂದಾಗಿ ವಿಳಂಬವಾಯಿತು. ಪ್ರಧಾನಿ ಬೆಳಗ್ಗೆ 8.30 ಕ್ಕೆ ಹೊರಡಬೇಕಿತ್ತು. ‘‘ನಾನು ಜೋರ್ಡಾನ್‌ಗೆ ಭೇಟಿ ನೀಡುತ್ತಿದ್ದೇನೆ, ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಅಲ್ಲಿಗೆ ಹೋಗುತ್ತಿದ್ದೇನೆ. ಈ ಐತಿಹಾಸಿಕ ಭೇಟಿಯು ನಮ್ಮ ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತದೆ’’ ಎಂದು ಪ್ರಧಾನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೆಳಗಿನ ತಾಪಮಾನವು 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಗ್ಗೆ ವಿಮಾನ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಡಿಸೆಂಬರ್ 16-17 ರಂದು ಪ್ರಧಾನಿ ಮೋದಿ ಇಥಿಯೋಪಿಯಾಗೆ ಭೇಟಿ ನೀಡಲಿದ್ದಾರೆ ಮತ್ತು ಅಂತಿಮ ಹಂತದಲ್ಲಿ ಡಿಸೆಂಬರ್ 17-18 ರಂದು ಓಮನ್​ಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 16 ರಂದು ಪ್ರಧಾನಿ ಮೋದಿ ಅವರು ಇಥಿಯೋಪಿಯಾಗೆ ತೆರಳಲಿದ್ದಾರೆ.

ಇದು ಪೂರ್ವ ಆಫ್ರಿಕಾದ ರಾಷ್ಟ್ರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ಅಡಿಸ್ ಅಬಾಬಾದಲ್ಲಿ ಇಥಿಯೋಪಿಯನ್ ಪ್ರಧಾನಿ ಅಬಿ ಅಹ್ಮದ್ ಅಲಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಮತ್ತಷ್ಟು ಓದಿ: ಸುಂಕದ ಉದ್ವಿಗ್ನತೆ ನಡುವೆ ಟ್ರಂಪ್ ಜೊತೆ ಪ್ರಧಾನಿ ಮೋದಿ ಮಾತುಕತೆ; ವ್ಯಾಪಾರ, ತಂತ್ರಜ್ಞಾನ ಸಹಕಾರದ ಬಗ್ಗೆ ಚರ್ಚೆ

ಇಥಿಯೋಪಿಯಾ ನಂತರ, ಪ್ರಧಾನಿ ಮೋದಿ ಡಿಸೆಂಬರ್ 17 ರಂದು ಒಮನ್‌ಗೆ ಪ್ರಯಾಣಿಸಲಿದ್ದಾರೆ. ಪ್ರಧಾನಿ ಮೋದಿ ಸುಲ್ತಾನ್ ಹೈಥಮ್ ಬಿನ್ ತಾರಿಕ್ ಅವರನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಒಮಾನ್ ದ್ವಿಪಕ್ಷೀಯ ಸಂಬಂಧಗಳ 70 ವರ್ಷಗಳನ್ನು ಆಚರಿಸಿದ್ದು, ಇದರ ಸ್ಮರಣಾರ್ಥವಾಗಿ ಪ್ರಧಾನಿ ಮೋದಿ ಓಮನ್‌ಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. 2023 ರ ನಂತರ ಇದು ಪ್ರಧಾನಿ ಮೋದಿ ಅವರ ಎರಡನೇ ಓಮನ್ ಭೇಟಿಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!