AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ

ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ
ಸ್ನೇಹಾ
ನಯನಾ ರಾಜೀವ್
|

Updated on: Jul 14, 2025 | 8:21 AM

Share

ನವದೆಹಲಿ, ಜುಲೈ 14: ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ಪೂರ್ವ ದೆಹಲಿಯ ಗೀತಾ ಕಾಲೋನಿ ಪ್ರದೇಶದ ಬಳಿಯಮುನಾ ನದಿಯಿಂದ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ. ಆಕೆಯ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ ಸ್ನೇಹಾ ಸಿಗ್ನೇಚರ್ ಸೇತುವೆಯಿಂದ ಜಿಗಿಯಲು ಯತ್ನಿಸಿದ್ದಳು ಆಗ ಕ್ಯಾಬ್ ಚಾಲಕ ಆಕೆಯನ್ನು ರಕ್ಷಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

ಆ ಪ್ರದೇಶದಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದ ಕಾರಣ , ಸ್ನೇಹಾ ಕ್ಯಾಬ್​ನಿಂದ ಇಳಿದ ಬಳಿಕ ಆಕೆಯ ಚಲನವಲನಗಳನ್ನು ಸರಿಯಾಗಿ ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಸ್ನೇಹಾ ಅಕ್ಕ ಬಿಪಾಶಾ ನೀಡಿರುವ ನಾಪತ್ತೆ ದೂರಿನ ಪ್ರಕಾರ ಪೊಲೀಸರು ಜುಲೈ 7ರ ಬೆಳಗ್ಗೆ ಸ್ನೇಹಾ ತಾಯಿ ಪಿಂಕಿ ಅವರಿಗೆ ತನ್ನ ಸ್ನೇಹಿತೆ ಪಿಟುನಿಯಾಳನ್ನು ಸರಾಯ್ ರೋಹಿಲ್ಲಾ ರೈಲು ನಿಲ್ದಾಣದಲ್ಲಿ ಬಿಡುವುದಾಗಿ ಹೇಳಿದ್ದಳು. ಸ್ನೇಹಾ ಬೆಳಗ್ಗೆ 5.15ರ ಸುಮಾರಿಗೆ ಮನೆಯಿಂದ ಹೊರಟಿದ್ದಳು.

ನಾವು ಬೆಳಗ್ಗೆ 8.45ಕ್ಕೆ ಕರೆ ಮಾಡಲು ಯತ್ನಿಸಿದಾಗ ಫೋನ್ ಸ್ವಿಚ್ಡ್​ ಆಫ್ ಆಗಿತ್ತು.ಆಕೆಯ ಸ್ನೇಹಿತೆಯನ್ನು ಸಂಪರ್ಕಿಸಿದಾಗ ಆಕೆ ತನ್ನನ್ನು ಭೇಟಿಯಾಗಲು ಬಂದೇ ಇಲ್ಲ ಎಂದು ಹೇಳಿದ್ದರು.ನಂತರ ನಾನು ಪಿಟೂನಿಯಾದಿಂದ ಕ್ಯಾಬ್ ಚಾಲಕನ ಸಂಖ್ಯೆಯನ್ನು ತೆಗೆದುಕೊಂಡು ಅವನಿಗೆ ಕರೆ ಮಾಡಿದೆ. ಅವರು ಸ್ನೇಹಾಳನ್ನು ವಜೀರಾಬಾದ್‌ನ ಸಿಗ್ನೇಚರ್ ಬ್ರಿಡ್ಜ್‌ನಲ್ಲಿ ಡ್ರಾಪ್ ಮಾಡಿದ್ದಾರೆ ಎಂದು ಹೇಳಿದರು ಎಂದು ಬಿಪಾಶಾ ಹೇಳಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್​​ಕೇಸ್​​ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ

ಚಾಲಕನ ಮಾಹಿತಿ ಮೇರೆಗೆ ಕುಟುಂಬವು ಹುಡುಕಿದಾಗ ಸ್ನೇಹಾಳ ಯಾವುದೇ ಸುಳಿವು ಸಿಗಲಿಲ್ಲ, ಯಾರೋ ಅಲ್ಲಿಂದ ಆಕೆಯನ್ನು ಅಪಹರಿಸಿರಬಹುದು ಎಂದು ಭಾವಿಸಿದ್ದರು. ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಹುಟುಕಾಟ ಆರಂಭಿಸಿದ್ದರು. ಕೊನೆಯದಾಗಿ ಆಕೆ ಸಿಕ್ಕಿದ್ದಾಳೆ ಆದರೆ ಅದು ಶವವಾಗಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!