AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ

ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ
ಸ್ನೇಹಾ
ನಯನಾ ರಾಜೀವ್
|

Updated on: Jul 14, 2025 | 8:21 AM

Share

ನವದೆಹಲಿ, ಜುಲೈ 14: ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ಪೂರ್ವ ದೆಹಲಿಯ ಗೀತಾ ಕಾಲೋನಿ ಪ್ರದೇಶದ ಬಳಿಯಮುನಾ ನದಿಯಿಂದ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ. ಆಕೆಯ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ ಸ್ನೇಹಾ ಸಿಗ್ನೇಚರ್ ಸೇತುವೆಯಿಂದ ಜಿಗಿಯಲು ಯತ್ನಿಸಿದ್ದಳು ಆಗ ಕ್ಯಾಬ್ ಚಾಲಕ ಆಕೆಯನ್ನು ರಕ್ಷಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

ಆ ಪ್ರದೇಶದಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದ ಕಾರಣ , ಸ್ನೇಹಾ ಕ್ಯಾಬ್​ನಿಂದ ಇಳಿದ ಬಳಿಕ ಆಕೆಯ ಚಲನವಲನಗಳನ್ನು ಸರಿಯಾಗಿ ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಸ್ನೇಹಾ ಅಕ್ಕ ಬಿಪಾಶಾ ನೀಡಿರುವ ನಾಪತ್ತೆ ದೂರಿನ ಪ್ರಕಾರ ಪೊಲೀಸರು ಜುಲೈ 7ರ ಬೆಳಗ್ಗೆ ಸ್ನೇಹಾ ತಾಯಿ ಪಿಂಕಿ ಅವರಿಗೆ ತನ್ನ ಸ್ನೇಹಿತೆ ಪಿಟುನಿಯಾಳನ್ನು ಸರಾಯ್ ರೋಹಿಲ್ಲಾ ರೈಲು ನಿಲ್ದಾಣದಲ್ಲಿ ಬಿಡುವುದಾಗಿ ಹೇಳಿದ್ದಳು. ಸ್ನೇಹಾ ಬೆಳಗ್ಗೆ 5.15ರ ಸುಮಾರಿಗೆ ಮನೆಯಿಂದ ಹೊರಟಿದ್ದಳು.

ನಾವು ಬೆಳಗ್ಗೆ 8.45ಕ್ಕೆ ಕರೆ ಮಾಡಲು ಯತ್ನಿಸಿದಾಗ ಫೋನ್ ಸ್ವಿಚ್ಡ್​ ಆಫ್ ಆಗಿತ್ತು.ಆಕೆಯ ಸ್ನೇಹಿತೆಯನ್ನು ಸಂಪರ್ಕಿಸಿದಾಗ ಆಕೆ ತನ್ನನ್ನು ಭೇಟಿಯಾಗಲು ಬಂದೇ ಇಲ್ಲ ಎಂದು ಹೇಳಿದ್ದರು.ನಂತರ ನಾನು ಪಿಟೂನಿಯಾದಿಂದ ಕ್ಯಾಬ್ ಚಾಲಕನ ಸಂಖ್ಯೆಯನ್ನು ತೆಗೆದುಕೊಂಡು ಅವನಿಗೆ ಕರೆ ಮಾಡಿದೆ. ಅವರು ಸ್ನೇಹಾಳನ್ನು ವಜೀರಾಬಾದ್‌ನ ಸಿಗ್ನೇಚರ್ ಬ್ರಿಡ್ಜ್‌ನಲ್ಲಿ ಡ್ರಾಪ್ ಮಾಡಿದ್ದಾರೆ ಎಂದು ಹೇಳಿದರು ಎಂದು ಬಿಪಾಶಾ ಹೇಳಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್​​ಕೇಸ್​​ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ

ಚಾಲಕನ ಮಾಹಿತಿ ಮೇರೆಗೆ ಕುಟುಂಬವು ಹುಡುಕಿದಾಗ ಸ್ನೇಹಾಳ ಯಾವುದೇ ಸುಳಿವು ಸಿಗಲಿಲ್ಲ, ಯಾರೋ ಅಲ್ಲಿಂದ ಆಕೆಯನ್ನು ಅಪಹರಿಸಿರಬಹುದು ಎಂದು ಭಾವಿಸಿದ್ದರು. ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಹುಟುಕಾಟ ಆರಂಭಿಸಿದ್ದರು. ಕೊನೆಯದಾಗಿ ಆಕೆ ಸಿಕ್ಕಿದ್ದಾಳೆ ಆದರೆ ಅದು ಶವವಾಗಿ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ