ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ

ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ದೆಹಲಿಯಲ್ಲಿ 6 ದಿನಗಳಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಯಮುನಾ ತಟದಲ್ಲಿ ಶವವಾಗಿ ಪತ್ತೆ
ಸ್ನೇಹಾ

Updated on: Jul 14, 2025 | 8:21 AM

ನವದೆಹಲಿ, ಜುಲೈ 14: ಕಳೆದ ಆರು ದಿನಗಳಿಂದ ದೆಹಲಿಯಲ್ಲಿ ನಾಪತ್ತೆಯಾಗಿದ್ದ ತ್ರಿಪುರಾದ ವಿದ್ಯಾರ್ಥಿನಿ(Student) ಸ್ನೇಹಾ ಯಮುನಾ ತಟದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 19 ವರ್ಷದ ವಿದ್ಯಾರ್ಥಿನಿ ದೆಹಲಿ ವಿಶ್ವವಿದ್ಯಾಲಯದ ಆತ್ಮ ರಾಮ ಸನಾತನ ಧರ್ಮ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ. ಗಣಿತಶಾಸ್ತ್ರದ ವಿದ್ಯಾರ್ಥಿನಿಯಾಗಿದ್ದರು. ಅವರು ತನ್ನ ಕುಟುಂಬದೊಂದಿಗೆ ದೆಹಲಿಯ ಪರ್ಯಾವರಣ್ ಕಾಂಪ್ಲೆಕ್ಸ್ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಜುಲೈ 7ರಂದು ನಾಪತ್ತೆಯಾಗಿದ್ದರು.

ಪೂರ್ವ ದೆಹಲಿಯ ಗೀತಾ ಕಾಲೋನಿ ಪ್ರದೇಶದ ಬಳಿಯಮುನಾ ನದಿಯಿಂದ ಅವರ ಶವವನ್ನು ವಶಪಡಿಸಿಕೊಳ್ಳಲಾಗಿದೆ. ಆಕೆಯ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ ಸ್ನೇಹಾ ಸಿಗ್ನೇಚರ್ ಸೇತುವೆಯಿಂದ ಜಿಗಿಯಲು ಯತ್ನಿಸಿದ್ದಳು ಆಗ ಕ್ಯಾಬ್ ಚಾಲಕ ಆಕೆಯನ್ನು ರಕ್ಷಿಸಿದ್ದಾಗಿ ಮಾಹಿತಿ ನೀಡಿದ್ದಾರೆ.

ಆ ಪ್ರದೇಶದಲ್ಲಿ ಸಿಸಿಟಿವಿ ಸರಿಯಾಗಿ ಕೆಲಸ ಮಾಡದ ಕಾರಣ , ಸ್ನೇಹಾ ಕ್ಯಾಬ್​ನಿಂದ ಇಳಿದ ಬಳಿಕ ಆಕೆಯ ಚಲನವಲನಗಳನ್ನು ಸರಿಯಾಗಿ ಪತ್ತೆ ಹಚ್ಚಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಸ್ನೇಹಾ ಅಕ್ಕ ಬಿಪಾಶಾ ನೀಡಿರುವ ನಾಪತ್ತೆ ದೂರಿನ ಪ್ರಕಾರ ಪೊಲೀಸರು ಜುಲೈ 7ರ ಬೆಳಗ್ಗೆ ಸ್ನೇಹಾ ತಾಯಿ ಪಿಂಕಿ ಅವರಿಗೆ ತನ್ನ ಸ್ನೇಹಿತೆ ಪಿಟುನಿಯಾಳನ್ನು ಸರಾಯ್ ರೋಹಿಲ್ಲಾ ರೈಲು ನಿಲ್ದಾಣದಲ್ಲಿ ಬಿಡುವುದಾಗಿ ಹೇಳಿದ್ದಳು. ಸ್ನೇಹಾ ಬೆಳಗ್ಗೆ 5.15ರ ಸುಮಾರಿಗೆ ಮನೆಯಿಂದ ಹೊರಟಿದ್ದಳು.

ನಾವು ಬೆಳಗ್ಗೆ 8.45ಕ್ಕೆ ಕರೆ ಮಾಡಲು ಯತ್ನಿಸಿದಾಗ ಫೋನ್ ಸ್ವಿಚ್ಡ್​ ಆಫ್ ಆಗಿತ್ತು.ಆಕೆಯ ಸ್ನೇಹಿತೆಯನ್ನು ಸಂಪರ್ಕಿಸಿದಾಗ ಆಕೆ ತನ್ನನ್ನು ಭೇಟಿಯಾಗಲು ಬಂದೇ ಇಲ್ಲ ಎಂದು ಹೇಳಿದ್ದರು.ನಂತರ ನಾನು ಪಿಟೂನಿಯಾದಿಂದ ಕ್ಯಾಬ್ ಚಾಲಕನ ಸಂಖ್ಯೆಯನ್ನು ತೆಗೆದುಕೊಂಡು ಅವನಿಗೆ ಕರೆ ಮಾಡಿದೆ. ಅವರು ಸ್ನೇಹಾಳನ್ನು ವಜೀರಾಬಾದ್‌ನ ಸಿಗ್ನೇಚರ್ ಬ್ರಿಡ್ಜ್‌ನಲ್ಲಿ ಡ್ರಾಪ್ ಮಾಡಿದ್ದಾರೆ ಎಂದು ಹೇಳಿದರು ಎಂದು ಬಿಪಾಶಾ ಹೇಳಿದ್ದಾರೆ.

ಮತ್ತಷ್ಟು ಓದಿ: ತೆಲಂಗಾಣದ ಪೊದೆಯಲ್ಲಿ ಸಿಕ್ಕ ಸೂಟ್​​ಕೇಸ್​​ನಲ್ಲಿ ಮಹಿಳೆಯ ಕೊಳೆತ ಶವ ಪತ್ತೆ

ಚಾಲಕನ ಮಾಹಿತಿ ಮೇರೆಗೆ ಕುಟುಂಬವು ಹುಡುಕಿದಾಗ ಸ್ನೇಹಾಳ ಯಾವುದೇ ಸುಳಿವು ಸಿಗಲಿಲ್ಲ, ಯಾರೋ ಅಲ್ಲಿಂದ ಆಕೆಯನ್ನು ಅಪಹರಿಸಿರಬಹುದು ಎಂದು ಭಾವಿಸಿದ್ದರು. ನಂತರ ಪೊಲೀಸರು ತಕ್ಷಣ ಕ್ರಮ ಕೈಗೊಂಡು, ಹುಟುಕಾಟ ಆರಂಭಿಸಿದ್ದರು. ಕೊನೆಯದಾಗಿ ಆಕೆ ಸಿಕ್ಕಿದ್ದಾಳೆ ಆದರೆ ಅದು ಶವವಾಗಿ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us