AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತೆಗೆ ಚಾಕುವಿನಿಂದ ಇರಿದು ತಾನೂ ಇರಿದುಕೊಂಡ ಯುವಕ

ಮದುವೆಯಾಗುವುದಿಲ್ಲ ಎಂದು ಹೇಳಿದ್ದಕ್ಕೆ ತನ್ನ ಸ್ನೇಹಿತೆಗೆ ಚಾಕುವಿನಿಂದ ಇರಿದು ಬಳಿಕ ತಾನೂ ಕೂಡ ಇರಿದುಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಆಕೆಗೆ ಮದುವೆಯಾಗುವಂತೆ ಆಕೆಯ ಸ್ನೇಹಿತ ಒತ್ತಾಯಿಸಿದ್ದ. ಆದರೆ ಆಕೆ ಒಪ್ಪಿಕೊಳ್ಳದ ಪರಿಣಾಮ ಚಾಕುವಿನಿಂದ ಇರಿದಿದ್ದಾನೆ, ಬಳಿಕ ತಾನೂ ಇರಿದುಕೊಂಡಿದ್ದಾನೆ. ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಇಬ್ಬರೂ ಸುಮಾರು ಒಂದು ವರ್ಷದಿಂದ ಪರಿಚಿತರಾಗಿದ್ದರು.

ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತೆಗೆ ಚಾಕುವಿನಿಂದ ಇರಿದು ತಾನೂ ಇರಿದುಕೊಂಡ ಯುವಕ
ಕ್ರೈಂImage Credit source: NDTV
ನಯನಾ ರಾಜೀವ್
|

Updated on: Apr 07, 2025 | 2:37 PM

Share

ದೆಹಲಿ, ಏಪ್ರಿಲ್ 07: ಯುವತಿ ಮದುವೆ(Marriage)ಯಾಗಲು ನಿರಾಕರಿಸಿದ್ದಕ್ಕೆ ಆಕೆಗೆ ಚಾಕುವಿನಿಂದ ಇರಿದು ತಾನೂ ಇರಿದುಕೊಂಡ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಕಂಟೋನ್ಮೆಂಟ್​ ಬಳಿ ಘಟನೆ ನಡೆದಿದೆ. ಆಕೆಗೆ ಮದುವೆಯಾಗುವಂತೆ ಆಕೆಯ ಸ್ನೇಹಿತ ಒತ್ತಾಯಿಸಿದ್ದ. ಆದರೆ ಆಕೆ ಒಪ್ಪಿಕೊಳ್ಳದ ಪರಿಣಾಮ ಚಾಕುವಿನಿಂದ ಇರಿದಿದ್ದಾನೆ, ಬಳಿಕ ತಾನೂ ಇರಿದುಕೊಂಡಿದ್ದಾನೆ.

ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರ ಪ್ರಕಾರ, ಇಬ್ಬರೂ ಸುಮಾರು ಒಂದು ವರ್ಷದಿಂದ ಪರಿಚಿತರಾಗಿದ್ದರು ಮತ್ತು ಆಗಾಗ ಒಟ್ಟಿಗೆ ಓಡಾಡುತ್ತಿದ್ದರು. ಯುವತಿಗೆ ಈ ಸಂಬಂಧವನ್ನು ಮುಂದುವರೆಸಲು ಅಥವಾ ಆತನನ್ನು ಮದುವೆಯಾಗಲು ಇಷ್ಟವಿರಲಿಲ್ಲ. ಹೀಗಾಗಿ ಅವಳ ಮನದ ಭಾವನೆಯನ್ನು ಹೇಳಿಕೊಂಡಾಗ ಕೋಪಗೊಂಡ ಯುವಕ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಆತನನ್ನು ಅಮಿತ್ ಎಂದು ಗುರುತಿಸಲಾಗಿದೆ. ಸಂಜೆ 4 ಗಂಟೆ ಸುಮಾರಿಗೆ ಅಮಿತ್ ಈ ಕೃತ್ಯವೆಸಗಿದ್ದಾನೆ. ಸದರ್ ಬಜಾರ್‌ನ ಅಂಗಡಿಯೊಂದರ ಸಿಸಿಟಿವಿ ದೃಶ್ಯಾವಳಿಯಲ್ಲಿ ಅಮಿತ್ ಪದೇ ಪದೇ ಹುಡುಗಿಯನ್ನು ತಡೆಯುತ್ತಿರುವುದು ಮತ್ತು ಅವಳು ಅವನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಅವಳಿಗೆ ಏನೋ ಹೇಳುತ್ತಿರುವುದು ಕಂಡುಬರುತ್ತದೆ.

ಇದನ್ನೂ ಓದಿ
Image
ಅಕ್ರಮ ಸಂಬಂಧಕ್ಕೆ ಅಡ್ಡಿ.. ಪತಿ ಕಥೆ ಮುಗಿಸಿದ ಪಾಪಿ ಪತ್ನಿ!
Image
ಬೇಕರಿಗೆ ಬಂದಿದ್ದ ಬಾಲಕಿಗೆ ಚಾಕೊಲೇಟ್ ಕೊಟ್ಟು ಲೈಂಗಿಕ ಕಿರುಕುಳ
Image
ಬ್ಯಾಡ್ಮಿಂಟನ್ ಕೋಚ್​ನಿಂದ ಬಾಲಕಿ ಮೇಲೆ ಅತ್ಯಾಚಾರ: ವಿಡಿಯೋಗಳು ಪತ್ತೆ!
Image
ಎಚ್ಚರ: ಬುರ್ಖಾ ಧರಿಸಿ ಬರ್ತಾರೆ, ಚಿನ್ನ-ಬೆಳ್ಳಿ ಎಗರಿಸಿ ಪರಾರಿಯಾಗ್ತಾರೆ!

ಮತ್ತಷ್ಟು ಓದಿ: ಮದುವೆ ಬೇಡವೆಂದು ವರನನ್ನು ಕೊಲ್ಲಲು ಸುಪಾರಿಕೊಟ್ಟ ವಧು

ಬಾಲಕಿಯ ಕುತ್ತಿಗೆ ಮತ್ತು ಹೊಟ್ಟೆಯ ಎಡಭಾಗಕ್ಕೆ ಇರಿತದಿಂದ ಗಾಯವಾಗಿದೆ. ಆ ಹುಡುಗ ಕಂಟೋನ್ಮೆಂಟ್ ಪ್ರದೇಶದ ನಿವಾಸಿ. ಘಟನೆಯ ಬಗ್ಗೆ ಗಾಯಗೊಂಡ ಹುಡುಗಿಯ ಸಹೋದರಿ ಹೇಳುವಂತೆ, ಅಮಿತ್ ನಮಗೆ ಮೊದಲು ಪರಿಚಯವಿರಲಿಲ್ಲ. ಅವನು ತನ್ನ ಪಕ್ಕದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ನಾವು ಅವನನ್ನು ಸ್ನೇಹಿತ ಎಂದು ಭಾವಿಸಿದ್ದೆವು. ಸದರ್‌ನಲ್ಲಿ ಅವರಿಬ್ಬರನ್ನೂ ಒಟ್ಟಿಗೆ ನೋಡಿದ್ದೆವು, ಆಗ ಇಬ್ಬರೂ ಎಲ್ಲರಂತೆಯೇ ನಗುನಗುತ್ತಾ ಚೆನ್ನಾಗಿಯೇ ಮಾತನಾಡುತ್ತಿದ್ದರು. ಆದರೆ ಸಂಜೆ ಏಕಾಏಕಿ ಹಲ್ಲೆ ನಡೆದಿದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ