AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ರೈಲ್ವೆ ಡಿಪಾರ್ಟ್​​ಮೆಂಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on: Jun 26, 2021 | 1:27 PM

Share

ದೆಹಲಿಯ ಹಜ್ರತ್​ ನಿಜಾಮುದ್ದೀನ್​ ಸ್ಟೇಶನ್​​ನಿಂದ ಗೋವಾದ ಮಡಗಾಂವ್​ಗೆ ತೆರಳುತ್ತಿದ್ದ, ಗೋವಾದ ರಾಜಧಾನಿ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಳಿ ಕಾರ್ಬುಡೆ​ ಸುರಂಗ ಮಾರ್ಗದಲ್ಲಿ ಚಲಿಸುವಾಗ ಹಳಿ ತಪ್ಪಿದೆ. ಯಾವ ಪ್ರಯಾಣಿಕರಿಗೂ ಜೀವಹಾನಿಯಾಗಿಲ್ಲ, ಗಾಯವೂ ಆಗಿಲ್ಲ ಎಂದು ಕೊಂಕಣ ರೈಲ್ವೆ ವಿಭಾಗದ ವಕ್ತಾರ ತಿಳಿಸಿದ್ದಾರೆ. ಹಳಿಗಳ ಮೇಲೆ ಬಂಡೆ ಬಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದ್ದಾರೆ.

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ಹೇಳಿದ್ದಾರೆ. ಹಳಿ ತಪ್ಪಿದ ರೈಲನ್ನು ದುರಸ್ತಿ ಪಡಿಸಲು ರೈಲು ನಿರ್ವಹಣಾ ವಾಹನ (RMV) ಸ್ಥಳಕ್ಕೆ ತೆರಳಿದೆ. ಆ್ಯಕ್ಸಿಡೆಂಟ್​ ರಿಲೀಫ್​ ಮೆಡಿಕಲ್​ ವಾಹನ ಕೂಡ ಸ್ಥಳಕ್ಕೆ ತಲುಪಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಳಿ ಮೇಲೆ ಬಿದ್ದ ಬಂಡೆಯನ್ನು ತೆರವುಗೊಳಿಸಲು ಕೊಂಕಣ ರೈಲ್ವೆ ಅಧಿಕಾರಿಗಳೂ ಧಾವಿಸಿದ್ದಾರೆ.

ಮುಂಬೈ ಸಮೀಪದ ರೋಹಾದಿಂದ ಮಂಗಳೂರು ಬಳಿಯ ಥೋಕೂರ್​​​ವರೆಗೆ ಸುಮಾರು 750 ಕಿಮೀ ಉದ್ದದ ಮಾರ್ಗ ಕೊಂಕಣ ರೈಲ್ವೆ ಮಾರ್ಗವಾಗಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯವನ್ನು ಒಳಗೊಳ್ಳುತ್ತದೆ. ಇಲ್ಲಿನ ಮಾರ್ಗದಲ್ಲಿ ನದಿಗಳು, ಪರ್ವತ ಪ್ರದೇಶಗಳು, ಕಮರಿಗಳೆಲ್ಲ ಇದ್ದು, ದುರ್ಗಮ ಪ್ರದೇಶದಲ್ಲಿ ರೈಲ್ವೆ ಹಳಿ ಹಾದುಹೋಗಿದೆ. ಇಲ್ಲಿ ಸಂಚಾರ ಸುಲಭವಲ್ಲ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ