Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ರೈಲ್ವೆ ಡಿಪಾರ್ಟ್​​ಮೆಂಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 26, 2021 | 1:27 PM

ದೆಹಲಿಯ ಹಜ್ರತ್​ ನಿಜಾಮುದ್ದೀನ್​ ಸ್ಟೇಶನ್​​ನಿಂದ ಗೋವಾದ ಮಡಗಾಂವ್​ಗೆ ತೆರಳುತ್ತಿದ್ದ, ಗೋವಾದ ರಾಜಧಾನಿ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಳಿ ಕಾರ್ಬುಡೆ​ ಸುರಂಗ ಮಾರ್ಗದಲ್ಲಿ ಚಲಿಸುವಾಗ ಹಳಿ ತಪ್ಪಿದೆ. ಯಾವ ಪ್ರಯಾಣಿಕರಿಗೂ ಜೀವಹಾನಿಯಾಗಿಲ್ಲ, ಗಾಯವೂ ಆಗಿಲ್ಲ ಎಂದು ಕೊಂಕಣ ರೈಲ್ವೆ ವಿಭಾಗದ ವಕ್ತಾರ ತಿಳಿಸಿದ್ದಾರೆ. ಹಳಿಗಳ ಮೇಲೆ ಬಂಡೆ ಬಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದ್ದಾರೆ.

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ಹೇಳಿದ್ದಾರೆ. ಹಳಿ ತಪ್ಪಿದ ರೈಲನ್ನು ದುರಸ್ತಿ ಪಡಿಸಲು ರೈಲು ನಿರ್ವಹಣಾ ವಾಹನ (RMV) ಸ್ಥಳಕ್ಕೆ ತೆರಳಿದೆ. ಆ್ಯಕ್ಸಿಡೆಂಟ್​ ರಿಲೀಫ್​ ಮೆಡಿಕಲ್​ ವಾಹನ ಕೂಡ ಸ್ಥಳಕ್ಕೆ ತಲುಪಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಳಿ ಮೇಲೆ ಬಿದ್ದ ಬಂಡೆಯನ್ನು ತೆರವುಗೊಳಿಸಲು ಕೊಂಕಣ ರೈಲ್ವೆ ಅಧಿಕಾರಿಗಳೂ ಧಾವಿಸಿದ್ದಾರೆ.

ಮುಂಬೈ ಸಮೀಪದ ರೋಹಾದಿಂದ ಮಂಗಳೂರು ಬಳಿಯ ಥೋಕೂರ್​​​ವರೆಗೆ ಸುಮಾರು 750 ಕಿಮೀ ಉದ್ದದ ಮಾರ್ಗ ಕೊಂಕಣ ರೈಲ್ವೆ ಮಾರ್ಗವಾಗಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯವನ್ನು ಒಳಗೊಳ್ಳುತ್ತದೆ. ಇಲ್ಲಿನ ಮಾರ್ಗದಲ್ಲಿ ನದಿಗಳು, ಪರ್ವತ ಪ್ರದೇಶಗಳು, ಕಮರಿಗಳೆಲ್ಲ ಇದ್ದು, ದುರ್ಗಮ ಪ್ರದೇಶದಲ್ಲಿ ರೈಲ್ವೆ ಹಳಿ ಹಾದುಹೋಗಿದೆ. ಇಲ್ಲಿ ಸಂಚಾರ ಸುಲಭವಲ್ಲ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ