AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ರೈಲ್ವೆ ಡಿಪಾರ್ಟ್​​ಮೆಂಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 26, 2021 | 1:27 PM

Share

ದೆಹಲಿಯ ಹಜ್ರತ್​ ನಿಜಾಮುದ್ದೀನ್​ ಸ್ಟೇಶನ್​​ನಿಂದ ಗೋವಾದ ಮಡಗಾಂವ್​ಗೆ ತೆರಳುತ್ತಿದ್ದ, ಗೋವಾದ ರಾಜಧಾನಿ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಳಿ ಕಾರ್ಬುಡೆ​ ಸುರಂಗ ಮಾರ್ಗದಲ್ಲಿ ಚಲಿಸುವಾಗ ಹಳಿ ತಪ್ಪಿದೆ. ಯಾವ ಪ್ರಯಾಣಿಕರಿಗೂ ಜೀವಹಾನಿಯಾಗಿಲ್ಲ, ಗಾಯವೂ ಆಗಿಲ್ಲ ಎಂದು ಕೊಂಕಣ ರೈಲ್ವೆ ವಿಭಾಗದ ವಕ್ತಾರ ತಿಳಿಸಿದ್ದಾರೆ. ಹಳಿಗಳ ಮೇಲೆ ಬಂಡೆ ಬಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದ್ದಾರೆ.

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ಹೇಳಿದ್ದಾರೆ. ಹಳಿ ತಪ್ಪಿದ ರೈಲನ್ನು ದುರಸ್ತಿ ಪಡಿಸಲು ರೈಲು ನಿರ್ವಹಣಾ ವಾಹನ (RMV) ಸ್ಥಳಕ್ಕೆ ತೆರಳಿದೆ. ಆ್ಯಕ್ಸಿಡೆಂಟ್​ ರಿಲೀಫ್​ ಮೆಡಿಕಲ್​ ವಾಹನ ಕೂಡ ಸ್ಥಳಕ್ಕೆ ತಲುಪಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಳಿ ಮೇಲೆ ಬಿದ್ದ ಬಂಡೆಯನ್ನು ತೆರವುಗೊಳಿಸಲು ಕೊಂಕಣ ರೈಲ್ವೆ ಅಧಿಕಾರಿಗಳೂ ಧಾವಿಸಿದ್ದಾರೆ.

ಮುಂಬೈ ಸಮೀಪದ ರೋಹಾದಿಂದ ಮಂಗಳೂರು ಬಳಿಯ ಥೋಕೂರ್​​​ವರೆಗೆ ಸುಮಾರು 750 ಕಿಮೀ ಉದ್ದದ ಮಾರ್ಗ ಕೊಂಕಣ ರೈಲ್ವೆ ಮಾರ್ಗವಾಗಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯವನ್ನು ಒಳಗೊಳ್ಳುತ್ತದೆ. ಇಲ್ಲಿನ ಮಾರ್ಗದಲ್ಲಿ ನದಿಗಳು, ಪರ್ವತ ಪ್ರದೇಶಗಳು, ಕಮರಿಗಳೆಲ್ಲ ಇದ್ದು, ದುರ್ಗಮ ಪ್ರದೇಶದಲ್ಲಿ ರೈಲ್ವೆ ಹಳಿ ಹಾದುಹೋಗಿದೆ. ಇಲ್ಲಿ ಸಂಚಾರ ಸುಲಭವಲ್ಲ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ