AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ರೈಲ್ವೆ ಡಿಪಾರ್ಟ್​​ಮೆಂಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 26, 2021 | 1:27 PM

Share

ದೆಹಲಿಯ ಹಜ್ರತ್​ ನಿಜಾಮುದ್ದೀನ್​ ಸ್ಟೇಶನ್​​ನಿಂದ ಗೋವಾದ ಮಡಗಾಂವ್​ಗೆ ತೆರಳುತ್ತಿದ್ದ, ಗೋವಾದ ರಾಜಧಾನಿ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಳಿ ಕಾರ್ಬುಡೆ​ ಸುರಂಗ ಮಾರ್ಗದಲ್ಲಿ ಚಲಿಸುವಾಗ ಹಳಿ ತಪ್ಪಿದೆ. ಯಾವ ಪ್ರಯಾಣಿಕರಿಗೂ ಜೀವಹಾನಿಯಾಗಿಲ್ಲ, ಗಾಯವೂ ಆಗಿಲ್ಲ ಎಂದು ಕೊಂಕಣ ರೈಲ್ವೆ ವಿಭಾಗದ ವಕ್ತಾರ ತಿಳಿಸಿದ್ದಾರೆ. ಹಳಿಗಳ ಮೇಲೆ ಬಂಡೆ ಬಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದ್ದಾರೆ.

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ಹೇಳಿದ್ದಾರೆ. ಹಳಿ ತಪ್ಪಿದ ರೈಲನ್ನು ದುರಸ್ತಿ ಪಡಿಸಲು ರೈಲು ನಿರ್ವಹಣಾ ವಾಹನ (RMV) ಸ್ಥಳಕ್ಕೆ ತೆರಳಿದೆ. ಆ್ಯಕ್ಸಿಡೆಂಟ್​ ರಿಲೀಫ್​ ಮೆಡಿಕಲ್​ ವಾಹನ ಕೂಡ ಸ್ಥಳಕ್ಕೆ ತಲುಪಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಳಿ ಮೇಲೆ ಬಿದ್ದ ಬಂಡೆಯನ್ನು ತೆರವುಗೊಳಿಸಲು ಕೊಂಕಣ ರೈಲ್ವೆ ಅಧಿಕಾರಿಗಳೂ ಧಾವಿಸಿದ್ದಾರೆ.

ಮುಂಬೈ ಸಮೀಪದ ರೋಹಾದಿಂದ ಮಂಗಳೂರು ಬಳಿಯ ಥೋಕೂರ್​​​ವರೆಗೆ ಸುಮಾರು 750 ಕಿಮೀ ಉದ್ದದ ಮಾರ್ಗ ಕೊಂಕಣ ರೈಲ್ವೆ ಮಾರ್ಗವಾಗಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯವನ್ನು ಒಳಗೊಳ್ಳುತ್ತದೆ. ಇಲ್ಲಿನ ಮಾರ್ಗದಲ್ಲಿ ನದಿಗಳು, ಪರ್ವತ ಪ್ರದೇಶಗಳು, ಕಮರಿಗಳೆಲ್ಲ ಇದ್ದು, ದುರ್ಗಮ ಪ್ರದೇಶದಲ್ಲಿ ರೈಲ್ವೆ ಹಳಿ ಹಾದುಹೋಗಿದೆ. ಇಲ್ಲಿ ಸಂಚಾರ ಸುಲಭವಲ್ಲ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!