AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ರೈಲ್ವೆ ಡಿಪಾರ್ಟ್​​ಮೆಂಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 26, 2021 | 1:27 PM

ದೆಹಲಿಯ ಹಜ್ರತ್​ ನಿಜಾಮುದ್ದೀನ್​ ಸ್ಟೇಶನ್​​ನಿಂದ ಗೋವಾದ ಮಡಗಾಂವ್​ಗೆ ತೆರಳುತ್ತಿದ್ದ, ಗೋವಾದ ರಾಜಧಾನಿ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಳಿ ಕಾರ್ಬುಡೆ​ ಸುರಂಗ ಮಾರ್ಗದಲ್ಲಿ ಚಲಿಸುವಾಗ ಹಳಿ ತಪ್ಪಿದೆ. ಯಾವ ಪ್ರಯಾಣಿಕರಿಗೂ ಜೀವಹಾನಿಯಾಗಿಲ್ಲ, ಗಾಯವೂ ಆಗಿಲ್ಲ ಎಂದು ಕೊಂಕಣ ರೈಲ್ವೆ ವಿಭಾಗದ ವಕ್ತಾರ ತಿಳಿಸಿದ್ದಾರೆ. ಹಳಿಗಳ ಮೇಲೆ ಬಂಡೆ ಬಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದ್ದಾರೆ.

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ಹೇಳಿದ್ದಾರೆ. ಹಳಿ ತಪ್ಪಿದ ರೈಲನ್ನು ದುರಸ್ತಿ ಪಡಿಸಲು ರೈಲು ನಿರ್ವಹಣಾ ವಾಹನ (RMV) ಸ್ಥಳಕ್ಕೆ ತೆರಳಿದೆ. ಆ್ಯಕ್ಸಿಡೆಂಟ್​ ರಿಲೀಫ್​ ಮೆಡಿಕಲ್​ ವಾಹನ ಕೂಡ ಸ್ಥಳಕ್ಕೆ ತಲುಪಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಳಿ ಮೇಲೆ ಬಿದ್ದ ಬಂಡೆಯನ್ನು ತೆರವುಗೊಳಿಸಲು ಕೊಂಕಣ ರೈಲ್ವೆ ಅಧಿಕಾರಿಗಳೂ ಧಾವಿಸಿದ್ದಾರೆ.

ಮುಂಬೈ ಸಮೀಪದ ರೋಹಾದಿಂದ ಮಂಗಳೂರು ಬಳಿಯ ಥೋಕೂರ್​​​ವರೆಗೆ ಸುಮಾರು 750 ಕಿಮೀ ಉದ್ದದ ಮಾರ್ಗ ಕೊಂಕಣ ರೈಲ್ವೆ ಮಾರ್ಗವಾಗಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯವನ್ನು ಒಳಗೊಳ್ಳುತ್ತದೆ. ಇಲ್ಲಿನ ಮಾರ್ಗದಲ್ಲಿ ನದಿಗಳು, ಪರ್ವತ ಪ್ರದೇಶಗಳು, ಕಮರಿಗಳೆಲ್ಲ ಇದ್ದು, ದುರ್ಗಮ ಪ್ರದೇಶದಲ್ಲಿ ರೈಲ್ವೆ ಹಳಿ ಹಾದುಹೋಗಿದೆ. ಇಲ್ಲಿ ಸಂಚಾರ ಸುಲಭವಲ್ಲ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ