AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ರೈಲ್ವೆ ಡಿಪಾರ್ಟ್​​ಮೆಂಟ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುರಂಗ ಮಾರ್ಗದಲ್ಲಿ ಹಳಿ ತಪ್ಪಿದ ದೆಹಲಿ-ಗೋವಾ ರಾಜಧಾನಿ ಎಕ್ಸ್​ಪ್ರೆಸ್​; ಬಂಡೆ ಬಿದ್ದಿದ್ದೇ ಅಪಘಾತಕ್ಕೆ ಕಾರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 26, 2021 | 1:27 PM

Share

ದೆಹಲಿಯ ಹಜ್ರತ್​ ನಿಜಾಮುದ್ದೀನ್​ ಸ್ಟೇಶನ್​​ನಿಂದ ಗೋವಾದ ಮಡಗಾಂವ್​ಗೆ ತೆರಳುತ್ತಿದ್ದ, ಗೋವಾದ ರಾಜಧಾನಿ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೀಡಾಗಿದೆ. ಇಂದು ಮುಂಜಾನೆ 4 ಗಂಟೆ ವೇಳೆಯಲ್ಲಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಬಳಿ ಕಾರ್ಬುಡೆ​ ಸುರಂಗ ಮಾರ್ಗದಲ್ಲಿ ಚಲಿಸುವಾಗ ಹಳಿ ತಪ್ಪಿದೆ. ಯಾವ ಪ್ರಯಾಣಿಕರಿಗೂ ಜೀವಹಾನಿಯಾಗಿಲ್ಲ, ಗಾಯವೂ ಆಗಿಲ್ಲ ಎಂದು ಕೊಂಕಣ ರೈಲ್ವೆ ವಿಭಾಗದ ವಕ್ತಾರ ತಿಳಿಸಿದ್ದಾರೆ. ಹಳಿಗಳ ಮೇಲೆ ಬಂಡೆ ಬಿದ್ದಿದ್ದೇ ಈ ಅಪಘಾತಕ್ಕೆ ಕಾರಣ ಎಂದು ಅವರು ಮಾಹಿತಿ ನೀಡಿದ್ದಾರೆ.

ರತ್ನಗಿರಿ ಜಿಲ್ಲೆಯ ಉಕ್ಷಿ ಮತ್ತು ಭೋಕೆ ರೈಲ್ವೆ ಸ್ಟೇಶನ್​ಗಳ ಮಧ್ಯೆ ಸಿಗುವ ಕಾರ್ಬುಡೆ ಸುರಂಗ ಮಾರ್ಗದಲ್ಲಿ ಹಳಿಗಳ ಮೇಲೆ ಬಂಡೆ ಬಿದ್ದಿತ್ತು. ಇದರಿಂದಾಗಿ ರೈಲಿನ ಮುಂದಿನ ಚಕ್ರಗಳು ಹಳಿ ತಪ್ಪುವಂತಾಯಿತು ಎಂದು ಹೇಳಿದ್ದಾರೆ. ಹಳಿ ತಪ್ಪಿದ ರೈಲನ್ನು ದುರಸ್ತಿ ಪಡಿಸಲು ರೈಲು ನಿರ್ವಹಣಾ ವಾಹನ (RMV) ಸ್ಥಳಕ್ಕೆ ತೆರಳಿದೆ. ಆ್ಯಕ್ಸಿಡೆಂಟ್​ ರಿಲೀಫ್​ ಮೆಡಿಕಲ್​ ವಾಹನ ಕೂಡ ಸ್ಥಳಕ್ಕೆ ತಲುಪಿದೆ ಎಂದೂ ಮಾಹಿತಿ ನೀಡಿದ್ದಾರೆ. ಹಳಿ ಮೇಲೆ ಬಿದ್ದ ಬಂಡೆಯನ್ನು ತೆರವುಗೊಳಿಸಲು ಕೊಂಕಣ ರೈಲ್ವೆ ಅಧಿಕಾರಿಗಳೂ ಧಾವಿಸಿದ್ದಾರೆ.

ಮುಂಬೈ ಸಮೀಪದ ರೋಹಾದಿಂದ ಮಂಗಳೂರು ಬಳಿಯ ಥೋಕೂರ್​​​ವರೆಗೆ ಸುಮಾರು 750 ಕಿಮೀ ಉದ್ದದ ಮಾರ್ಗ ಕೊಂಕಣ ರೈಲ್ವೆ ಮಾರ್ಗವಾಗಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ರಾಜ್ಯವನ್ನು ಒಳಗೊಳ್ಳುತ್ತದೆ. ಇಲ್ಲಿನ ಮಾರ್ಗದಲ್ಲಿ ನದಿಗಳು, ಪರ್ವತ ಪ್ರದೇಶಗಳು, ಕಮರಿಗಳೆಲ್ಲ ಇದ್ದು, ದುರ್ಗಮ ಪ್ರದೇಶದಲ್ಲಿ ರೈಲ್ವೆ ಹಳಿ ಹಾದುಹೋಗಿದೆ. ಇಲ್ಲಿ ಸಂಚಾರ ಸುಲಭವಲ್ಲ.

ಇದನ್ನೂ ಓದಿ: ಹೆದ್ದಾರಿಯಲ್ಲಿ ಕಣ್ಣೆದುರೇ ಅಪಘಾತಕ್ಕೆ ಒಳಗಾದವರ ನೆರವಿಗೆ ನಿಂತ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!