Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿತಿಮೀರಿದ ಕೊರೊನಾ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೈಟ್​ ಕರ್ಫ್ಯೂ ಜಾರಿ

ದೇಶದಲ್ಲಿ ಕೊರೊನಾ ಎರಡನೇ ಅಲೆ ಭಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೊರೊನಾ ಹಬ್ಬುವುದನ್ನು ತಡೆಯಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ತನಕ ನೈಟ್​ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಿತಿಮೀರಿದ ಕೊರೊನಾ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನೈಟ್​ ಕರ್ಫ್ಯೂ ಜಾರಿ
ಸಾಂದರ್ಭಿಕ ಚಿತ್ರ
Follow us
Skanda
| Updated By: ganapathi bhat

Updated on: Apr 06, 2021 | 2:22 PM

ದೆಹಲಿ: ದೇಶದಲ್ಲಿ ಕೊರೊನಾ ಎರಡನೇ ಅಲೆ ಭಯ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಕೊರೊನಾ ಹಬ್ಬುವುದನ್ನು ತಡೆಯಲು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರಾತ್ರಿ 10ರಿಂದ ಬೆಳಗ್ಗೆ 5ರ ತನಕ ನೈಟ್​ ಕರ್ಫ್ಯೂ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈಗಾಗಲೇ ದೇಶದಲ್ಲಿ ಒಂದೇ ದಿನ 1 ಲಕ್ಷ ಕೊವಿಡ್​ ಪ್ರಕರಣಗಳು ದಾಖಲಾಗಿದ್ದು, ಆರಂಭದಿಂದ ಇಲ್ಲಿಯವರೆಗೆ ಒಂದೇ ದಿನದಲ್ಲಿ ದಾಖಲಾದ ಗರಿಷ್ಠ ಪ್ರಕರಣ ಇದಾಗಿದೆ. ಹೀಗಾಗಿ ದೇಶಾದ್ಯಂತ ಬಹುತೇಕ ರಾಜ್ಯಗಳು ಕಟ್ಟೆಚ್ಚರ ವಹಿಸುತ್ತಿವೆ.

ಮಹಾರಾಷ್ಟ್ರದಲ್ಲೂ ನೈಟ್​ ಕರ್ಫ್ಯೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕಿಗೆ ತಡೆಯೊಡ್ಡಲು ಸಂಪೂರ್ಣ ಮಹಾರಾಷ್ಟ್ರ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಲಾಕ್​ಡೌನ್ ವಿಧಿಸಲು ಮಹಾರಾಷ್ಟ್ರ ಸರ್ಕಾರ ಎರಡು ದಿನಗಳ ಹಿಂದೆಯೇ ನಿರ್ಧರಿಸಿದೆ. ಹೆಚ್ಚುತ್ತಿರುವ ಕೊರೊನಾ ಸೋಂಕಿನ ಕುರಿತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ರಾತ್ರಿ 8 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಈಗಾಗಲೇ ತಿಳಿಸಿದೆ.

ಕೇವಲ ಅನಿವಾರ್ಯ ಸೇವೆಗಳು ಮಾತ್ರ ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸಬಹುದು. ಚಿತ್ರಮಂದಿರಗಳು, ಗಾರ್ಡನ್, ಮತ್ತು ಆಟದ ಅಂಗಣಗಳನ್ನು ತೆರೆಯುವಂತಿಲ್ಲ. ಸರ್ಕಾರಿ ಕಚೇರಿಗಳನ್ನು ಅರ್ಧದಷ್ಟು ಸಿಬ್ಬಂದಿಗಳ ಮೂಲಕ ತೆರೆಯಬಹುದು. ಕಟ್ಟಡ ನಿರ್ಮಾಣ, ಮಾರುಕಟ್ಟೆ ಮತ್ತು ಕಾರ್ಖಾನೆಗಳ ಚಟುವಟಿಕೆಗಳು ಕೊರೊನಾ ತಡೆ ಮಾರ್ಗಸೂಚಿಯ ಪ್ರಕಾರ ಕಾರ್ಯನಿರ್ವಹಿಸಬಹುದು ಎಂದು ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ.

ಪುಣೆಯಲ್ಲಿ ಈಗಾಗಲೇ ಜಾರಿಯಾಗಿದೆ ನೈಟ್ ಕರ್ಫ್ಯೂ ಪುಣೆ ಜಿಲ್ಲೆಯಲ್ಲಿ ಏಪ್ರಿಲ್ 3ರಿಂದಲೇ ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಮಾರ್ಗಸೂಚಿ ಬಿಡುಗಡೆಗೊಳಿಸಲಾಗಿತ್ತು. ಪುಣೆ (ಮಹಾರಾಷ್ಟ್ರ) ಡಿವಿಷನಲ್ ಕಮಿಷನರ್ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ, ಬಾರ್, ಹೊಟೇಲ್, ರೆಸ್ಟೋರೆಂಟ್​ಗಳು ಏಳು ದಿನಗಳ ಕಾಲ ಕಾರ್ಯನಿರ್ವಹಿಸುವಂತಿಲ್ಲ. ಹೊಟೆಲ್ ಹಾಗೂ ರೆಸ್ಟೋರೆಂಟ್​ಗಳಿಂದ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ. ಜೊತೆಗೆ, ಧಾರ್ಮಿಕ ಕ್ಷೇತ್ರಗಳು ಕೂಡ 7 ದಿನಗಳ ಕಾಲ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು.

ಮದುವೆ ಹಾಗೂ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸರ್ಕಾರ ತಡೆಯೊಡ್ಡಿದೆ. ಸಾವು ಸಂಭವಿಸಿದಲ್ಲಿ ಕೇವಲ 20 ಮತ್ತು ವಿವಾಹ ಸಮಾರಂಭದಲ್ಲಿ ಕೇವಲ 50 ಜನರು ಸೇರಬಹುದು ಎಂದು ಪುಣೆಯಲಲ್ಲಿ ಏಪ್ರಿಲ್ 3ಕ್ಕೆ ಸೂಚನೆ ನೀಡಲಾಗಿತ್ತು.

ಇದನ್ನೂ ಓದಿ: Covid-19 Prevention: ಜಗತ್ತಿನಾದ್ಯಂತ ಮತ್ತೆ ಹೆಚ್ಚುತ್ತಿದೆ ಕೊರೊನಾ ಸೋಂಕು; ಡೂಡಲ್​ ಮೂಲಕ ಮಾಸ್ಕ್​​ನ​ ಮಹತ್ವ ಸಾರಿದ ಗೂಗಲ್​ 

ಕೊರೊನಾ ಹೆಚ್ಚಳ: ಬೆಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳಿಗೆ 15 ದಿನ ರಜೆ ಘೋಷಣೆ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ