ದೆಹಲಿಯಲ್ಲಿ ದೀಪಾವಳಿ ವೇಳೆ ಪಟಾಕಿ ಸಂಗ್ರಹ, ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದ ಕೇಜ್ರಿವಾಲ್ ಸರ್ಕಾರ

Delhi: "ಕಳೆದ ವರ್ಷ, ವ್ಯಾಪಾರಿಗಳು ಈಗಾಗಲೇ ಪಟಾಕಿಗಳನ್ನು ಮಾರಾಟಕ್ಕಾಗಿ ಸಂಗ್ರಹಿಸಿದ ನಂತರ ನಿಷೇಧವನ್ನು ವಿಧಿಸಲಾಯಿತು, ಅದು ಅವರಿಗೆ ನಷ್ಟವನ್ನು ಉಂಟುಮಾಡಿತು. ಸಂಪೂರ್ಣ ನಿಷೇಧದ ದೃಷ್ಟಿಯಿಂದ ಪಟಾಕಿಗಳನ್ನು ಸಂಗ್ರಹಿಸದಂತೆ ನಾನು ವ್ಯಾಪಾರಿಗಳಿಗೆ ಮನವಿ ಮಾಡುತ್ತೇನೆ" ಎಂದು ಅವರು ಹೇಳಿದರು.

ದೆಹಲಿಯಲ್ಲಿ ದೀಪಾವಳಿ ವೇಳೆ ಪಟಾಕಿ ಸಂಗ್ರಹ, ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದ ಕೇಜ್ರಿವಾಲ್ ಸರ್ಕಾರ
ಅರವಿಂದ ಕೇಜ್ರಿವಾಲ್
Edited By: ರಶ್ಮಿ ಕಲ್ಲಕಟ್ಟ

Updated on: Sep 15, 2021 | 3:31 PM

ದೆಹಲಿ: ದೆಹಲಿಯಲ್ಲಿ ಮಾಲಿನ್ಯ ವಿಪರೀತ ಮಟ್ಟಕ್ಕೆ ತಲುಪಿದ್ದರಿಂದ ಅರವಿಂದ ಕೇಜ್ರಿವಾಲ್ ಸರ್ಕಾರವು ದೀಪಾವಳಿ ಸಮಯದಲ್ಲಿ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಿದೆ. “ದೀಪಾವಳಿಯ ಸಂದರ್ಭದಲ್ಲಿ ಕಳೆದ ಮೂರು ವರ್ಷಗಳಿಂದ ರಾಷ್ಟ್ರ ರಾಜಧಾನಿಯಲ್ಲಿನ ತೀವ್ರ ಮಾಲಿನ್ಯದ ಮಟ್ಟವನ್ನು ನೋಡಿ ಕಳೆದ ವರ್ಷದಂತೆ ಈ ಬಾರಿಯೂ ದೆಹಲಿಯಲ್ಲಿ ಎಲ್ಲಾ ರೀತಿಯ ಪಟಾಕಿಗಳ ಸಂಗ್ರಹಣೆ, ಮಾರಾಟ ಮತ್ತು ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗುತ್ತಿದೆ” ಎಂದು ಕೇಜ್ರಿವಾಲ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

“ಕಳೆದ ವರ್ಷ, ವ್ಯಾಪಾರಿಗಳು ಈಗಾಗಲೇ ಪಟಾಕಿಗಳನ್ನು ಮಾರಾಟಕ್ಕಾಗಿ ಸಂಗ್ರಹಿಸಿದ ನಂತರ ನಿಷೇಧವನ್ನು ವಿಧಿಸಲಾಯಿತು, ಅದು ಅವರಿಗೆ ನಷ್ಟವನ್ನು ಉಂಟುಮಾಡಿತು. ಸಂಪೂರ್ಣ ನಿಷೇಧದ ದೃಷ್ಟಿಯಿಂದ ಪಟಾಕಿಗಳನ್ನು ಸಂಗ್ರಹಿಸದಂತೆ ನಾನು ವ್ಯಾಪಾರಿಗಳಿಗೆ ಮನವಿ ಮಾಡುತ್ತೇನೆ” ಎಂದು ಅವರು ಹೇಳಿದರು.
ರಾಷ್ಟ್ರ ರಾಜಧಾನಿಯಲ್ಲಿ ಅಕ್ಟೋಬರ್ ಆರಂಭದೊಂದಿಗೆ ವಾಯು ಮಾಲಿನ್ಯದ ಮಟ್ಟಗಳಲ್ಲಿ ಸಂಭವನೀಯ ಏರಿಕೆಯ ದೃಷ್ಟಿಯಿಂದ, ದೆಹಲಿ ಸರ್ಕಾರವು ಮಂಗಳವಾರ ಎಲ್ಲಾ ಸಂಬಂಧಿತ ಇಲಾಖೆಗಳಿಗೆ ಸೆಪ್ಟೆಂಬರ್ 21 ರೊಳಗೆ ಚಳಿಗಾಲದ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವಂತೆ ಆದೇಶಿಸಿದೆ.


ಇಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ಅವರು ಪ್ರವಾಹ ಮತ್ತು ನೀರಾವರಿ ಇಲಾಖೆ, ದೆಹಲಿಯ ಎಲ್ಲಾ ಮೂರು ಮಹಾನಗರ ಪಾಲಿಕೆಗಳು (MCD), ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC), ದೆಹಲಿ ಅಭಿವೃದ್ಧಿ ಪ್ರಾಧಿಕಾರ (DDA), ಕೇಂದ್ರ ಲೋಕೋಪಯೋಗಿ ಇಲಾಖೆ(CPWD) ಭಾರತದ ಲೋಕೋಪಯೋಗಿ ಇಲಾಖೆ (PWD), ದೆಹಲಿ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ (DSIIDC), ದೆಹಲಿ ಜಲ ಮಂಡಳಿ (DJB), ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), ದೆಹಲಿ ಮೆಟ್ರೋ ರೈಲು ನಿಗಮ (DMRC) ಮತ್ತು ಸಾರಿಗೆ ಇಲಾಖೆ ಸೆಪ್ಟೆಂಬರ್ 21 ರೊಳಗೆ ತಮ್ಮ ಕ್ರಿಯಾ ಯೋಜನೆಯನ್ನು ಪರಿಸರ ಇಲಾಖೆಗೆ ಸಲ್ಲಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇದನ್ನೂ ಓದಿ: Engineers Day ದೆಹಲಿಯಲ್ಲಿ ಕೇಜ್ರಿವಾಲ್ ಕಾರ್ಯಗಳನ್ನು ಪ್ರದರ್ಶಿಸಿ ಐಐಟಿ ಎಂಜಿನಿಯರ್ ಸಿಎಂನ್ನು ಹೊಗಳಿದ ಎಎಪಿ

(Delhi government banned the storage sale and use of firecrackers during Diwali )

 

Web contact

TV9 Kannada

Read More
Follow Us