AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನವರಿ 1, 2022ರವರೆಗೆ ದೆಹಲಿಯಲ್ಲಿ ಪಟಾಕಿ ಹೊಡೆಯುವಂತಿಲ್ಲ

ಎಲ್ಲಾ ರೀತಿಯ ಪಟಾಕಿಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದ್ದು, ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ.

ಜನವರಿ 1, 2022ರವರೆಗೆ ದೆಹಲಿಯಲ್ಲಿ ಪಟಾಕಿ ಹೊಡೆಯುವಂತಿಲ್ಲ
ಅರವಿಂದ ಕೇಜ್ರಿವಾಲ್
TV9 Web
| Edited By: |

Updated on: Sep 28, 2021 | 10:14 PM

Share

ದೆಹಲಿ:  ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನುನವದೆಹಲಿಯಲ್ಲಿ 2022ರ ಜನವರಿ 1ರವರೆಗೆ ನಿಷೇಧಿಸಿ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ. ಎಲ್ಲಾ ರೀತಿಯ ಪಟಾಕಿಗಳನ್ನು ಈ ಅವಧಿಯಲ್ಲಿ ನಿಷೇಧಿಸಲಾಗಿದ್ದು, ವಾಯುಮಾಲಿನ್ಯ ತಡೆಗಟ್ಟುವ ಉದ್ದೇಶದಿಂದ ಈ ನಿರ್ಣಯ ಕೈಗೊಳ್ಳಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಸಾಲುಸಾಲು ಹಬ್ಬಗಳು ಬರಲಿದ್ದು ಹಬ್ಬಗಳ ಆಚರಣೆಯಲ್ಲಿ ಪಟಾಕಿ ಸಿಡಿಸುವುದು ವಾಯುಮಾಲಿನ್ಯಕ್ಕೆ ಕಾರಣವಾಗಲಿದೆ. ಹೀಗಾಗಿ ಪಟಾಕಿ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿ ತಿಳಿಸಿದೆ.

ಪಟಾಕಿಗಳನ್ನು ಸಿಡಿಸುವುದರಿಂದ ವಿಪರೀತ ವಾಯುಮಾಲಿನ್ಯವಾಗುತ್ತದೆ. ಮತ್ತದು ಶ್ವಾಸಕೋಶ ಸಂಬಂಧಿತ ಖಾಯಿಲೆಗಳಿಗೆ ಕಾರಣವಾಗುತ್ತದೆ ಎಂದು ಈಗಾಗಲೇ ಹಲವು ಪರಿಣಿತರು ಸರ್ಕಾರಕ್ಕೆ ಸಲಹೆ ನೀಡಿದ್ದರು. ಈ ಸಲಹೆ ಆಧರಿಸಿ ಪಟಾಕಿ ನಿಷೇಧದ ನಿರ್ಣಯ ಕೈಗೊಳ್ಳಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ. ಅಲ್ಲದೇ ವಾಯುಮಾಲಿನ್ಯ ಕೊವಿಡ್ ಪಿಡುಗಿನ ಈ ಸಂದರ್ಭದಲ್ಲಿ ವೃದ್ಧರು ಮತ್ತು ಚಿಕ್ಕಮಕ್ಕಳ ಶ್ವಾಸಕೋಶಕ್ಕೆ ಹಾನಿಯುಂಟು ಮಾಡುವ ಸಂಭಾವ್ಯತೆಯೂ ಹೆಚ್ಚಿದೆ. ಹೀಗಾಗಿ ಪಟಾಕಿಯ ಬಳಕೆ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ ಎಂದು ದೆಹಲಿ ಸರ್ಕಾರ ತಿಳಿಸಿದೆ.

ದೆಹಲಿಯಲ್ಲಿ ವಾಯುಮಾಲಿನ್ಯ ತಗ್ಗಿಸಲು ಸಿದ್ಧವಾಯ್ತು ಹೊಗೆ ಗೋಪುರ; ಅಕ್ಟೋಬರ್​ 1ರಿಂದ ಕಾರ್ಯನಿರ್ವಹಣೆ ರಾಷ್ಟ್ರರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯವಂತೂ ಮಿತಿಮೀರಿದೆ. ಅಲ್ಲಿನ ಜನರು ಸ್ವಚ್ಛಗಾಳಿ ಉಸಿರಾಡಲು ಸಾಧ್ಯವಾಗದೆ ಶ್ವಾಸಕೋಶಿ ಸಂಬಂಧಿತ ಕಾಯಿಲೆಗಳಿಂದ ಬಳಲುವವರ ಸಂಖ್ಯೆ ಹೆಚ್ಚಾಗಿದೆ. ಹೀಗಿರುವಾದ ದೆಹಲಿ ಸರ್ಕಾರ ಜನರಿಗೊಂದು ಗುಡ್​ನ್ಯೂಸ್​ ಕೊಟ್ಟಿದೆ. ದೆಹಲಿಯ ಕೊನಾಟ್​ ಪ್ರದೇಶದಲ್ಲಿ ನಿರ್ಮಾಣವಾದ ಹೊಗೆ ಗೋಪುರ (Smog Tower)ದ ಪ್ರಯೋಗ ಮುಗಿದಿದೆ. ಅಕ್ಟೋಬರ್​ 1ರಿಂದ ಈ ಗೋಪುರ ಕಾರ್ಯ ನಿರ್ವಹಿಸಲಿದೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್​ ರಾಯ್​ ತಿಳಿಸಿದ್ದಾರೆ.  ಇಂದು ಟ್ವೀಟ್ ಮಾಡಿರುವ ಅವರು, ಹೊಗೆ ಗೋಪುರದ ಪ್ರಾಯೋಗಿಕ ಕಾರ್ಯ ಮುಕ್ತಾಯವಾಗಿದೆ. ಅಕ್ಟೋಬರ್​ 1ರಿಂದ ಪೂರ್ಣ ಪ್ರಮಾಣದಲ್ಲಿ ಇದು ಕೆಲಸ ನಿರ್ವಹಿಸಲಿದೆ. ಅದರ ಉಸ್ತುವಾರಿ, ಮೇಲ್ವಿಚಾರಣೆ ನೋಡಿಕೊಳ್ಳಲು ಐಐಟಿ-ಬಾಂಬೆ, ಐಐಟಿ-ದೆಹಲಿ ಮತ್ತು ಡಿಪಿಸಿಸಿಯ ವಿಜ್ಞಾನಿಗಳ ತಂಡ ಸಿದ್ಧವಾಗಿದೆ ಎಂದು ತಿಳಿಸಿದ್ದಾರೆ.

ಈ ಹೊಗೆ ಗೋಪುರ ಮಲಿನ ಯುಕ್ತ ಗಾಳಿಯನ್ನು ಶುದ್ಧೀಕರಣಗೊಳಿಸುತ್ತದೆ. ಇದರಿಂದಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಇಳಿಯಲಿದೆ. ಜನರು ಶುದ್ಧವಾದ ಗಾಳಿಯನ್ನು ಉಸಿರಾಡಬಹುದು. ನಗರದಲ್ಲಿ ಗಾಳಿಯ ಗುಣಮಟ್ಟ ಕ್ಷೀಣಿಸುತ್ತಿರುವುದನ್ನು ತಡೆಯಲು ದೆಹಲಿ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದರಲ್ಲಿ ಈ ಹೊಗೆ ಗೋಪುರವೂ ಒಂದು. ಇನ್ನು ಚಳಿಗಾಲದಲ್ಲಂತೂ ಇನ್ನಷ್ಟು ಕೆಟ್ಟ ಅನುಭವ ಆಗುತ್ತದೆ. ಅದನ್ನು ತಡೆಯಲೆಂದೇ ಕ್ರಿಯಾಯೋಜನೆ ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು  ಗೋಪಾಲ್​ ರಾಯ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

ನಿರ್ದೇಶಕ ಸುಸಿ ಗಣೇಶನ್ ವಿರುದ್ಧ ಮಿಟೂ ಆರೋಪ ಮಾಡಿದ್ದ ಲೀನಾ ಮಣಿಮೆಕಲೈ; ಪ್ರಕರಣದ ಇತ್ತೀಚಿನ ಮಾಹಿತಿ ಇಲ್ಲಿದೆ

ನಿರ್ದೇಶಕ ಸುಸಿ ಗಣೇಶನ್ ವಿರುದ್ಧ ಮಿಟೂ ಆರೋಪ ಮಾಡಿದ್ದ ಲೀನಾ ಮಣಿಮೆಕಲೈ; ಪ್ರಕರಣದ ಇತ್ತೀಚಿನ ಮಾಹಿತಿ ಇಲ್ಲಿದೆ

(Delhi Government bans Firecrackers till January 1 2022)

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ