AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸರ್ಕಾರ ಕೊಡದಿದ್ದರೂ ನಾವು ಉಚಿತವಾಗಿ ಲಸಿಕೆ ವಿತರಿಸುತ್ತೇವೆ: ಅರವಿಂದ್ ಕೇಜ್ರಿವಾಲ್

ಜೀವ ಉಳಿಸಬಲ್ಲ ಕೊರೊನಾ ಲಸಿಕೆಯನ್ನು ಕೊಳ್ಳುವ ಶಕ್ತಿಯೂ ಕೆಲವರಲ್ಲಿ ಇಲ್ಲ. ಆದ್ದರಿಂದ ಇಂತಹ ಕಠಿಣ ಸಂದರ್ಭದಲ್ಲಿ ಉಚಿತವಾಗಿ ಲಸಿಕೆ ನೀಡುವುದು ಮುಖ್ಯ.

ಕೇಂದ್ರ ಸರ್ಕಾರ ಕೊಡದಿದ್ದರೂ ನಾವು ಉಚಿತವಾಗಿ ಲಸಿಕೆ ವಿತರಿಸುತ್ತೇವೆ: ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Skanda
| Edited By: |

Updated on: Jan 13, 2021 | 7:20 PM

Share

ದೆಹಲಿ: ಒಂದುವೇಳೆ ಕೇಂದ್ರ ಸರ್ಕಾರ ಉಚಿತವಾಗಿ ಕೊರೊನಾ ಲಸಿಕೆ ಕೊಡದಿದ್ದರೆ ದೆಹಲಿ ಜನತೆಗೆ ಉಚಿತ ಲಸಿಕೆ ನೀಡುವ ಜವಾಬ್ದಾರಿ ನಮ್ಮದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ದೇಶಾದ್ಯಂತ ಜನರು ಕಷ್ಟದಲ್ಲಿರುವುದರಿಂದ ಉಚಿತವಾಗಿ ಕೊರೊನಾ ಲಸಿಕೆ ನೀಡುವಂತೆ ಕೇಂದ್ರಕ್ಕೆ ಈಗಾಗಲೇ ಮನವಿ ಮಾಡಿದ್ದೇವೆ. ಅವರು ಇದಕ್ಕೆ ಒಪ್ಪದಿದ್ದರೂ ನಮ್ಮ ರಾಜ್ಯದ ಜನರಿಂದ ಯಾವುದೇ ಹಣ ಪಡೆಯದೇ ಲಸಿಕೆ ನೀಡಲು ನಾವು ನಿರ್ಧರಿಸಿದ್ದೇವೆ ಎಂದು ತಿಳಿಸಿದ್ದಾರೆ.

ಕೊರೊನಾ ಹೊಡೆತದಿಂದಾಗಿ ಕಂಗಾಲಾಗಿರುವ ದೇಶದ ಜನ ಸಾಮಾನ್ಯರನ್ನು ನಾವು ಗಮನದಲ್ಲಿಟ್ಟುಕೊಂಡು ಲಸಿಕೆ ವಿತರಿಸಬೇಕು. ಜೀವ ಉಳಿಸಬಲ್ಲ ಕೊರೊನಾ ಲಸಿಕೆಯನ್ನು ಕೊಳ್ಳುವ ಶಕ್ತಿಯೂ ಕೆಲವರಲ್ಲಿ ಇಲ್ಲ. ಆದ್ದರಿಂದ ಇಂತಹ ಕಠಿಣ ಸಂದರ್ಭದಲ್ಲಿ ಉಚಿತವಾಗಿ ಲಸಿಕೆ ನೀಡುವುದು ಮುಖ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಲಸಿಕೆಯ ಬಗ್ಗೆ ವದಂತಿ ಹಬ್ಬಿಸಬೇಡಿ.. ನಮ್ಮ ವಿಜ್ಞಾನಿಗಳು ಮತ್ತು ಔಷಧ ತಯಾರಿಕಾ ಕೇಂದ್ರಗಳು ಎಲ್ಲಾ ಬಗೆಯ ವೈಜ್ಞಾನಿಕ ಪರೀಕ್ಷೆಗಳನ್ನು ಎದುರಿಸಿಯೇ ಕೊರೊನಾ ಲಸಿಕೆ ತಯಾರಿಸಿವೆ. ನಮ್ಮ ದೇಶದಲ್ಲಿ ತಯಾರಾಗಿರುವ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿರುತ್ತದೆ. ಈ ಕುರಿತು ಸಂದೇಹ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ವೈದ್ಯರು ಮತ್ತು ಫ್ರಂಟ್​ಲೈನ್​ ವಾರಿಯರ್ಸ್​ಗಳಿಗೆ ಕೊರೊನಾ ಲಸಿಕೆ ನೀಡಲಾಗುವುದು. ನಂತರ ಹಂತಹಂತವಾಗಿ ಅದನ್ನು ವಿಸ್ತರಣೆ ಮಾಡಲಿದ್ದೇವೆ. ಕಳೆದ ಒಂದು ವರ್ಷದಲ್ಲಿ ಕೊರೊನಾ ವೈರಾಣು ತಂದೊಡ್ಡಿದ ನೋವನ್ನು ಲಸಿಕೆ ಶಮನ ಮಾಡಲಿದೆ ಎಂಬ ಭರವಸೆ ಇದೆ ಎಂದು ಹೇಳಿದ್ದಾರೆ.

ನಿಮಗೆ ಸಿಗಲಿರುವ ಕೊರೊನಾ ಲಸಿಕೆಯ ದರ ಎಷ್ಟು ಗೊತ್ತಾ?

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ