AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ಆಹಾರ ಧಾನ್ಯ; ದೆಹಲಿ ಸರ್ಕಾರದಿಂದ ವಿವಿಧ ಪರಿಹಾರ ಯೋಜನೆ ಘೋಷಣೆ

ಕೊರೊನಾದಿಂದ ಮೃತರ ಕುಟುಂಬಕ್ಕೆ ಮಾಸಿಕ ₹2500 ನೀಡುವುದಾಗಿ ತಿಳಿಸಿದ್ದಾರೆ. ದೆಹಲಿಯಲ್ಲಿ 72 ಲಕ್ಷ ಜನರಿಗೆ ಹತ್ತು ಕೆಜಿ‌ ಆಹಾರ ಧಾನ್ಯ ನೀಡುವುದಾಗಿ ತಿಳಿಸಿದ್ದಾರೆ. ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ರೇಷನ್ ನೀಡಿಕೆ ಬಗ್ಗೆ ತಿಳಿಸಲಾಗಿದೆ.

ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ಆಹಾರ ಧಾನ್ಯ; ದೆಹಲಿ ಸರ್ಕಾರದಿಂದ ವಿವಿಧ ಪರಿಹಾರ ಯೋಜನೆ ಘೋಷಣೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Aug 21, 2021 | 10:14 AM

Share

ದೆಹಲಿ: ರಾಜ್ಯದಲ್ಲಿ ಕೊರೊನಾದಿಂದ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮೇ 18) ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ಕೊವಿಡ್-19 ಸೋಂಕಿನಿಂದ ಮೃತರಾದವರ ಕುಟುಂಬಕ್ಕೆ ತಲಾ ₹50 ಸಾವಿರ ನೀಡುವುದಾಗಿ ಕೇಜ್ರಿವಾಲ್ ಘೋಷಿಸಿದ್ದಾರೆ. ಜೊತೆಗೆ, ಕೊರೊನಾ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ದೆಹಲಿ ಸರ್ಕಾರದಿಂದ ನಾಲ್ಕು ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೊನಾದಿಂದ ಮೃತರ ಕುಟುಂಬಕ್ಕೆ ಮಾಸಿಕ ₹2500 ನೀಡುವುದಾಗಿ ತಿಳಿಸಿದ್ದಾರೆ. ದೆಹಲಿಯಲ್ಲಿ 72 ಲಕ್ಷ ಜನರಿಗೆ ಹತ್ತು ಕೆಜಿ‌ ಆಹಾರ ಧಾನ್ಯ ನೀಡುವುದಾಗಿ ತಿಳಿಸಿದ್ದಾರೆ. ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ರೇಷನ್ ನೀಡಿಕೆ ಬಗ್ಗೆ ತಿಳಿಸಲಾಗಿದೆ. ಅನಾಥ ಮಕ್ಕಳಿಗೆ 25 ವರ್ಷದವರೆಗೆ ಮಾಸಿಕ ₹2,500 ನೀಡುವುದಾಗಿ ಘೋಷಿಸಲಾಗಿದೆ. ಈ ಯೋಜನೆಗಳ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.

ಕೊರೊನಾ ಮೂರನೇ ಅಲೆ ಬಗ್ಗೆ ಕೇಜ್ರಿವಾಲ್ ಟ್ವೀಟ್ ಸಿಂಗಾಪುರದಲ್ಲಿ ಪತ್ತೆಯಾಗಿರುವ ರೂಪಾಂತರಿ ಕೊರೊನಾ ವೈರಾಣು ಭಾರತದ ಮೂರನೇ ಅಲೆಗೆ ಕಾರಣವಾಗಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮೇ 18) ತಿಳಿಸಿದ್ದಾರೆ. ಹೊಸ ಸ್ವರೂಪದ ಕೊವಿಡ್-19 ವೈರಾಣು ಮಕ್ಕಳಿಗೆ ಅತಿ ಕೆಟ್ಟ ಪರಿಣಾಮವನ್ನು ಉಂಟುಮಾಡಬಹುದು ಎಂದು ಕೇಜ್ರಿವಾಲ್ ಅಂದಾಜಿಸಿದ್ದಾರೆ. ಹಾಗಾಗಿ, ಸಿಂಗಾಪುರದೊಂದಿಗಿನ ಸೇವೆಗಳನ್ನು ಕೂಡಲೇ ಸ್ಥಗಿತಗೊಳಿಸಿ, ಮಕ್ಕಳಿಗೆ ಲಸಿಕೆ ನೀಡುವಂತೆ ಮೋದಿ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಸಿಂಗಾಪುರದ ಕಂಡುಬಂದಿರುವ ಕೊರೊನಾ ವೈರಾಣು ಮಕ್ಕಳಿಗೆ ಅಪಾರ ಹಾನಿ ಉಂಟುಮಾಡಬಹುದು ಎನ್ನಲಾಗುತ್ತಿದೆ. ಅದೇ ವೈರಾಣು ಕೊರೊನಾ ಮೂರನೇ ಅಲೆಯಾಗಿ ಕಂಡುಬರಬಹುದು. ಸಿಂಗಾಪುರದೊಂದಿಗಿನ ವಿಮಾನಯಾನವನ್ನು ಸ್ಥಗಿತಗೊಳಿಸಬೇಕು. ಮಕ್ಕಳಿಗೆ ಲಸಿಕೆ ಅಭಿಯಾನವನ್ನು ಆರಂಭಿಸಬೇಕು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದೆ. ಕಳೆದ ತಿಂಗಳು ಪ್ರತಿನಿತ್ಯ ದಾಖಲಾಗುತ್ತಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ 28,000ದ ವರೆಗೆ ಸಾಗಿತ್ತು. ಈಗ ಪ್ರತಿನಿತ್ಯ ಕಂಡುಬರುತ್ತಿರುವ ಪ್ರಕರಣಗಳ ಸಂಖ್ಯೆ 5,000ದಷ್ಟು ಮಾತ್ರ ಇದೆ.

ಇದನ್ನೂ ಓದಿ: ಸಿಂಗಾಪುರದಲ್ಲಿ ಪತ್ತೆಯಾದ ಕೊರೊನಾ ವೈರಾಣು ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು: ಅರವಿಂದ್ ಕೇಜ್ರಿವಾಲ್

ಭಾರತದಲ್ಲಿ ಕೊರೊನಾದ ಎರಡನೇ ಅಲೆ ಅಂತ್ಯ ಯಾವಾಗ?

Published On - 7:06 pm, Tue, 18 May 21

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು