AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ಆಹಾರ ಧಾನ್ಯ; ದೆಹಲಿ ಸರ್ಕಾರದಿಂದ ವಿವಿಧ ಪರಿಹಾರ ಯೋಜನೆ ಘೋಷಣೆ

ಕೊರೊನಾದಿಂದ ಮೃತರ ಕುಟುಂಬಕ್ಕೆ ಮಾಸಿಕ ₹2500 ನೀಡುವುದಾಗಿ ತಿಳಿಸಿದ್ದಾರೆ. ದೆಹಲಿಯಲ್ಲಿ 72 ಲಕ್ಷ ಜನರಿಗೆ ಹತ್ತು ಕೆಜಿ‌ ಆಹಾರ ಧಾನ್ಯ ನೀಡುವುದಾಗಿ ತಿಳಿಸಿದ್ದಾರೆ. ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ರೇಷನ್ ನೀಡಿಕೆ ಬಗ್ಗೆ ತಿಳಿಸಲಾಗಿದೆ.

ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ಆಹಾರ ಧಾನ್ಯ; ದೆಹಲಿ ಸರ್ಕಾರದಿಂದ ವಿವಿಧ ಪರಿಹಾರ ಯೋಜನೆ ಘೋಷಣೆ
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್
Follow us
TV9 Web
| Updated By: ganapathi bhat

Updated on:Aug 21, 2021 | 10:14 AM

ದೆಹಲಿ: ರಾಜ್ಯದಲ್ಲಿ ಕೊರೊನಾದಿಂದ ಮೃತರ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮೇ 18) ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ಕೊವಿಡ್-19 ಸೋಂಕಿನಿಂದ ಮೃತರಾದವರ ಕುಟುಂಬಕ್ಕೆ ತಲಾ ₹50 ಸಾವಿರ ನೀಡುವುದಾಗಿ ಕೇಜ್ರಿವಾಲ್ ಘೋಷಿಸಿದ್ದಾರೆ. ಜೊತೆಗೆ, ಕೊರೊನಾ ಕಾರಣದಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ದೆಹಲಿ ಸರ್ಕಾರದಿಂದ ನಾಲ್ಕು ಪ್ರಮುಖ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೊನಾದಿಂದ ಮೃತರ ಕುಟುಂಬಕ್ಕೆ ಮಾಸಿಕ ₹2500 ನೀಡುವುದಾಗಿ ತಿಳಿಸಿದ್ದಾರೆ. ದೆಹಲಿಯಲ್ಲಿ 72 ಲಕ್ಷ ಜನರಿಗೆ ಹತ್ತು ಕೆಜಿ‌ ಆಹಾರ ಧಾನ್ಯ ನೀಡುವುದಾಗಿ ತಿಳಿಸಿದ್ದಾರೆ. ರೇಷನ್ ಕಾರ್ಡ್ ಇಲ್ಲದವರಿಗೂ ಉಚಿತ ರೇಷನ್ ನೀಡಿಕೆ ಬಗ್ಗೆ ತಿಳಿಸಲಾಗಿದೆ. ಅನಾಥ ಮಕ್ಕಳಿಗೆ 25 ವರ್ಷದವರೆಗೆ ಮಾಸಿಕ ₹2,500 ನೀಡುವುದಾಗಿ ಘೋಷಿಸಲಾಗಿದೆ. ಈ ಯೋಜನೆಗಳ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.

ಕೊರೊನಾ ಮೂರನೇ ಅಲೆ ಬಗ್ಗೆ ಕೇಜ್ರಿವಾಲ್ ಟ್ವೀಟ್ ಸಿಂಗಾಪುರದಲ್ಲಿ ಪತ್ತೆಯಾಗಿರುವ ರೂಪಾಂತರಿ ಕೊರೊನಾ ವೈರಾಣು ಭಾರತದ ಮೂರನೇ ಅಲೆಗೆ ಕಾರಣವಾಗಬಹುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮೇ 18) ತಿಳಿಸಿದ್ದಾರೆ. ಹೊಸ ಸ್ವರೂಪದ ಕೊವಿಡ್-19 ವೈರಾಣು ಮಕ್ಕಳಿಗೆ ಅತಿ ಕೆಟ್ಟ ಪರಿಣಾಮವನ್ನು ಉಂಟುಮಾಡಬಹುದು ಎಂದು ಕೇಜ್ರಿವಾಲ್ ಅಂದಾಜಿಸಿದ್ದಾರೆ. ಹಾಗಾಗಿ, ಸಿಂಗಾಪುರದೊಂದಿಗಿನ ಸೇವೆಗಳನ್ನು ಕೂಡಲೇ ಸ್ಥಗಿತಗೊಳಿಸಿ, ಮಕ್ಕಳಿಗೆ ಲಸಿಕೆ ನೀಡುವಂತೆ ಮೋದಿ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

ಸಿಂಗಾಪುರದ ಕಂಡುಬಂದಿರುವ ಕೊರೊನಾ ವೈರಾಣು ಮಕ್ಕಳಿಗೆ ಅಪಾರ ಹಾನಿ ಉಂಟುಮಾಡಬಹುದು ಎನ್ನಲಾಗುತ್ತಿದೆ. ಅದೇ ವೈರಾಣು ಕೊರೊನಾ ಮೂರನೇ ಅಲೆಯಾಗಿ ಕಂಡುಬರಬಹುದು. ಸಿಂಗಾಪುರದೊಂದಿಗಿನ ವಿಮಾನಯಾನವನ್ನು ಸ್ಥಗಿತಗೊಳಿಸಬೇಕು. ಮಕ್ಕಳಿಗೆ ಲಸಿಕೆ ಅಭಿಯಾನವನ್ನು ಆರಂಭಿಸಬೇಕು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿ ಕೇಳಿಕೊಂಡಿದ್ದಾರೆ.

ದೆಹಲಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಇಳಿಕೆಯಾಗಿದೆ. ಕಳೆದ ತಿಂಗಳು ಪ್ರತಿನಿತ್ಯ ದಾಖಲಾಗುತ್ತಿದ್ದ ಕೊರೊನಾ ಪ್ರಕರಣಗಳ ಸಂಖ್ಯೆ 28,000ದ ವರೆಗೆ ಸಾಗಿತ್ತು. ಈಗ ಪ್ರತಿನಿತ್ಯ ಕಂಡುಬರುತ್ತಿರುವ ಪ್ರಕರಣಗಳ ಸಂಖ್ಯೆ 5,000ದಷ್ಟು ಮಾತ್ರ ಇದೆ.

ಇದನ್ನೂ ಓದಿ: ಸಿಂಗಾಪುರದಲ್ಲಿ ಪತ್ತೆಯಾದ ಕೊರೊನಾ ವೈರಾಣು ಭಾರತದಲ್ಲಿ ಮೂರನೇ ಅಲೆಗೆ ಕಾರಣವಾಗಬಹುದು: ಅರವಿಂದ್ ಕೇಜ್ರಿವಾಲ್

ಭಾರತದಲ್ಲಿ ಕೊರೊನಾದ ಎರಡನೇ ಅಲೆ ಅಂತ್ಯ ಯಾವಾಗ?

Published On - 7:06 pm, Tue, 18 May 21

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ