AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸರ್ಕಾರದಿಂದ ಆಕ್ಸಿಜನ್ ಕಾನ್ಸನ್​ಟ್ರೇಟರ್ ಬ್ಯಾಂಕ್ ಆರಂಭ; 2 ಗಂಟೆಯಲ್ಲಿ ಆಕ್ಸಿಜನ್ ಹೋಮ್ ಡೆಲಿವರಿ ಸೇವೆ

200 ಕಾನ್ಸನ್​ಟ್ರೇಟರ್​ಗಳ ಆಕ್ಸಿಜನ್ ಬ್ಯಾಂಕ್​ಗಳನ್ನು ಪ್ರತಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ. ಆಕ್ಸಿಜನ್ ಕಾನ್ಸನ್​ಟ್ರೇಟರ್​ಗಳನ್ನು ಹೋಮ್ ಐಸೋಲೇಷನ್​ನಲ್ಲಿ ಇರುವ ಕೊರೊನಾ ಸೋಂಕಿತರಿಗೆ 2 ಗಂಟೆಯ ಅವಧಿಯ ಒಳಗಾಗಿ ಒದಗಿಸಲಾಗುತ್ತದೆ.

ದೆಹಲಿ ಸರ್ಕಾರದಿಂದ ಆಕ್ಸಿಜನ್ ಕಾನ್ಸನ್​ಟ್ರೇಟರ್ ಬ್ಯಾಂಕ್ ಆರಂಭ; 2 ಗಂಟೆಯಲ್ಲಿ ಆಕ್ಸಿಜನ್ ಹೋಮ್ ಡೆಲಿವರಿ ಸೇವೆ
ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Aug 23, 2021 | 12:33 PM

Share

ದೆಹಲಿ: ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವುದು ಮತ್ತು ವೈದ್ಯಕೀಯ ಪರಿಕರಗಳ, ಆಮ್ಲಜನಕ ಪೂರೈಕೆಯ ಕೊರತೆ ಉಂಟಾಗಿರುವುದು ದೇಶದಲ್ಲಿ ದಿನನಿತ್ಯ ಸುದ್ದಿಯಾಗುತ್ತಿದೆ. ಅದನ್ನು ಸರಿದೂಗಿಸಲು ಸರ್ಕಾರ ವಿವಿಧ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ವೈದ್ಯಕೀಯ ಆಮ್ಲಜನಕ ಪೂರೈಕೆ ಸಮಸ್ಯೆ ಸರಿಪಡಿಸಲು ದೆಹಲಿ ಸರ್ಕಾರ ನೂತನ ಕ್ರಮ ಕೈಗೊಂಡಿದೆ. ದೆಹಲಿಯ ಕೊರೊನಾ ಸೋಂಕಿತರಿಗೆ ಸೂಕ್ತ ಸಮಯದಲ್ಲಿ ಆಕ್ಸಿಜನ್ ಪೂರೈಸುವ ಸಲುವಾಗಿ ಶನಿವಾರದಿಂದ ಆಕ್ಸಿಜನ್ ಕಾನ್ಸನ್​ಟ್ರೇಟರ್ ಬ್ಯಾಂಕ್ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ನೀಡಿದ್ದಾರೆ.

200 ಕಾನ್ಸನ್​ಟ್ರೇಟರ್​ಗಳ ಆಕ್ಸಿಜನ್ ಬ್ಯಾಂಕ್​ಗಳನ್ನು ಪ್ರತಿ ಜಿಲ್ಲೆಯಲ್ಲಿ ಸ್ಥಾಪಿಸಲಾಗಿದೆ. ಆಕ್ಸಿಜನ್ ಕಾನ್ಸನ್​ಟ್ರೇಟರ್​ಗಳನ್ನು ಹೋಮ್ ಐಸೋಲೇಷನ್​ನಲ್ಲಿ ಇರುವ ಕೊರೊನಾ ಸೋಂಕಿತರಿಗೆ 2 ಗಂಟೆಯ ಅವಧಿಯ ಒಳಗಾಗಿ ಒದಗಿಸಲಾಗುತ್ತದೆ ಎಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾಹಿತಿ ಹಂಚಿಕೊಂಡಿದ್ದಾರೆ.

ಕೊರೊನಾ ಸೋಂಕಿತರಿಗೆ ಕ್ಲಪ್ತ ಸಮಯದಲ್ಲಿ ಆಕ್ಸಿಜನ್ ಲಭ್ಯವಾಗುವುದು ಅನಿವಾರ್ಯ. ಹಾಗಾಗಿ ಈ ಯೋಜನೆ ಕಾರ್ಯರೂಪಕ್ಕೆ ತರಲಾಗಿದೆ. ಹೋಮ್ ಐಸೋಲೇಷನ್​ನಲ್ಲಿ ಇರುವ ಸೋಂಕಿತರಿಗೆ ಅಥವಾ ಕೊವಿಡ್​ನಿಂದ ಗುಣಮುಖರಾಗುವ ಹಂತದಲ್ಲಿ ಇರುವ ಸೋಂಕಿತರಿಗೆ ಈ ಆಕ್ಸಿಜನ್ ಕಾನ್ಸನ್​ಟ್ರೇಟರ್ ಬ್ಯಾಂಕ್ ಬಳಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಪ್ರತಿ ಜಿಲ್ಲೆಯಲ್ಲಿ 200 ಆಕ್ಸಿಜನ್ ಕಾನ್ಸನ್​ಟ್ರೇಟರ್ ಬ್ಯಾಂಕ್ ಸ್ಥಾಪಿಸಲಾಗುತ್ತದೆ. ಅಗತ್ಯವಿರುವವರಿಗೆ 2 ಗಂಟೆಯಲ್ಲಿ ಆಕ್ಸಿಜನ್ ಲಭ್ಯವಾಗಲಿದೆ. ಆಕ್ಸಿಜನ್ ನೀಡುವಾಗ ಡೆಲಿವರಿ ತಂಡದೊಂದಿಗೆ ಓರ್ವ ತಾಂತ್ರಿಕ ವ್ಯಕ್ತಿಯೂ ಜೊತೆಗಿರುತ್ತಾನೆ. ಆಕ್ಸಿಜನ್ ಸಿಲಿಂಡರ್​ನ್ನು ಹೇಗೆ ಬಳಸುವುದು ಎಂದು ಅವನು ತಿಳಿಸಿಕೊಡುತ್ತಾನೆ ಎಂದು ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲದೆ, ಕೊರೊನಾ ಸೋಂಕಿತರ ಜೊತೆಗೆ ವೈದ್ಯರು ಸಂಪರ್ಕದಲ್ಲಿರುತ್ತಾರೆ. ಅಗತ್ಯ ಬಿದ್ದರೆ ಸೋಂಕಿತರನ್ನು ಆಸ್ಪತ್ರೆಗೆ ಕೂಡ ದಾಖಲಿಸಲಾಗುತ್ತದೆ. ಆಕ್ಸಿಜನ್ ಕಾನ್ಸನ್​ಟ್ರೇಟರ್ ನೀಡುವ ಮೊದಲು ಆ ರೋಗಿಗೆ ನಿಜವಾಗಿಯೂ ಆಮ್ಲಜನಕದ ಅವಶ್ಯಕತೆ ಇದೆಯೇ ಎಂದು ವೈದ್ಯರು ಪರಿಶೀಲನೆ ನಡೆಸಲಿದ್ದಾರೆ. ಈ ಕಾರ್ಯದಲ್ಲಿ ಕೈಜೋಡಿಸಿರುವ ಓಲಾ ಫೌಂಡೇಷನ್ ಹಾಗೂ ಗೀವ್ ಇಂಡಿಯಾ ಸಂಸ್ಥೆಗೆ ಕೇಜ್ರಿವಾಲ್ ಕೃತಜ್ಞತೆಗಳನ್ನು ತಿಳಿಸಿದ್ದಾರೆ.

ದೆಹಲಿಯಲ್ಲಿ ಕೊರೊನಾ ಸೋಂಕು ಇಳಿಕೆಯಾಗಿರುವುದನ್ನು ಕೇಜ್ರಿವಾಲ್ ಹೇಳಿಕೊಂಡಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೇವಲ 6,500 ಹೊಸ ಕೊವಿಡ್ ಕೇಸ್​ಗಳು ವರದಿಯಾಗಿವೆ. ಕೊರೊನಾ ಪಾಸಿಟಿವಿಟಿ ರೇಟ್ ಶೇ. 11ಕ್ಕೆ ಇಳಿಕೆಯಾಗಿದೆ. 15 ದಿನಗಳಲ್ಲಿ 1,000 ಐಸಿಯು ಬೆಡ್​ಗಳನ್ನು ಹೆಚ್ಚಿಸಲಾಗಿದೆ. ವೈದ್ಯರು ಹಾಗೂ ಇಂಜಿನಿಯರ್​ಗಳಿಗೆ ಈ ಕಾರ್ಯಕ್ಕೆ ಧನ್ಯವಾದಗಳು ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಗಾಳಿಯಲ್ಲಿರುವ ಆಕ್ಸಿಜನ್ ಪಡೆದು ರೋಗಿಗೆ ಸರಬರಾಜು ಮಾಡಬಲ್ಲ ಜನರೇಟರ್ ಸದ್ಯವೇ ಲಭ್ಯವಾಗಲಿದೆ: ಸಚಿವ ಡಾ.ಸುಧಾಕರ್

ಆಕ್ಸಿಜನ್ ಕೊರತೆಯಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ನೀಡಿ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Published On - 4:15 pm, Sat, 15 May 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್